ದರ ಏರಿಕೆ, ಮುಂಗಾರು ಕೊರತೆ: ಅರಣ್ಯ ಕೃಷಿ ಚಟುವಟಿಕೆಗೆ ಭಾರೀ ಹಿನ್ನೆಡೆ
ಮಂಡ್ಯ, ಜುಲೈ 03: ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಹಿನ್ನಡೆ ಉಂಟಾಗಿರುವುದಲ್ಲದೆ, ಅರಣ್ಯ ಕೃಷಿಯೂ ಮಂಕಾಗಿದೆ. ಇದರ ಜೊತೆಗೆ ಅರಣ್ಯ ಇಲಾಖೆಯ ವಿತರಿಸಲಾಗುವ ಗಿಡಗಳ ಬೆಲೆಯೂ ಹೆಚ್ಚಳವಾಗಿರುವುದರಿಂದ ಗಿಡಗಳಿಗೆ ಬೇಡಿಕೆಯೇ ಇಲ್ಲದಂತಾಗಿದೆ.
ಕಳೆದ ವರ್ಷ ಕಡಿಮೆ ಬೆಲೆಗೆ ಸಿಗುತ್ತಿದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗಿಡಗಳನ್ನು ಕೊಂಡೊಯ್ಯುತ್ತಿದ್ದರು. ಇದರಿಂದ ಅರಣ್ಯ ಇಲಾಖೆಯಿಂದ ವಿತರಿಸಲಾಗುವ ಗಿಡಗಳಿಗೆ ಭಾರೀ ಬೇಡಿಕೆ ಎದುರಾಗಿತ್ತು. ಆದರೆ, ಈ ವರ್ಷ ಇಲಾಖೆ ಗಿಡಗಳಿಗೆ ಬೆಲೆಯನ್ನು ಹೆಚ್ಚಳ ಮಾಡಿರುವುದರಿಂದ ರೈತರು ಗಿಡಗಳನ್ನು ಕೊಳ್ಳುವುದಕ್ಕೆ ಆಸಕ್ತಿ ತೋರಿಸುತ್ತಿಲ್ಲ.

8*12 ಮಾದರಿಯ ಸಸಿಗಳ ಬೆಲೆ 3 ರೂಪಾಯಿಯಿಂದ 23 ರೂಪಾಯಿಗೆ ಹೆಚ್ಚಿಸಲಾಗಿದ್ದರೆ, 6*9 ಮಾದರಿಯ ಗಿಡಗಳ ಬೆಲೆ 1 ರೂಪಾಯಿನಿಂದ 6 ರೂಪಾಯಿಗೆ ಹೆಚ್ಚಿಸಲಾಗಿದೆ. ಇಲಾಖೆ ವತಿಯಿಂದ ಹೆಬ್ಬೇವು, ಮಹಾಘನಿ, ತೇಗ, ರಕ್ತಚಂದನ, ಶ್ರೀಗಂಧ, ಹುಲಚಿ ಸೇರಿದಂತೆ ಆರೇಳು ಮಾದರಿಯ ಗಿಡಗಳನ್ನು ಮಾರಾಟ ಮಾಡಲಾಗುತ್ತಿದೆ.
ಶೀಘ್ರ ಬೆಳವಣಿಗೆ ಕಾಣುವ ಹೆಬ್ಬೇವು, ಮಹಾಘನಿ, ತೇಗ ಮರಗಳಿಗೆ ಸಾಮಾನ್ಯವಾಗಿ ಹೆಚ್ಚಿನ ಬೇಡಿಕೆ ಇದೆ. ಕಳೆದ ವರ್ಷ ಮುಂಗಾರು ಪೂರ್ವ ಮಳೆಯಿಂದಲೇ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಕೊಂಡೊಯ್ದು ನೆಟ್ಟು ಬೆಳೆಸಿದ್ದರು. ಈ ವರ್ಷವೂ ರೈತರಿಂದ ಹೆಚ್ಚಿನ ಬೇಡಿಕೆ ಬರಬಹುದೆಂದು ನಿರೀಕ್ಷಿಸಿ ಅತಿ ಹೆಚ್ಚು ಸಂಖ್ಯೆಯಲ್ಲಿ ಗಿಡಗಳನ್ನು ಮಾರಾಟಕ್ಕೆ ಸಿದ್ಧಪಡಿಸಿಟ್ಟುಕೊಂಡಿದ್ದರೂ ಗಿಡಗಳನ್ನು ಕೊಳ್ಳುವುದಕ್ಕೆ ಮುಂದಾಗುತ್ತಿಲ್ಲ.
ಗಿಡಗಳ ಖರೀದಿಗೆ ರೈತರ ನಿರಾಸಕ್ತಿ
ರೈತರು ಇಲಾಖೆಗೆ ಬಂದು ಗಿಡಗಳ ಬೆಲೆಯನ್ನು ವಿಚಾರಿಸಿಕೊಂಡು ಹೋಗುತ್ತಿದ್ದಾರೆ. ಆದರೆ, ಖರೀದಿಗೆ ಒಲವು ತೋರುತ್ತಿಲ್ಲ. ಇದರಿಂದ ಇಲಾಖೆ ವತಿಯಿಂದ ಗಿಡಗಳು ಮಾರಾಟವಾಗದೆ ಇರುವ ಜಾಗದಲ್ಲೇ ಉಳಿಯುವಂತಾಗಿದೆ. ಮಂಡ್ಯ ತಾಲೂಕು ಒಂದರಲ್ಲೇ ಸುಮಾರು 55 ಸಾವಿರ ಸಸಿಗಳನ್ನು ರೆಡಿಮಾಡಿಟ್ಟುಕೊಂಡಿದ್ದರೂ ಕೊಳ್ಳಲು ರೈತರು ಬಾರದಂತಾಗಿದೆ.

ಮಂಡ್ಯ ತಾಲೂಕೊಂದರಲ್ಲೇ ಸುಮಾರು 250 ಮಂದಿ ಅರಣ್ಯ ಕೃಷಿಯನ್ನು ಅವಲಂಬಿಸಿದ್ದಾರೆ. ಹೆಬ್ಬೇವು, ಮಹಾಘನಿ, ಹುಲಚಿ ಸೇರಿದಂತೆ ಕೆಲವು ಮರಗಳ ಬೆಳವಣಿಗೆ ಶೀಘ್ರಗತಿಯಲ್ಲಿರುವುದರಿಂದ ಬಹುತೇಕರು ಇವುಗಳನ್ನು ಬೆಳೆಸುವುದಕ್ಕೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ನಗರ-ಪಟ್ಟಣ ಪ್ರದೇಶಗಳ ಜನರು ಖಾಲಿ ಇರುವ ಜಾಗಗಳಲ್ಲಿ ಗಿಡಗಳನ್ನು ತೆಗೆದುಕೊಂಡು ಹೋಗಿ ಬೆಳೆಸುತ್ತಿದ್ದರು. ಈ ಬಾರಿ ಮಳೆ ಕೊರತೆಯಿಂದಲೋ ಏನೋ ರೈತರು ಹಾಗೂ ಜನರು ಗಿಡಗಳನ್ನು ಕೊಳ್ಳುವುದಕ್ಕೆ ನಿರಾಸಕ್ತಿ ತೋರಿದ್ದಾರೆ.
ಕಳೆದ ನಾಲ್ಕೈದು ವರ್ಷಗಳಿಂದ ಅರಣ್ಯ ಇಲಾಖೆಯಿಂದ ಬಹಳಷ್ಟು ಸಂಖ್ಯೆಯ ರೈತರು ಹಾಗೂ ಜನರು ಗಿಡಗಳನ್ನು ಕೊಂಡು ನೆಟ್ಟು ಬೆಳೆಸುವುದಕ್ಕೆ ಆಸಕ್ತಿ ತೋರುತ್ತಿದ್ದರು. ಆದರೆ, ಈ ಬಾರಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಗಿಡಗಳನ್ನು ನೆಟ್ಟಿ ಬೆಳೆಸುವುದು ಕಷ್ಟವಾಗಬಹುದೆಂಬ ಭಯ ಸಹಜವಾಗಿ ಎಲ್ಲರನ್ನೂ ಕಾಡುತ್ತಿದೆ.
ಇಷ್ಟೊತ್ತಿಗೆ ಮಳೆ ಶುರುವಾಗಿದ್ದರೆ ಮಾರಾಟಕ್ಕೆ ಸಿದ್ಧವಿರುವ ಸಸಿಗಳಲ್ಲಿ ಬಹುತೇಕ ಮಾರಾಟವಾಗುತ್ತಿದ್ದವು. ಆದರೆ, ಮಳೆ ಸಮರ್ಪಕವಾಗಿ ಬಾರದಿರುವುದರಿಂದ ಅರಣ್ಯ ಕೃಷಿ ಮಾಡಲು ಮುಂದಾಗಿದ್ದವರು ಅದರಿಂದ ಹಿಂದೆ ಸರಿಯುತ್ತಿರುವ ಮಾತುಗಳು ಕೇಳಿಬರುತ್ತಿವೆ.
ಪ್ರಸಕ್ತ ಸಾಲಿನಿಂದ ಅರಣ್ಯ ಇಲಾಖೆ ವತಿಯಿಂದ ವಿತರಿಸಲಾಗುವ ಗಿಡಗಳ ಬೆಲೆಯನ್ನು ರಾಜ್ಯ ಸರ್ಕಾರ ತುಸು ಹೆಚ್ಚಳ ಮಾಡಿದೆ. ಏರಿಸಿರುವ ಬೆಲೆಯನ್ನು ಕೊಂಚ ಇಳಿಸಬೇಕೆಂಬ ಬೇಡಿಕೆಯೂ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಚಿಂತನೆ ನಡೆಸಿದೆ. ಒಮ್ಮೆ ದರ ಇಳಿಸಿದರೆ, ನಿರೀಕ್ಷೆಯಂತೆ ಮಳೆ ಸುರಿದರೆ ಗಿಡಗಳಿಗೆ ಬೇಡಿಕೆ ಸೃಷ್ಟಿಯಾಗಬಹುದೆಂಬ ನಿರೀಕ್ಷೆಯಲ್ಲಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications