ಸಾವಿರಾರು ರೈತರ ಕೋಟ್ಯಂತರ ಸಾಲ ತೀರಿಸಿದ ಅಮಿತಾಬ್ ಬಚ್ಚನ್
Recommended Video

ಮುಂಬೈ, ನವೆಂಬರ್ 21: ಖ್ಯಾತ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ನಿಜ ಜೀವನದಲ್ಲೂ ನಾಯಕರಾಗಿ ಮೆರೆದಿದ್ದಾರೆ. ಅವರು ಸಾವಿರಾರು ರೈತರ ಬೆಳೆ ಸಾಲವನ್ನು ತೀರಿಸಿದ್ದಾರೆ.
ಉತ್ತರ ಪ್ರದೇಶದ 1356 ರೈತರ ಸುಮಾರು 4.05 ಕೋಟಿ ರೂಪಾಯಿ ಮೊತ್ತದ ರೈತರ ಬೆಳೆ ಸಾಲವನ್ನು ನಟ ಅಮಿತಾಬ್ ಬಚ್ಚನ್ ತೀರಿಸಿದ್ದಾರೆ. ಸಾಲ ತೀರಿಸಿರುವ ಮಾಹಿತಿಯನ್ನು ಅವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ಕೆಲವು ರೈತರಿಗೆ ಮುಂಬೈಗೆ ಬರಲು ವ್ಯವಸ್ಥೆಯನ್ನೂ ಅಮಿತಾಬ್ ಅವರು ಮಾಡಿದ್ದು, ರೈತರೊಂದಿಗೆ ಅಮಿತಾಬ್ ಬಚ್ಚನ್ ಮಾತುಕತೆ ನಡೆಸಲಿದ್ದಾರೆ. ಈ ಮುಂಚೆಯೂ ಅಮಿತಾಬ್ ಬಚ್ಚನ್ ಅವರು ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿದ್ದರು.

ಟ್ವಿಟ್ಟರ್ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಮಿತಾಬ್ ಬಚ್ಚನ್ ಅವರು, ಈ ಕಾರ್ಯ ನನಗೆ ನೆಮ್ಮದಿ, ಸಂತಸ ತಂದಿದೆ. ಸಾಧನೆ ಮಾಡಿದ ಹೆಮ್ಮೆಯನ್ನು ಹುಟ್ಟುಹಾಕಿದೆ ಎಂದು ಬರೆದುಕೊಂಡಿದ್ದಾರೆ.

ಮಹಾರಾಷ್ಟ್ರ ರೈತರಿಗೆ ಸಹಾಯ
ಈ ಹಿಂದೆ ಅಮಿತಾಬ್ ಬಚ್ಚನ್ ಅವರು ಮಹಾರಾಷ್ಟ್ರ ರೈತರ ಸಾಲ ಮನ್ನಾ ಮಾಡಿದ್ದರು. ಸುಮಾರು 350 ಜನ ರೈತರ ಸಾಲವನ್ನು ಅವರು ಮನ್ನಾ ಮಾಡಿದ್ದರು. ಕೆಲವು ಗ್ರಾಮಗಳನ್ನೂ ಬಚ್ಚನ್ ಕುಟುಂಬ ದತ್ತು ತೆಗೆದುಕೊಂಡು ಸುದ್ದಿಯಾಗಿತ್ತು.

ನಾನಾ ಪಟೇಕರ್ ಕೂಡ ಸಹಾಯ
ಈ ಹಿಂದೆ ಬಾಲಿವುಡ್ ನಟ ನಾನಾ ಪಟೇಕರ್ ಸಹ ರೈತರಿಗೆ ನೆರವಾಗಿದ್ದರು. ಬರದಿಂದ ಒದ್ದಾಡಿದ್ದ ಮಹಾರಾಷ್ಟ್ರ ರೈತರಿಗೆ ಆರ್ಥಿಕ ಸಹಾಯ ಮಾಡಿದ್ದರು ನಾನಾ.

ಅಕ್ಷಯ್ ಕುಮಾರ್ ಸಹಾಯ
ನಟ ಅಕ್ಷಯ್ ಕುಮಾರ್ ಅವರು ಮಹಾರಾಷ್ಟ್ರದ ರೈತರು ನೀರಿಲ್ಲದೆ ವಿಷಮ ಪರಿಸ್ಥಿತಿಯಲ್ಲಿದ್ದಾಗ ಸುಮಾರು ಒಂದು ಕೋಟಿ ಹಣವನ್ನು ನೀರಿಗಾಗಿ ಅಕ್ಷಯ್ ಕುಮಾರ್ ಅವರು ನೀಡಿದ್ದರು.

ಅಮೀರ್ ಖಾನ್ ರ ವಾಟರ್ ಕಪ್
ಅಮೀರ್ ಖಾನ್ ಅವರ ವಾಟರ್ ಕಪ್ ನೀರು ಸಂರಕ್ಷಿಸುವ ಅತ್ಯುತ್ತಮ ಕಾರ್ಯಕ್ರಮವಾಗಿ ಉತ್ತರ ಭಾರತದಲ್ಲಿ ಪ್ರಚಲಿತ. ಕೆಲವು ಹಳ್ಳಿಗಳನ್ನು ಗುರುತಿಸಿ ಅಲ್ಲಿ ನೀರನ್ನು ಉಳಿಸುವ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಯಾರು ಹೆಚ್ಚು ನೀರು ಉಳಿಸಿ ಸದ್ಬಳಕೆ ಮಾಡುತ್ತಾರೆಯೋ ಆ ಗ್ರಾಮಕ್ಕೆ ವಾಟರ್ ಕಪ್ ಸಿಗುತ್ತದೆ. ಇದು ಮಹಾರಾಷ್ಟ್ರದ ಬರಪೀಡಿತ ಹಳ್ಳಿಗಳ ಚಿತ್ರಣವನ್ನೇ ಬದಲಾಯಿಸಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications