ಮೋದಿ ಸರ್ಕಾರದ ಗಮನ ಉದ್ಯಮಿಗಳ ಮೇಲೆ, ರೈತರ ಮೇಲಲ್ಲ: ಅಣ್ಣಾ

ಹಲ್ದ್ವಾನಿ(ಉತ್ತರಾಖಂಡ್), ಮಾರ್ಚ್ 06: 'ಮೋದಿ ಸರ್ಕಾರ ಕೇವಲ ಉದ್ಯಮಿಗಳಿಗೆ ಮಾತ್ರ ಸ್ಪಂದಿಸುತ್ತೆ, ಅದು ರೈತರ ಬಗ್ಗೆ ಕಾಳಜಿ ಹೊಂದಿಲ್ಲ' ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ.

ಉತ್ತರಾಖಂಡದ ಹಲ್ದಾನಿ ಎಂಬಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರ ಜಿಎಸ್ಟಿ(ಸರಕು ಮತ್ತು ಸೇವಾ ತೆರಿಗೆ) ಮತ್ತು ಅಪನಗದೀಕರಣದ ಬಗ್ಗೆ ಗಮನ ಹರಿಸುಸತ್ತದೆ, ಆದರೆ ರೈತರ ಬಗ್ಗೆ ಸೊಲ್ಲೆತ್ತುವುದಿಲ್ಲ. ಅದು ರೈತರ ಬಗ್ಗೆ ಕಾಳಜಿ ತೋರಿಸುತ್ತಿಲ್ಲ, ಕೇವಲ ಉದ್ಯಮಿಗಳತ್ತ ಅದರ ಗಮನ. ಏಕೆ ರೈತರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ? ಎಷ್ಟು ಉದ್ಯಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ..? ಎಂದು ಅವರು ಪ್ರಶ್ನಿಸಿದ್ದಾರೆ.

Anna Hazare blames Modi government for its negligence towards farmers

ಕೇಂದ್ರ ಸರ್ಕಾರದ ರೈತವಿರೋಧಿ ಆಡಳಿತದ ವಿರುದ್ಧ ಮಾರ್ಚ್ 23 ರಿಂದ ದೆಹಲಿಯಲ್ಲಿ ಅಣ್ಣಾ ಹಜಾರೆ ಪ್ರತಿಭಟನೆ ನಡೆಸಲಿದ್ದಾರೆ. ಗಾಂಧಿವಾದಿ ಅಣ್ಣಾ ಹಜಾರೆ, ತಮ್ಮ ಜೊತೆ ಪ್ರತಿಭಟನೆಯಲ್ಲಿ ಕೈಜೋಡಿಸುವವರು ನಂತರ ಯಾವುದೇ ಕಾರಣಕ್ಕೂ ರಾಜಕೀಯ ಸೇರುವಂತಿಲ್ಲ ಎಂದು ಮೊದಲೇ ಅಫಿಡವಿಟ್ ಗೆ ಸಹಿ ಮಾಡಬೇಕಾಗಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+