Get Updates
Get notified of breaking news, exclusive insights, and must-see stories!

ಜನಲೋಕಪಾಲ್ ಗಾಗಿ ಮತ್ತೆ ಬೀದಿಗಿಳಿಯಲಿದ್ದಾರೆ ಅಣ್ಣಾ

ಮುಂಬೈ, ನವೆಂಬರ್ 29: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಮತ್ತೆ ಬೀದಿಗಿಳಿಯಲಿದ್ದಾರೆ. ಮುಂದಿನ ವರ್ಷದ ಮಾರ್ಚ್ 23ರಿಂದ ಜನಲೋಕಪಾಲ್ ಜಾರಿ ಮತ್ತು ರೈತರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಅವರು ನವದೆಹಲಿಯಲ್ಲಿ ಸತ್ಯಾಗ್ರಹ ಆರಂಭಿಸಲಿದ್ದಾರೆ.

ತಮ್ಮ ಸತ್ಯಾಗ್ರಹ ಆರಂಭಿಸಲು ಮಾರ್ಚ್ 23ರ ಹುತಾತ್ಮರ ದಿನವನ್ನು ಅವರು ಆಯ್ಕೆ ಮಾಡಿಕೊಂಡಿದ್ದಾರೆ.

ಅಹಮದ್ ನಗರ ಜಿಲ್ಲೆಯ ತಮ್ಮ ಗ್ರಾಮ ರಳೇಗಣ್ ಸಿದ್ಧಿಯಲ್ಲಿ ಸೋಮವಾರ ಮಾತನಾಡಿರುವ ಅಣ್ಣಾ ಹಜಾರೆ, "ಜನಲೋಕಪಾಲ್, ರೈತರ ಸಮಸ್ಯೆ ಮತ್ತು ಚುನಾವಣಾ ಸುಧಾರಣೆಗಾಗಿ ಸತ್ಯಾಗ್ರಹ ನಡೆಸಲಾಗುವುದು," ಎಂದು ಘೋಷಿಸಿದ್ದಾರೆ.

Anna Hazare to launch Jan Lokpal agitation from March 23, 2018

ತಾನು ಈ ಸಂಬಂಧ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದೆ. ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ.

ಕಳೆದ 22 ವರ್ಷಗಳಲ್ಲಿ 12 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಅವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಗಳ ಸಂಖ್ಯೆ ನನಗೆ ಬೇಕು ಎಂದು ಅಣ್ಣಾ ಹೇಳಿದ್ದಾರೆ.

ಜನಲೋಕಪಾಲ್ ಕಾಯಿದೆ ಜಾರಿಗೆ ಒತ್ತಾಯಿಸಿ 2011ರಲ್ಲಿ ಅಣ್ಣಾ ಹಜಾರೆ 12 ದಿನಗಳ ಉಪಪಾಸ ಸತ್ಯಾಗ್ರಹ ನಡೆಸಿದ್ದರು. ಆರಂಭದಲ್ಲಿ ಅಂದಿನ ಯುಪಿಎ ಸರಕಾರ ಜನಲೋಕಪಾಲ್ ಜಾರಿಗೆ ಒಪ್ಪಿಕೊಂಡಿತ್ತು. ಆದರೆ ನಂತರ ಜಾರಿಗೆ ಬಂದಿರಲಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+