ಇದು ನನ್ನ ಕೊನೇ ಪ್ರತಿಭಟನೆ; ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಅಣ್ಣಾ ಹಜಾರೆ
ಮುಂಬೈ, ಡಿಸೆಂಬರ್ 28: ರೈತರ ಪರವಾಗಿ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೇ ಇದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಎಚ್ಚರಿಕೆ ನೀಡಿದ್ದು, ಇದೇ ನನ್ನ ಕೊನೆಯ ಪ್ರತಿಭಟನೆ ಆಗುತ್ತದೆ ಎಂದಿದ್ದಾರೆ.
ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ಸಿದ್ದಿ ಗ್ರಾಮದಲ್ಲಿ ಮಾತನಾಡಿದ ಅಣ್ಣಾ ಹಜಾರೆ, "ಕಳೆದ ಮೂರು ವರ್ಷಗಳಿಂದಲೂ ರೈತರ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದೇನೆ. ಆದರೆ ಈ ಸಮಸ್ಯೆಗಳಿಗೆ ಸರ್ಕಾರ ಏನೂ ಪರಿಹಾರ ನೀಡಿಲ್ಲ. ಮುಂದಿನ ಜನವರಿ ಕೊನೆಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ. ಇದೇ ನನ್ನ ಕೊನೆ ಪ್ರತಿಭಟನೆ ಆಗುತ್ತದೆ" ಎಂದಿದ್ದಾರೆ. ಮುಂದೆ ಓದಿ...

"ಖಾಲಿ ಭರವಸೆಗಳು ಬೇಡ"
"ಬರೀ ಖಾಲಿ ಭರವಸೆಗಳನ್ನು ಸರ್ಕಾರ ನೀಡುತ್ತಿದೆ. ಸರ್ಕಾರದ ಮೇಲೆ ಇನ್ನು ಯಾವುದೇ ನಂಬಿಕೆ ಉಳಿದಿಲ್ಲ. ನನ್ನ ಬೇಡಿಕೆಗಳ ಕುರಿತು ಏನು ಕ್ರಮ ತೆಗೆದುಕೊಳ್ಳುತ್ತದೆ ನೋಡೋಣ. ಸರ್ಕಾರ ಒಂದು ತಿಂಗಳ ಅವಧಿ ಸಮಯ ಕೇಳಿದೆ. ನಾನೂ ಜನವರಿ ಕೊನೆಯವರೆಗೆ ಸಮಯ ನೀಡಿದ್ದೇನೆ. ನನ್ನ ಬೇಡಿಕೆಗಳನ್ನು ಸರ್ಕಾರ ಪೂರೈಸದೇ ಇದ್ದರೆ, ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇನೆ. ಸರ್ಕಾರದ ವಿರುದ್ಧ ಇದು ನನ್ನ ಕೊನೆ ಪ್ರತಿಭಟನೆ" ಎಂದಿದ್ದಾರೆ.

ಕೃಷಿ ಸಚಿವರಿಗೆ ಪತ್ರ ಬರೆದಿದ್ದ ಹಜಾರೆ
ಎಂಎಸ್ ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳು ಹಾಗೂ ಕೃಷಿ ವೆಚ್ಚ ಹಾಗೂ ಬೆಲೆ ಆಯೋಗಕ್ಕೆ (ಸಿಎಸಿಪಿ) ಸ್ವಾಯತ್ತತೆ ನೀಡುವ ನನ್ನ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾ ಹಜಾರೆ ಡಿಸೆಂಬರ್ 14ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಗೆ ಪತ್ರ ಬರೆದಿದ್ದರು.

ಕೃಷಿ ಕಾಯ್ದೆ ವಿರುದ್ಧ ರೈತರಿಗೆ ಬೆಂಬಲ
ಈಚೆಗೆ ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವ್ ಬಗಾಡೆ ಅಣ್ಣಾ ಹಜಾರೆಯವರನ್ನು ಭೇಟಿಯಾಗಿ, ಕೇಂದ್ರದಿಂದ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳ ಕುರಿತು ಅವರಿಗೆ ವಿವರಣೆ ನೀಡಿದ್ದರು. ಆದರೆ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಕರೆ ನೀಡಿದ್ದ ಭಾರತ್ ಬಂದ್ ಗೆ ಬೆಂಬಲ ನೀಡಿ ಡಿಸೆಂಬರ್ 8ರಂದು ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆ
ಕೇಂದ್ರ ಸರ್ಕಾರ ಪರಿಚಯಿಸಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ದೆಹಲಿ ಗಡಿಗಳಲ್ಲಿ ತಿಂಗಳಿನಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ ನಲ್ಲಿ ಕೃಷಿ ಕಾಯ್ದೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಈ ಕಾಯ್ದೆಗಳು ರೈತರಿಗೆ ಮಾರಕವಾಗಿವೆ, ಇದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ರೈತರು ನವೆಂಬರ್ 26ರಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications