ಜೂನ್ 2 ರಿಂದ ಲಾಲ್ಬಾಗ್ನಲ್ಲಿ ವಾರ್ಷಿಕ ಮಾವು ಮೇಳ: ವಿವರಗಳು
ಬೆಂಗಳೂರು, ಜೂನ್. 01: ಈಗ ಎಲ್ಲಿ ನೋಡಿದರೂ ಮಾವಿನ ಹಣ್ಣುಗಳದ್ದೆ ದರ್ಬಾರ್. ಇದೇ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆಯು ಲಾಲ್ಬಾಗ್ ಗಾರ್ಡನ್ನಲ್ಲಿ ವಾರ್ಷಿಕವಾಗಿ ಆಯೋಜಿಸುವ ಬಹು ನಿರೀಕ್ಷಿತ ಮಾವಿನ ಮೇಳವು ಜೂನ್ 2 ರಿಂದ ಪ್ರಾರಂಭವಾಗಲಿದ್ದು, ಜೂನ್ 11 ರವರೆಗೆ ಒಂಬತ್ತು ದಿನಗಳ ಕಾಲ ನಡೆಯಲಿದೆ.
ಪ್ರತಿ ವರ್ಷ ರೈತರಿಗಾಗಿ ಸುಮಾರು 100 ರಿಂದ 120 ಮಳಿಗೆಗಳನ್ನು ಸ್ಥಾಪಿಸಲಾಗಿದ್ದರೂ, ಈ ವರ್ಷದ ಮಾವು ಮೇಳದಲ್ಲಿ 40 ಮಳಿಗೆಗಳನ್ನು ಮಾತ್ರ ಹಾಕಲಾಗುತ್ತದೆ. ಈ ವರ್ಷ ವಿಧಾನಸಭೆ ಚುನಾವಣೆ ಇದ್ದ ಕಾರಣ ಮೇಳವೇ ವಿಳಂಬವಾಗಿದ್ದರೂ, ಮಳಿಗೆಗಳ ಸಂಖ್ಯೆ ಕಡಿಮೆಯಾಗಿರುವುದು ರೈತರನ್ನು ಮತ್ತಷ್ಟು ಕಂಗಾಲಾಗಿಸಿದೆ. ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ (ಕೆಎಸ್ಎಂಡಿಎಂಸಿಎಲ್) ಹಣದ ಕೊರತೆಯ ಕಾರಣ ಮಳಿಗೆಗಳ ಸಂಖ್ಯೆಯನ್ನು ಕಡಿತಗೊಳಿಸಬೇಕಾಯಿತು ಎಂದು ಹೇಳಿದೆ.

"ಹೊಸದಾಗಿ ನೇಮಕಗೊಂಡಿರುವ ತೋಟಗಾರಿಕಾ ಸಚಿವರನ್ನು ಭೇಟಿಯಾಗಿ ಈ ಸಮಸ್ಯೆಯ ಬಗ್ಗೆ ತಿಳಿಸಿ ಮಾವು ರೈತರ ಹಿತಕ್ಕೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದೇವೆ. ಶೀಘ್ರದಲ್ಲೇ ಸಭೆ ನಡೆಸಿ ನಮ್ಮ ಸಮಸ್ಯೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ" ಎಂದು ಕನಕಪುರ ಮತ್ತು ಚನ್ನಪಟ್ಟಣ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ಧರಣೀಶ್ ಕುಮಾರ್ ತಿಳಿಸಿದ್ದಾರೆ.
ಆದರೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಣದ ಕೊರತೆ ಇಲ್ಲ. ಚುನಾವಣೆ ಇದ್ದುದರಿಂದ ಮೇಳದ ವೇಳಾಪಟ್ಟಿಯಲ್ಲಿ ವಿಳಂಬವಾಗಿದೆ. ಮೇಳಕ್ಕೆ ಅಗತ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಒದಗಿಸುವಂತೆ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾವು ಹೂ ಬಿಡುವ ಸಮಯದಲ್ಲಿ ಮಳೆಯಿಂದಾಗಿ ಮಾವಿನ ಮರಗಳಲ್ಲಿ ಪೌಷ್ಟಿಕಾಂಶದ ಅಸಮತೋಲನ ಉಂಟಾಗಿ ಇಳುವರಿ ಮೇಲೆ ಪರಿಣಾಮ ಬೀರಿದೆ. ಕೋಲಾರದ ಪ್ರಮುಖ ಮಾವು ಬೆಳೆಯುವ ಪ್ರದೇಶಗಳಲ್ಲಿ ಸಂಭವಿಸಿದ ಆಲಿಕಲ್ಲು ಮಳೆಯಿಂದಾಗಿ ಹಿಂದಿನ ಇಳುವರಿಗಿಂತ 50% ರಷ್ಟು ಮಾವಿನ ಬೆಳೆ ಕಡಿಮೆಯಾಗಿದೆ. ಈ ವರ್ಷ ಮಳಿಗೆಗಳ ಸಂಖ್ಯೆ ಕಡಿಮೆಯಾಗಲು ಮಾವು ಸಿಗದಿರುವುದು ಕೂಡ ಒಂದು ಕಾರಣ ಎಂದು ಕೆಲವು ರೈತರು ಹೇಳಿದ್ದಾರೆ.
ಲಾಲ್ಬಾಗ್ ಮಾವು ಮೇಳದಲ್ಲಿ ಬಾದಾಮಿ (ಅಲ್ಫಾನ್ಸೋ), ರಸಪುರಿ, ಸಕ್ಕರಗುತ್ತಿ, ಸೆಂಧೂರ, ಮಲ್ಲಿಕಾ, ಮಾಲ್ಗೋವಾ ಮತ್ತು ಇಮಾಮ್ ಪಸಂದ್ ನಂತಹ ಮಾವಿನ ವಿವಿಧ ತಳಿಗಳು ಮೇಳದಲ್ಲಿ ಲಭ್ಯವಿದ್ದು, ಮಾವು ಪ್ರಿಯರು ನೇರವಾಗಿ ರೈತರಿಂದ ಹಣ್ಣುಗಳನ್ನು ಖರೀದಿಸಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications