ಅಡಿಕೆ ಬೆಳೆಯಲ್ಲಿ ಹಿಂಗಾರ ಒಣಗುವಿಕೆ; ಹತೋಟಿ ಕ್ರಮಗಳು
ಶಿವಮೊಗ್ಗ, ನವೆಂಬರ್ 09 : ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರಮುಖ ಜಿಲ್ಲೆಗಳಲ್ಲಿ ಶಿವಮೊಗ್ಗ ಸಹ ಒಂದು. ಜಿಲ್ಲೆಯ ಕೆಲವು ಭಾಗಗಳಲ್ಲಿ ಅಡಿಕೆ ಬೆಳೆಯಲ್ಲಿ ಹಿಂಗಾರ ಒಣಗುವ ರೋಗ ಹಾಗೂ ಹಿಂಗಾರ ತಿನ್ನುವ ಹುಳುವಿನ ಬಾಧೆ ಕಂಡು ಬಂದಿದೆ.
ಈ ಹಿನ್ನಲೆಯಲ್ಲಿ ತೋಟಗಾರಿಕಾ ಇಲಾಖೆ ಅಧಿಕಾರಿಗಳು ರೈತರಿಗೆ ಸಲಹೆಗಳನ್ನು ನೀಡಿದ್ದಾರೆ. ರೈತರು ಈ ಬಾಧೆಯ ನಿರ್ವಹಣೆಗೆ ಈಗಾಗಲೇ ಔಷಧ ಸಿಂಪರಣೆ ಮಾಡುತ್ತಿದ್ದಾರೆ. ಹಿಂಗಾರಕ್ಕೆ ರಾಸಾಯನಿಕಯುಕ್ತ ಔಷಧ ಸಿಂಪರಣೆ ಮಾಡುವುದರಿಂದ ಹೂವಿನ ಮಕರಂದ ಹೀರಲು ತೋಟಗಳಿಗೆ ಬಂದು ಹೋಗುವ ಜೇನು ನೊಣಗಳಿಗೆ ಹಾನಿಯಾಗಲಿದೆ.
ರೈತರು ಸಿಂಪರಣೆ ಕೈಗೊಳ್ಳುವ ಮೊದಲು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಅಥವಾ ವಿಜ್ಞಾನಿಗಳನ್ನು ಸಂಪರ್ಕಿಸಿ ಔಷಧಗಳ ಬಗ್ಗೆ ಸೂಕ್ತ ಮಾಹಿತಿ ಹಾಗೂ ಶಿಫಾರಸ್ಸು ಪಡೆಯಬೇಕು, ಬಳಿಕ ಹತೋಟಿ ಕ್ರಮ ತೆಗೆದುಕೊಳ್ಳಬೇಕು.

ಖಾಸಗಿ ವ್ಯಕ್ತಿಗಳು/ ಕಂಪನಿ/ಏಜೆನ್ಸಿ ಶಿಪಾರಸ್ಸು ಮಾಡಿದ ಔಷಧ ಬಳಕೆಗೆ ಮೊದಲು ಸೂಕ್ತವಾಗಿ ಪರಿಶೀಲಿಸಿದ ನಂತರವೇ ಸಿಂಪರಣೆ ಮಾಡಬೇಕು ಎಂದು ರೈತರಿಗೆ ಕರೆ ನೀಡಲಾಗಿದೆ.
ಅಡಿಕೆ ಹಿಂಗಾರ ಕೆರೆದು ತಿನ್ನುವ ಹುಳು ಹಿಂಗಾರದಲ್ಲಿ ಗೂಡು ಕಟ್ಟಿಕೊಂಡು ಜೀವಿಸುತ್ತವೆ. ಈ ಗೂಡಿನಲ್ಲಿ ಹುಳುವಿನ ಹಿಕ್ಕೆ ಹಾಗೂ ಹಿಂಗಾರದಿಂದ ಕೆರೆದು ಉಳಿದಿರುವ ಭಾಗಗಳು ಅಲ್ಲಿಯೇ ಶೇಖರಣೆಯಾಗುತ್ತದೆ. ಇದರಿಂದ ಹಿಂಗಾರದ ಎಸಳುಗಳು ಒಣಗಲು ಆರಂಭವಾಗಿ ಹಿಂಗಾರ ಕಂದುಬಣ್ಣಕ್ಕೆ ತಿರುಗಿ ಉದುರಲು ಆರಂಭವಾಗುತ್ತದೆ
ಹತೋಟಿ ಕ್ರಮಗಳು; ರೋಗ ನಿಯಂತ್ರಣಕ್ಕಾಗಿ ಕಾಪರ್ ಆಕ್ಸಿ ಕ್ಲೋರೈಡ್ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಹಿಂಗಾರದ ಒಳಗಡೆ ಹುಳುಗಳು ಹಾನಿಯುಂಟು ಮಾಡಿದಲ್ಲಿ ಕೀಟದ ನಿರ್ವಹಣೆಗೆ ಶೇ. 1 ರ ಬೇವಿನೆಣ್ಣೆ 2 ಮಿ.ಲೀ. 1 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು.
ತೋಟದಲ್ಲಿ ಜೇನು ಸಾಕಾಣಿಕೆ ಮಾಡುವ ರೈತರು, ಜೇನುಪೆಟ್ಟಿಗೆಗಳನ್ನು ಔಷಧ ಸಿಂಪರಣೆಯಾದ ಸಮಯದಲ್ಲಿ ಸುಮಾರು 3 ರಿಂದ 4 ದಿವಸಗಳ ಕಾಲ ಬೇರೆ ಪ್ರದೇಶಕ್ಕೆ ಸ್ಥಳಾಂತರ ಮಾಡುವುದು ಉತ್ತಮ.
ಔಷಧ ಸಿಂಪರಣೆಯಾದ ತೋಟದಲ್ಲಿ ಸಾಧ್ಯವಾದಷ್ಟು ಜೇನುಪೆಟ್ಟಿಗೆ ಸುತ್ತ ಪರದೆಯನ್ನು ಹಾಕಿ ಜೇನು ನೊಣಕ್ಕೆ ಕೃತಕ ಆಹಾರವನ್ನು ಒದಗಿಸುವುದು ಸೂಕ್ತ. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಭೇಟಿ ನೀಡಿ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications