ಕಣ್ಮನ ಸೆಳೆಯುತ್ತಿದೆ ರಾಮನಗರದ ಫಲಪುಷ್ಪ ಪ್ರದರ್ಶನ
ರಾಮನಗರ, ಜನವರಿ 27: ವಿವಿಧ ಬಗೆಯ ಹೂಗಳಿಂದ ನಿರ್ಮಾಣವಾಗಿರುವ ಮಾಗಡಿಯ ಶ್ರೀರಂಗನಾಥಸ್ವಾಮಿ, ಬಣ್ಣಬಣ್ಣದ ಕ್ಯಾಪ್ಸಿಕಮ್ ಗಳಿಂದ ಸಿದ್ದವಾಗಿರೋ ಜಿರಾಫೆ, ದೇಶ-ವಿದೇಶದ ತರಕಾರಿ, ಹೂಗಳು. ಇದು ರಾಮನಗರ ಫಲಪುಷ್ಪ ಪ್ರದರ್ಶನದ ಹೈಲೆಟ್ಸ್.
ಮಾಗಡಿ ಶ್ರೀರಂಗನಾಥಸ್ವಾಮಿ ದೇವಾಲಯದ ಪ್ರತಿಕೃತಿಯು ರೇಷ್ಮೆ ನಾಡಿನ ಫಲಪುಷ್ಪ ಪ್ರದರ್ಶನದಲ್ಲಿ ಸಾರ್ವಜನಿಕರ ಮನಸೆಳೆಯುತ್ತದೆ. ಹೂ, ಹಣ್ಣುಗಳಿಂದ ಇಡೀ ಮೈದಾನ ಕಂಗೊಳಿಸುತ್ತಿದೆ. ಈ ಸೊಬಗನ್ನು ಕಣ್ತುಂಬಿಕೊಳ್ಳಲು ನೂರಾರು ಜನರು ಆಗಮಿಸುತ್ತಿದ್ದಾರೆ.
ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ 71 ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ತೋಟಗಾರಿಕೆ, ಕೃಷಿ ಇಲಾಖೆಯ ವತಿಯಿಂದ ಮೂರು ದಿನಗಳ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಪ್ರತಿವರ್ಷದಂತೆ ಈ ಬಾರಿಯೂ ವಿಶೇಷವಾಗಿ ಆಯೋಜನೆ ಮಾಡಲಾಗಿತ್ತು.

ಈ ಫಲಪುಷ್ಪ ಪ್ರದರ್ಶನದಲ್ಲಿ ಸರಿಸುಮಾರು 65 ಕ್ಕೂ ಹೆಚ್ಚು ಮಳಿಗೆಗಳಿದ್ದು, ವಿವಿಧ ಜಾತಿಯ ಬಣ್ಣಬಣ್ಣದ ಹೂಗಳಿಂದ ಮಾಗಡಿ ಶ್ರೀರಂಗನಾಥಸ್ವಾಮಿ ದೇವಸ್ಥಾನದ ಆಕೃತಿಯನ್ನ ಅಲಂಕಾರಗೊಳಿಸಲಾಗಿದೆ.

ಯುವಕ, ಯುವತಿಯರು ಸೇರಿದಂತೆ ಹಲವಾರು ಪ್ರಗತಿಪರ ಚಿಂತಕರು ಫಲಪುಷ್ಟ ಪ್ರದರ್ಶನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಾ.ಅಶ್ವಥ್ ನಾರಾಯಣ್ ಉದ್ಘಾಟನೆ ಮಾಡಿದರು.

26 ರಿಂದ 28 ರವರೆಗೆ ಮೂರು ದಿನಗಳ ಕಾಲ ಈ ಫಲಪುಷ್ಟ ಪ್ರದರ್ಶನ ನಡೆಯಲಿದ್ದು, ಕೃಷಿ ಮತ್ತು ತೋಟಗಾರಿಕೆಯ ಬಗ್ಗೆ ತಿಳಿದುಕೊಳ್ಳಲು ಮಾಹಿತಿ ಕೇಂದ್ರಗಳಿವೆ. ಇಲ್ಲಿ ನಾಟಿ ಕೋಳಿ, ಹಳ್ಳಿಕಾರ್ ಹೋರಿ, ಟಗರುಗಳು ಇರುವುದರಿಂದ ಜಿಲ್ಲೆಯ ಜನರು ಆಗಮಿಸಿ ಕಣ್ತುಂಬಿಕೊಳ್ಳಿ ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications