ನೆರೆ ನೆರವಿಗೆ ಮುಂದಾದ ಬ್ಯಾಂಕ್ ಗಳು

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನೆರೆ ಪೀಡಿತ ಪರಿಹಾರ ಕ್ರಮಗಳ ಬಗ್ಗೆ ನಡೆದ ವಿಶೇಷ ಸಭೆಯಲ್ಲಿ ಈ ಮಹತ್ವದ ತೀರ್ಮಾನಕ್ಕೆ ಬರಲಾಗಿದೆ. ಜೊತೆಗೆ ಎಲ್ಲಾ ಬ್ಯಾಂಕ್ ಗಳ ನೌಕರರು ತಮ್ಮ ಒಂದು ದಿನದ ವೇತನವನ್ನು ದೇಣಿಗೆ ನೀಡಲು ಸಮ್ಮತಿಸಿದ್ದಾರೆ. ರೈತರು ಮತ್ತೆ ಕೃಷಿ ಕಾರ್ಯ ಆರಂಭಿಸಲು ತಕ್ಷಣ ಅವರಿಗೆ ಬಿತ್ತನೆ ಬೀಜ, ಗೊಬ್ಬರದ ಜೊತೆಗೆ ಕೃಷಿ ಕೆಲಸಗಳಿಗೆ ಅಗತ್ಯ ಸಾಲ ಒದಗಿಸಬೇಕಾಗಿದೆ. ಈ ಹಿಂದೆ ಪಡೆದಿದ್ದ ಸಾಲವನ್ನು ಸದ್ಯಕ್ಕೆ ವಸೂಲಿ ಮಾಡಬಾರದು ಎಂಬ ಮುಖ್ಯಮಂತ್ರಿಗಳ ಮನವಿಗೆ ಎಲ್ಲ ಬ್ಯಾಂಕುಗಳು ಒಪ್ಪಿವೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅಲ್ಪಾವಧಿ ಸಾಲವನ್ನು ಮಧ್ಯಮಾವಧಿ, ಮಧ್ಯಮಾವಧಿ ಸಾಲವನ್ನು ದೀರ್ಘಾವಧಿ ಸಾಲಗಳನ್ನಾಗಿ ಪರಿವರ್ತಿಸಲು ಬ್ಯಾಂಕ್ ಗಳು ಸಮ್ಮತಿಸಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಲ ಪಾವತಿಗೆ ಒತ್ತಾಯಿಸದಿರಲು ಒಪ್ಪಿಕೊಂಡಿವೆ ಎಂದು ಅವರು ವಿವರಿಸಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications