ಮಲ್ಟಿ ಟ್ರೀ ಬೈಕ್ ಆವಿಷ್ಕರಿಸಿದ ಬಂಟ್ವಾಳ ಕೃಷಿಕ, ವಿಶೇಷತೆ ಏನು?, ಇಲ್ಲಿದೆ ವಿವರ
ಬಂಟ್ವಾಳ ತಾಲೂಕಿನ ಕೋಮಲೆ ಗಣಪತಿ ಭಟ್ ಎನ್ನುವವರು ಮಲ್ಟಿ ಟ್ರೀ ಬೈಕ್ ಆವಿಷ್ಕರಿಸಿದ್ದಾರೆ. ಹಾಗಾದರೆ ಈ ಯಂತ್ರದ ವಿಶೇಷತೆ ಏನೆಂದು ಇಲ್ಲಿ ತಿಳಿಯಿರಿ.
ಮಂಗಳೂರಿ, ಫೆಬ್ರವರಿ, 27: ನಗರಗಳಲ್ಲಿ ಆಳಾಗಿರುವ ಬದಲು ಊರಿಗೆ ಹೋಗಿ ಕೃಷಿ ಮಾಡಿ ದೊರೆಯಾಗಿ ಬದುಕುತ್ತೇನೆ ಅನ್ನುವುದು ತುಂಬಾ ಜನರ ಅಭಿಪ್ರಾಯವಾಗಿರುತ್ತದೆ. ಆದರೆ ಕೆಲವರು ಕೃಷಿ ಮಾಡಲು ಕೂಲಿಯಾಳುಗಳ ಸಮಸ್ಯಯಿಂದ ಮತ್ತೆ ನಗರದ ಕಡೆ ಮುಖ ಮಾಡುತ್ತಾರೆ. ಈ ಸಮಸ್ಯೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಾಮಾನ್ಯ ಕೃಷಿಕ ಬಗೆಹರಿಸಿದ್ದು, ಇದೀಗ ಈ ಕೃಷಿಕ ತಯಾರಿಸಿದ ಮರವೇರುವ ಯಂತ್ರಕ್ಕೆ ಎಲ್ಲೆಡೆ ಬೇಡಿಕೆ ಬಂದಿದೆ.
ಯಂತ್ರದ ಮೇಲೆಯೇ ಕೂತು ಮರವೇರುತ್ತಿರುವ ಈ ಕೃಷಿಕನನ್ನು ಒಮ್ಮೆ ನೋಡಿದರೆ ನೀವು ಆಶ್ಚರ್ಯಗೊಳ್ಳುವುದಲ್ಲಿ ಯಾವುದೇ ಅನುಮಾನವಿಲ್ಲ. ಈ ಯಂತ್ರವನ್ನು ಆವಿಷ್ಕರಿಸಿದವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಮಲೆ ಗಣಪತಿ ಭಟ್ ಎನ್ನುವವರಾಗಿದ್ದಾರೆ. ಇವರು ತಯಾರಿಸಿದ ಈ ಯಂತ್ರಕ್ಕೆ ಇದೀಗ ದಕ್ಷಿಣ ಭಾರತದಾದ್ಯಂತ ಬೇಡಿಕೆ ಹೆಚ್ಚಾಗಿದೆ.

ಮರವೇರುವ ಯಂತ್ರಕ್ಕೆ ಭಾರಿ ಬೇಡಿಕೆ
ಗಣಪತಿ ಭಟ್ ಮೊದಲು ಅಡಿಕೆ ಮರವನ್ನು ಏರುವ ಯಂತ್ರವನ್ನು ಆವಿಷ್ಕರಿಸಿದ್ದು, ಈಗ ಎಲ್ಲಾ ಮರವೇರುವ ವಿನೂತನ ಯಂತ್ರ ಅವಿಷ್ಕಾರ ಮಾಡಿದ್ದಾರೆ. ಈ ಯಂತ್ರದ ಮೂಲಕ ಯಾವುದೇ ಅಡೆತಡೆಯಿಲ್ಲದೇ ಮರದ ತುದಿಯನ್ನು ತಲುಪಬಹುದಾಗಿದೆ. ಈ ಯಂತ್ರ ಸುರಕ್ಷತೆಯಲ್ಲಿ ಅತ್ಯುತ್ತಮವಾಗಿದೆ. ತೆಂಗು, ಅಡಿಕೆ, ಸಿಲ್ವರ್ ಮರ, ಮಾವಿನ ಮರ, ಹಲಸಿನ ಮರ ಸೇರಿದಂತೆ ಎಲ್ಲಾ ಮರಗಳನ್ನು ಈ ಟ್ರೀ ಬೈಕ್ ಬಳಸಿ ಏರಬಹುದಾಗಿದೆ.
ಮಲ್ಟಿ ಟ್ರೀ ಬೈಕ್ನ ತೂಕದ ವಿವರ
ಮರದಲ್ಲೇ ಯಂತ್ರ ಸುತ್ತಲೂ ತಿರುಗಲಿದೆ. ಈ ಯಂತ್ರಕ್ಕೆ ಒಂದು ಲೀಟರ್ ಪೆಟ್ರೋಲ್ ಹಾಕಿದರೆ 80 ಮರಗಳನ್ನು ಏರಬಹುದಾಗಿದೆ. 45 ಕೆಜಿ ಭಾರವಿರುವ ಟ್ರೀ ಬೈಕ್ ಅನ್ನು ಟ್ರಾಲಿ ಮೂಲಕ ಆರಾಮಾಗಿ ಕೊಂಡುಹೋಗಬಹುದಾಗಿದೆ. ತೆಂಗಿನ ಮರದಲ್ಲಿ ಈ ಯಂತ್ರದ ಮೇಲೆ ನಿಂತು ಕಾಯಿಗಳನ್ನು ಕೀಳಬಹುದಾಗಿದೆ. ಸುರಕ್ಷತಾ ಗುಣಮಟ್ಟವನ್ನು ಹೊಂದಿರುವ ಈ ಯಂತ್ರದ ಪರೀಕ್ಷಾ ಪ್ರಯತ್ನವನ್ನು ಸ್ವತಃ ಮರದ ಮೇಲೆ ನಿಂತು ಗಣಪತಿ ಭಟ್ ಅವರೇ ಮಾಡಿ ತೋರಿಸಿದ್ದಾರೆ.
ಮಲ್ಟಿ ಟ್ರೀ ಬೈಕ್ನ ದರದ ವಿವರ
ಈ ಟ್ರೀ ಬೈಕ್ಗೆ ಈಗ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಬೇಡಿಕೆ ಬಂದಿದೆ. ಇದನ್ನು ಬಳಸಿ 5 -15 ಇಂಚು ದಪ್ಪವಿರುವ ಮರವನ್ನು ಏರಬಹುದಾಗಿದ್ದು, ಸದ್ಯ ಈ ಯಂತ್ರಕ್ಕೆ ಕರ್ನಾಟಕ ಮಾರುಕಟ್ಟೆಯಲ್ಲಿ 1,55,000 ರೂಪಾಯಿ ದರವಿದೆ.

ಕರ್ನಾಟಕ ಸರ್ಕಾರ ಈ ಯಂತ್ರ ಖರೀದಿಸುವ ರೈತರಿಗೆ 43 ಸಾವಿರ ರೂಪಾಯಿ ಸಬ್ಸಿಡಿಯನ್ನು ನೀಡಲಿದೆ. ಹೀಗಾಗಿ ಈ ಯಂತ್ರ 1,12,000 ರೂಪಾಯಿ ಕೊಟ್ಟರೆ ಕೃಷಿಕರ ಕೈ ಸೇರಲಿದೆ. ಈ ಯಂತ್ರ ಬಳಸುವುದರಿಂದ ಕೆಲಸವೂ ಬೇಗ ಮುಗಿಯುತ್ತದೆ ಎಂದು ಮಾರ್ಕೆಟಿಂಗ್ ಮಾಡುತ್ತಿರುವ ಇಂಜಿನಿಯರ್ ಶರ್ವಿನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಕೂಲಿಕಾರರ ಸಮಸ್ಯೆ ಎಂದು ಕೃಷಿಯಿಂದ ಹಿಂಜರಿಯುವ ಯುವ ಕೃಷಿಕರಿಗೆ ಈ ಟ್ರೀ ಬೈಕ್ ನೆರವಾಗಲಿದೆ. ಒಬ್ಬ ಸಹಾಯಕನೊಂದಿಗೆ ಇಡೀ ತೋಟದ ಕೆಲಸವನ್ನು ಮಾಲೀಕನೇ ಮಾಡಬಹುದು ಅನ್ನುವುದು ಟ್ರೀ ಬೈಕ್ ಬಳಕೆದಾರರ ಅಭಿಪ್ರಯವಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications