ಮಲ್ಟಿ ಟ್ರೀ ಬೈಕ್ ಆವಿಷ್ಕರಿಸಿದ ಬಂಟ್ವಾಳ ಕೃಷಿಕ, ವಿಶೇಷತೆ ಏನು?, ಇಲ್ಲಿದೆ ವಿವರ
ಬಂಟ್ವಾಳ ತಾಲೂಕಿನ ಕೋಮಲೆ ಗಣಪತಿ ಭಟ್ ಎನ್ನುವವರು ಮಲ್ಟಿ ಟ್ರೀ ಬೈಕ್ ಆವಿಷ್ಕರಿಸಿದ್ದಾರೆ. ಹಾಗಾದರೆ ಈ ಯಂತ್ರದ ವಿಶೇಷತೆ ಏನೆಂದು ಇಲ್ಲಿ ತಿಳಿಯಿರಿ.
ಮಂಗಳೂರಿ, ಫೆಬ್ರವರಿ, 27: ನಗರಗಳಲ್ಲಿ ಆಳಾಗಿರುವ ಬದಲು ಊರಿಗೆ ಹೋಗಿ ಕೃಷಿ ಮಾಡಿ ದೊರೆಯಾಗಿ ಬದುಕುತ್ತೇನೆ ಅನ್ನುವುದು ತುಂಬಾ ಜನರ ಅಭಿಪ್ರಾಯವಾಗಿರುತ್ತದೆ. ಆದರೆ ಕೆಲವರು ಕೃಷಿ ಮಾಡಲು ಕೂಲಿಯಾಳುಗಳ ಸಮಸ್ಯಯಿಂದ ಮತ್ತೆ ನಗರದ ಕಡೆ ಮುಖ ಮಾಡುತ್ತಾರೆ. ಈ ಸಮಸ್ಯೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಾಮಾನ್ಯ ಕೃಷಿಕ ಬಗೆಹರಿಸಿದ್ದು, ಇದೀಗ ಈ ಕೃಷಿಕ ತಯಾರಿಸಿದ ಮರವೇರುವ ಯಂತ್ರಕ್ಕೆ ಎಲ್ಲೆಡೆ ಬೇಡಿಕೆ ಬಂದಿದೆ.
ಯಂತ್ರದ ಮೇಲೆಯೇ ಕೂತು ಮರವೇರುತ್ತಿರುವ ಈ ಕೃಷಿಕನನ್ನು ಒಮ್ಮೆ ನೋಡಿದರೆ ನೀವು ಆಶ್ಚರ್ಯಗೊಳ್ಳುವುದಲ್ಲಿ ಯಾವುದೇ ಅನುಮಾನವಿಲ್ಲ. ಈ ಯಂತ್ರವನ್ನು ಆವಿಷ್ಕರಿಸಿದವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಮಲೆ ಗಣಪತಿ ಭಟ್ ಎನ್ನುವವರಾಗಿದ್ದಾರೆ. ಇವರು ತಯಾರಿಸಿದ ಈ ಯಂತ್ರಕ್ಕೆ ಇದೀಗ ದಕ್ಷಿಣ ಭಾರತದಾದ್ಯಂತ ಬೇಡಿಕೆ ಹೆಚ್ಚಾಗಿದೆ.

ಮರವೇರುವ ಯಂತ್ರಕ್ಕೆ ಭಾರಿ ಬೇಡಿಕೆ
ಗಣಪತಿ ಭಟ್ ಮೊದಲು ಅಡಿಕೆ ಮರವನ್ನು ಏರುವ ಯಂತ್ರವನ್ನು ಆವಿಷ್ಕರಿಸಿದ್ದು, ಈಗ ಎಲ್ಲಾ ಮರವೇರುವ ವಿನೂತನ ಯಂತ್ರ ಅವಿಷ್ಕಾರ ಮಾಡಿದ್ದಾರೆ. ಈ ಯಂತ್ರದ ಮೂಲಕ ಯಾವುದೇ ಅಡೆತಡೆಯಿಲ್ಲದೇ ಮರದ ತುದಿಯನ್ನು ತಲುಪಬಹುದಾಗಿದೆ. ಈ ಯಂತ್ರ ಸುರಕ್ಷತೆಯಲ್ಲಿ ಅತ್ಯುತ್ತಮವಾಗಿದೆ. ತೆಂಗು, ಅಡಿಕೆ, ಸಿಲ್ವರ್ ಮರ, ಮಾವಿನ ಮರ, ಹಲಸಿನ ಮರ ಸೇರಿದಂತೆ ಎಲ್ಲಾ ಮರಗಳನ್ನು ಈ ಟ್ರೀ ಬೈಕ್ ಬಳಸಿ ಏರಬಹುದಾಗಿದೆ.
ಮಲ್ಟಿ ಟ್ರೀ ಬೈಕ್ನ ತೂಕದ ವಿವರ
ಮರದಲ್ಲೇ ಯಂತ್ರ ಸುತ್ತಲೂ ತಿರುಗಲಿದೆ. ಈ ಯಂತ್ರಕ್ಕೆ ಒಂದು ಲೀಟರ್ ಪೆಟ್ರೋಲ್ ಹಾಕಿದರೆ 80 ಮರಗಳನ್ನು ಏರಬಹುದಾಗಿದೆ. 45 ಕೆಜಿ ಭಾರವಿರುವ ಟ್ರೀ ಬೈಕ್ ಅನ್ನು ಟ್ರಾಲಿ ಮೂಲಕ ಆರಾಮಾಗಿ ಕೊಂಡುಹೋಗಬಹುದಾಗಿದೆ. ತೆಂಗಿನ ಮರದಲ್ಲಿ ಈ ಯಂತ್ರದ ಮೇಲೆ ನಿಂತು ಕಾಯಿಗಳನ್ನು ಕೀಳಬಹುದಾಗಿದೆ. ಸುರಕ್ಷತಾ ಗುಣಮಟ್ಟವನ್ನು ಹೊಂದಿರುವ ಈ ಯಂತ್ರದ ಪರೀಕ್ಷಾ ಪ್ರಯತ್ನವನ್ನು ಸ್ವತಃ ಮರದ ಮೇಲೆ ನಿಂತು ಗಣಪತಿ ಭಟ್ ಅವರೇ ಮಾಡಿ ತೋರಿಸಿದ್ದಾರೆ.
ಮಲ್ಟಿ ಟ್ರೀ ಬೈಕ್ನ ದರದ ವಿವರ
ಈ ಟ್ರೀ ಬೈಕ್ಗೆ ಈಗ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಬೇಡಿಕೆ ಬಂದಿದೆ. ಇದನ್ನು ಬಳಸಿ 5 -15 ಇಂಚು ದಪ್ಪವಿರುವ ಮರವನ್ನು ಏರಬಹುದಾಗಿದ್ದು, ಸದ್ಯ ಈ ಯಂತ್ರಕ್ಕೆ ಕರ್ನಾಟಕ ಮಾರುಕಟ್ಟೆಯಲ್ಲಿ 1,55,000 ರೂಪಾಯಿ ದರವಿದೆ.

ಕರ್ನಾಟಕ ಸರ್ಕಾರ ಈ ಯಂತ್ರ ಖರೀದಿಸುವ ರೈತರಿಗೆ 43 ಸಾವಿರ ರೂಪಾಯಿ ಸಬ್ಸಿಡಿಯನ್ನು ನೀಡಲಿದೆ. ಹೀಗಾಗಿ ಈ ಯಂತ್ರ 1,12,000 ರೂಪಾಯಿ ಕೊಟ್ಟರೆ ಕೃಷಿಕರ ಕೈ ಸೇರಲಿದೆ. ಈ ಯಂತ್ರ ಬಳಸುವುದರಿಂದ ಕೆಲಸವೂ ಬೇಗ ಮುಗಿಯುತ್ತದೆ ಎಂದು ಮಾರ್ಕೆಟಿಂಗ್ ಮಾಡುತ್ತಿರುವ ಇಂಜಿನಿಯರ್ ಶರ್ವಿನ್ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಕೂಲಿಕಾರರ ಸಮಸ್ಯೆ ಎಂದು ಕೃಷಿಯಿಂದ ಹಿಂಜರಿಯುವ ಯುವ ಕೃಷಿಕರಿಗೆ ಈ ಟ್ರೀ ಬೈಕ್ ನೆರವಾಗಲಿದೆ. ಒಬ್ಬ ಸಹಾಯಕನೊಂದಿಗೆ ಇಡೀ ತೋಟದ ಕೆಲಸವನ್ನು ಮಾಲೀಕನೇ ಮಾಡಬಹುದು ಅನ್ನುವುದು ಟ್ರೀ ಬೈಕ್ ಬಳಕೆದಾರರ ಅಭಿಪ್ರಯವಾಗಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications