ರೈತರಿಗೆ ಶೀಘ್ರವೇ ಬೆಳೆವಿಮೆ ಪರಿಹಾರ ನೀಡಲು ಬಿ.ಸಿ.ಪಾಟೀಲ್ ಸೂಚನೆ
ಬೆಂಗಳೂರು, ನವೆಂಬರ್ 12: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಪರಿಹಾರ ಸಲ್ಲಿಸಿರುವ ರೈತರಿಗೆ ಪ್ರಸಕ್ತ 2022-2023 ಸಾಲಿನ ಬೆಳೆವಿಮೆ ಪರಿಹಾರವನ್ನು ಶೀಘ್ರವೇ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.
ಬೆಳೆವಿಮೆ ಪರಿಹಾರ ಇತ್ಯರ್ಥ ಕುರಿತು ಅಧಿಕಾರಿಗಳ ಜೊತೆಗೆ ಗುರುವಾರ ಸಭೆ ನಡೆಸಿದ ಬಿ.ಸಿ.ಪಾಟೀಲ್ ಪ್ರಸಕ್ತ ಸಾಲಿನಲ್ಲಿ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥಪಡಿಸುವ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈಗಾಗಲೇ ಬೆಳೆ ವಿಮೆ ಮಾಡಿಸಿರುವ ರೈತರು ಪೂರ್ವ ಮುಂಗಾರು ಹಂಗಾಮಿನ ಪರಿಹಾರಕ್ಕಾಗಿ ಕಾದು ಕುಳಿತಿದ್ದಾರೆ. ಪರಿಹಾರ ಕ್ರಮದ ಸಲುವಾಗಿ ವಿಮಾ ಕಂಪನಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿರಿ ಎಂದು ಸಚಿವರು ತಾಕೀತು ಮಾಡಿದರು.
ಪರಿಹಾರ ಪಡೆಯುವ ರೈತರ ಪೈಕಿ ಆಧಾರ್ ಕಾರ್ಡ್ ಲಿಂಕ್ ಆಗದವರು ಹೆಚ್ಚಿದ್ದಾರೆ. ಕೂಡಲೇ ರೈತರು ತಮ್ಮ ಆಧಾರ್ ಕಾರ್ಡ್ ಸಂಖ್ಯೆ ಬೆಳೆವಿಮೆಗೆ ಲಿಂಕ್ ಆಗಿದೆಯೆ ಇಲ್ಲವೆಂದು ಪರಿಶೀಲಿಸಿಕೊಳ್ಳಬೇಕು. ಆಧಾರ್ ಇನ್ನಿತರ ತಿದ್ದುಪಡಿ ಇದ್ದರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ಜೊತೆಗೆ ಸಲ್ಲಿಸಲಾದ ದಾಖಲೆಗಳು, ಪಾಲಿಸಬೇಕಾದ ನಿಯಮಗಳು ಸರಿಯಾಗಿವೆಯೇ ಎಂದು ರೈತರು ಗಮನವಹಿಸಬೇಕು ಎಂದರು.

ವಿಮಾ ಕಂಪನಿಗಳಿಗೆ ಸಚಿವರ ಸಲಹೆ
ವಿಮಾ ಕಂಪನಿಗಳು ನಿಯಮಬದ್ಧವಾಗಿ ಬೆಳೆವಿಮೆ ಪರಿಹಾರ ಒದಗಿಸುವಲ್ಲಿ ನ್ಯಾಯಯುತವಾಗಿ ಕೆಲಸ ಮಾಡಬೇಕು. ದಾಖಲೆ, ಆಧಾರಗಳಲ್ಲಿ ಲೋಪದೋಷಗಳು ಕಂಡು ಬಂದರೆ ಸುಮ್ಮನಿರದೇ ಕೂಡಲೇ ಅಧಿಕಾರಿಗಳು, ರೈತರ ಬಳಿಕ ಅಗತ್ಯ ಮಾಹಿತಿ ಪಡೆದು ಸರಿಪಡಿಸಿಕೊಳ್ಳಬೇಕು. ರೈತರಿಗೆ ಬೆಳೆ ವಿಮೆ ಪರಿಹಾರ ನೀಡುವಲ್ಲಿ ಕೃಷಿ ಇಲಾಖೆ ಜೊತೆಗೆ ಕಂಪನಿಗಳು ಕೈ ಜೋಡಿಸುವಂತೆ ಬಿ.ಸಿ.ಪಾಟೀಲ್ ಸೂಚಿಸಿದರು.

ಶೀಘ್ರವೇ ಪರಿಹಾರ ಕೊಡುವ ಭರವಸೆ
ರೈತರು ಈ ವರ್ಷ ಬೆಳೆ ವಿಮೆ ಪರಿಹಾರ ಯಾವಾಗ ಸಿಗಲಿದೆ? ಎಂದು ಕಾತರದಿಂದ ಕಾಯುತ್ತಿದ್ದಾರೆ. ಈ ಬಗ್ಗೆ ಅವರಿಗೆ ಉತ್ತರ ಸಿಕ್ಕಿಲ್ಲ. ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಕಳಸದ, ಆಯುಕ್ತ ಶರತ್ ಪಿ., ಬೆಳೆ ವಿಮೆ ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ ಸೇರಿದಂತೆ ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಶೀಘ್ರವೇ ಬೆಳೆ ವಿಮೆ ನೀಡುವುದಾಗಿ ಸಚಿವರಿಗೆ ಭರವಸೆ ನೀಡಿದರು.

ಬೆಳೆವಿಮೆಯ ಮೊತ್ತವೆಷ್ಟು?, ಪರಿಶೀಲನೆ ಹೇಗೆ?
ರೈತರು ಎಷ್ಟು ಬೆಳೆ ವಿಮೆ ಬರುತ್ತದೆ ಎಂದು ಯಾವಾಗ ಬರುತ್ತದೆ ಎಂದು ತಿಳಿದುಕೊಳ್ಳುವ ಕುತೂಹಲ ಹೊಂದಿದ್ದಾರೆ. ನಿಮಗೆ ಬೆಳೆವಿಮೆ ಎಷ್ಟು ಬರಲಿದೆ ಎಂದು ತಿಳಿಯಲು ಸರ್ಕಾರಕದ ಅಧಿಕೃತ ವೆಬ್ಸೈಟ್ https://www.samrakshane.karnataka.gov.in/ ಗೆ ಭೇಟಿ ನೀಡಿ ವರ್ಷ ಆಯ್ಕೆ, ಬೆಳೆಯ ಋತು ಮೇಲೆ ಕ್ಲಿಕ್ ಮಾಡಬೆಕು. ನಂತರ ಫಾರ್ಮರ್ ಕಾಲಂನಲ್ಲಿನ ಬೆಳೆ ವಿಮೆ ಪರಿಹಾರದ ವಿವರದ ಮೇಲೆ ಟ್ಯಾಪ್ ಮಾಡಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು, ಹೂಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿಕೊಂಡು ಸರ್ವೇ ನಂಬರ್ ನಮೂದಿಸಬೇಕು.

ಮಾಹಿತಿಗೆ ಸಹಾಯವಾಣಿಗೆ ಕರೆ ಮಾಡಿ
ನಂತರ ನಿಮ್ಮ ಸರ್ವೇನಂಬರ್ ಎಲ್ಲ ಹಿಸ್ಸಾ ನಂಬರ್ಗಳು ಬರುತ್ತವೆ. ನಿಮ್ಮ ಸರ್ವೇ ನಂಬರ್ ಮೇಲೆ ಕ್ಲಿಕ್ ಮಾಡಿದರೆ ನೀವು ಬೆಳೆವಿಮೆ ಮಾಡಿಸಿದ್ದರೆ ಬಗ್ಗೆ ಮಾಹಿತಿ ಲಭ್ಯವಾಗುತ್ತದೆ. ನಂತರ ನೀವು ಅಪಿಕೇಷನ್ ನಂಬರ್ ಮೇಲೆ ಕ್ಲಿಕ್ ಮಾಡಿದರೆ ನೀವು ಎಷ್ಟು ಬೆಳೆವಿಮೆ ಕಟ್ಟಿದ್ದೀರಿ, ಅದಕ್ಕೆ ಎಷ್ಟು ಬೆಳೆ ವಿಮೆ ಬರುತ್ತದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.
ರೈತರು ಹೆಚ್ಚಿನ ಮಾಹಿತಿಗೆ ಯೋಜನೆಯ ವೆಬ್ಸೈಟ್ https://pmfby.gov.in ಭೇಟಿ ಕೊಡಿ. ಬೆಳೆ ವಿಮೆ ಮಾಹಿತಿ ಪಡೆಯಲು ಹಾಗೂ ನಿಮ್ಮ ಜಿಲ್ಲೆಯ ಬೆಳೆ ವಿಮಾ ಕಂಪನಿಯ ಸಿಬ್ಬಂದಿ ಮೊಬೈಲ್ ನಂಬರ್ ಬೇಕಿದ್ದಲ್ಲಿ ಸಹಾಯವಾಣಿ 1800180151ಗೆ ಕರೆ ಮಾಡಬಹುದು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications