ಪಿಎಂ ಕಿಸಾನ್ 13ನೇ ಕಂತು: ಫಲಾನುಭವಿಗಳು ಕೂಡಲೇ ಇಕೈವೈಸಿ ನವೀಕರಣ ಮಾಡಿಕೊಳ್ಳಿ
ಬೆಂಗಳೂರು, ನವೆಂಬರ್ 29: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 13ನೇ ಕಂತು ಪಡೆಯಲಿರುವ ಅರ್ಹ ಈ ಕೂಡಲೇ ಇಕೆವೈಸಿ (eKYC) ನವೀಕರಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಕರ್ನಾಟಕ ಸೇರಿದಂತೆ ದೇಶದ ಅರ್ಹ ಫಲಾನುಭವಿ ರೈತರು ಕೇಂದ್ರ ಸರ್ಕಾರ ನೀಡುವ 2,000 ಕೃಷಿ ಸಹಾಯಧನ 12ನೇ ಕಂತನ್ನು ಈಗಾಗಲೇ ಪಡೆದಿದ್ದಾರೆ. ಅದೇ ರೀತಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 13ನೇ ಕಂತಿನ 2000ರೂ.ಪಡೆಯಲು ಇಕೆವೈಸಿ (eKYC) ನವೀಕರಣ ಮಾಡಿಸಬೇಕು.
ಯೋಜನೆಯ ಫಲಾನುಭವಿಗಳಿಗೆ ಡಿಸೆಂಬರ್ ಒಳಗೆ ಅಂದರೆ ನವೆಂಬರ್ 30 ಕೊನೆಯ ದಿನದೊಳಗೆ ಇಕೆವೈಸಿ ಭರ್ತಿ ಮಾಡಬೇಕು. ಇಲ್ಲವಾದರೆ 13ನೇ ಕಂತಿನ ಹಣ ಸಿಗುವುದಿಲ್ಲ ಎಂದು ತಿಳಿಸಲಾಗಿದೆ. ಆದ್ದರಿಂದ ಅರ್ಹ ರೈತರು ಮೊದಲು ಯೋಜನೆಗೆ ಅಗತ್ಯವಿರುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಫಲಾನುಭವಿಗಳ ಅರ್ಜಿ ನಮೂನೆಯು ಅಪೂರ್ಣವಾಗಿದ್ದರೆ, ಅವರು ಪ್ರೋತ್ಸಾಹಧನ ಪಡೆಯುವಲ್ಲಿ ಸಮಸ್ಯೆ ಆಗುವ ಸಾಧ್ಯತೆ ಇದೆ.

ಮುಂದುವರಿದ ಕಬ್ಬ ಬೆಳೆಗಾರರ ಪ್ರತಿಭಟನೆ
ಇನ್ನು ಕರ್ನಾಟಕದಲ್ಲಿ ಕಬ್ಬಿಗೆ ಎಫ್ಆರ್ಪಿ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ಏಳು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರು ಹಾಗೂ ಕಬ್ಬು ಬೆಳೆಗಾರರ ಸಂಘದ ಸದಸ್ಯರು, ಮುಖಂಡರು ಸೋಮವಾರ ಬಾರ್ಕೋಲ್ ಚಳವಳಿ ನಡೆಸಿದರು.
ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಕಬ್ಬು ಬೆಳೆಗಾರ ರೈತರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆ ಏಳನೇ ದಿನವೂ ಮುಂದುವರಿದಿದೆ. ರಾಜ್ಯದ ವಿವಿಧ ಜಿಲ್ಲೆಯಿಂದ ಬಂದಿದ್ದ ನೂರಾರು ರೈತ ಮಹಿಳೆಯರು ಧರಣಿಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ದೇಶಕ್ಕೆ ಅನ್ನ ನೀಡುವ ರೈತನನ್ನು ಏಳು ದಿನಗಳಿಂದ ರಸ್ತೆಯಲ್ಲಿ ಮಲಗಿಸಿರುವ ಸರ್ಕಾರಕ್ಕೆ ರೈತರ ಕಷ್ಟಕ್ಕಿಂತ ಸಕ್ಕರೆ ಕಾರ್ಖಾನೆ ಮಾಲೀಕರ ಹಿತವೇ ಮುಖ್ಯವಾಗಿದೆ. ರೈತ ಮಹಿಳೆಯರು ಕಿತ್ತೂರ್ ರಾಣಿ ಚೆನ್ನಮ್ಮನ ಅವತಾರ ತಾಳುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಲಿ, ಕಬ್ಬುದರ ಏರಿಕೆ ಮಾಡಲಿ ಎಂದು ರೈತ ಮುಖಂಡರು ಆಗ್ರಹಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications