ಬೆಂಗಳೂರು : ಹಾಪ್ಕಾಮ್ಸ್ ಮಾವು ಮೇಳಕ್ಕೆ ಚಾಲನೆ
ಬೆಂಗಳೂರು, ಮೇ 15 : ವಿವಿಧ ಬಗೆಯ ಮಾವಿನ ಹಣ್ಣುಗಳ ರುಚಿ ನೋಡಲು ಹಾಪ್ಕಾಮ್ಸ್ಗೆ ಭೇಟಿ ನೀಡಬಹುದಾಗಿದೆ. ಬೆಂಗಳೂರಿನಲ್ಲಿ ಮಾವು ಮತ್ತು ಹಲಸಿನ ಮೇಳಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಗ್ರಾಹಕರನ್ನು ಸೆಳೆಯಲು ಬೆಳಗ್ಗೆ 6.30ಕ್ಕೆ ಹಾಪ್ಕಾಮ್ಸ್ಅನ್ನು ತೆರೆಯಲಾಗುತ್ತಿದೆ.
ಹಾಪ್ಕಾಮ್ಸ್ ವಾರ್ಷಿಕವಾಗಿ ಆಯೋಜಿಸುವ ಮಾವು ಮತ್ತು ಹಲಸಿನ ಮೇಳಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಬೆಂಗಳೂರಿನ 250ಕ್ಕೂ ಹೆಚ್ಚು ಹಾಪ್ಕಾಮ್ಸ್ಗಳಲ್ಲಿ ವಿವಿಧ ಬಗೆಯ ಮಾವು ಮತ್ತು ಹಲಸಿನ ಹಣ್ಣುಗಳು ಶೇ 10ರ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ದೊರೆಯುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. [ಹಣ್ಣುಗಳ ರಾಜನಿಗೆ ಸಿಕ್ತು ಪ್ರಧಾನಿ ಮೋದಿ ಹೆಸರು]

ರೈತರಿಂದ ನೇರವಾಗಿ ಖರೀದಿ ಮಾಡಿದ ಮಾವಿನ ಹಣ್ಣುಗಳು ಮೇಳದಲ್ಲಿ ಲಭ್ಯವಿದ್ದು, ಇವು ಕಾರ್ಬೈಡ್ ಮುಕ್ತವಾಗಿವೆ. ಗ್ರಾಹಕರು ಮೇಳಕ್ಕೆ ಭೇಟಿ ಕೊಟ್ಟು ಆರೋಗ್ಯಯುಕ್ತವಾದ ರಸಭರಿತ ಮಾವಿನ ಹಣ್ಣುಗಳನ್ನು ಖರೀದಿಸಬಹುದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. [ಬೆಳಗ್ಗೆ 6 ಗಂಟೆಗೆ ಹಾಪ್ ಕಾಮ್ಸ್ ಓಪನ್]
15 ಬಗೆಯ ಹಣ್ಣುಗಳು : ಮಾವು ಮೇಳಕ್ಕೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾವಿನ ಹಣ್ಣು ಬಂದಿದೆ. ಈ ಬಾರಿ ರಾಮನಗರದಿಂದ ಹೆಚ್ಚು ಹಣ್ಣುಗಳು ಬಂದಿವೆ. ಕೋಲಾರದಲ್ಲಿ ಫಸಲು ಕಡಿಮೆ ಇದೆ, ಹಣ್ಣುಗಳು ವಿಳಂಬವಾಗಿ ಮಾರುಕಟ್ಟೆಗೆ ಬರಲಿವೆ. ಬಾದಾಮಿ, ರಸಪುರಿ, ತೋತಪುರಿ ಸೇರಿದಂತೆ 15ಕ್ಕೂ ಹೆಚ್ಚಿನ ತಳಿಗಳು ಹಣ್ಣುಗಳು ಮೇಳದಲ್ಲಿ ಲಭ್ಯವಿವೆ. [ಹಾಪ್ ಕಾಮ್ಸ್ ವ್ಯಾಪಾರ ಕುಂಠಿತಕ್ಕೆ ಕಾರಣವೇನು?]
ದರಗಳು : ಮಾವು ಮೇಳದಲ್ಲಿ ಗ್ರಾಹಕರಿಗೆ ಶೇ 10ರ ರಿಯಾಯಿತಿಯಲ್ಲಿ ಹಣ್ಣುಗಳು ಮಾರಾಟಕ್ಕೆ ಲಭ್ಯವಿದೆ. ಬಾದಾಮಿಗೆ 93 ರೂ., ರಸಪುರಿಗೆ 63, ಮಲ್ಲಿಕಾ 81, ಮಲಗೋವಾ 83 ರೂ. ದರವಿದೆ. ಗ್ರಾಹಕರ ಅನುಕೂಲಕ್ಕಾಗಿ ಬೆಳಗ್ಗೆ 6 ಗಂಟೆಗೆ ಹಾಪ್ಕಾಮ್ಸ್ಗಳನ್ನು ತೆರೆಯಲಾಗುತ್ತದೆ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications