300 ದಿನ ಕಳೆದ ರೈತ ಚಳವಳಿ; ಸೆಪ್ಟೆಂಬರ್ 27ರಂದು ಭಾರತ್ ಬಂದ್
ದೆಹಲಿಯಲ್ಲಿ ರೈತ ಚಳವಳಿ ಬುಧವಾರಕ್ಕೆ 300 ದಿನ ಪೂರೈಸಿದೆ. ಕಳೆದ ವರ್ಷ ನವೆಂಬರ್ ಮಾಸದಲ್ಲಿ ರೈತರು ದಿಲ್ಲಿ ಚಲೋ ಜಾಥಾ ಹಮ್ಮಿಕೊಂಡಿದ್ದರು. ದಿಲ್ಲಿ ಗಡಿಗಳಲ್ಲಿ ರೈತರನ್ನು ತಡೆಹಿಡಿಯಲಾಯಿತು. ಪ್ರಭುತ್ವ ರಸ್ತೆಗಳಲ್ಲಿ ಕಂದಕ ತೋಡಿತು. ಅಶ್ರುವಾಯು ಸಿಡಿಸಿತು. ವಾಟರ್ ಜೆಟ್ಗಳನ್ನು ಹಾರಿಸಿತು. ರೈತರು ಧೃತಿಗೆಡಲಿಲ್ಲ. ದಿಲ್ಲಿ ಗಡಿಗಳಲ್ಲೇ ಮೊಕ್ಕಾಂ ಹೂಡಿದರು. ಅಂದಿನಿಂದ ಇಂದಿನವರೆಗೆ ಶಾಂತಿಯುತ ಚಳವಳಿಯಲ್ಲಿ ತೊಡಗಿದ್ದಾರೆ.
ದಿಲ್ಲಿ ರೈತ ಚಳವಳಿಯ ಉದ್ದೇಶ ಸ್ಪಷ್ಟವಾಗಿದೆ. ಕೇಂದ್ರ ಸರ್ಕಾರ ತಂದಿರುವ ಮೂರು ಕರಾಳ ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು. ರೈತ ಬೆಳೆದ ಬೆಳೆಗೆ ಖಾತ್ರಿಯಾದ ಎಂಎಸ್ಪಿ ನೀಡಬೇಕು. ಅಲ್ಲಿಯವರೆಗೆ ಚಳವಳಿ ಮುಂದುವರೆಸಲು ರೈತರು ಸಕಲ ಸನ್ನದ್ಧರಾಗಿ ಕುಳಿತಿದ್ದಾರೆ. ದಿನೇ ದಿನೇ ಚಳವಳಿ ಗಟ್ಟಿಗೊಳ್ಳುತ್ತಿದೆ. ದೇಶಾದ್ಯಂತ ವ್ಯಾಪಿಸುತ್ತಿದೆ. ಇಷ್ಟೆಲ್ಲಾ ಆದರೂ ರೈತರ ಬೇಡಿಕೆಗಳೇನು ಎಂಬುದು ಪ್ರಭುತ್ವಕ್ಕೆ ಸ್ಪಷ್ಟವಾಗಿ ತಿಳಿದಿದ್ದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ಇದೀಗ ದಿಲ್ಲಿ ರೈತ ಚಳವಳಿಯ ಮುಂದುವರಿದ ಭಾಗವಾಗಿ ಸೆಪ್ಟೆಂಬರ್ 27 ರಂದು ಭಾರತ್ ಬಂದ್ಗೆ ರೈತರು ಕರೆ ಕೊಟ್ಟಿದ್ದಾರೆ. ರೈತರ ಪರವಾಗಿ ವಿವಿಧ ಸಾಮಾಜಿಕ ಸಂಘಟನೆಗಳು ಸೇರಲಿವೆ ಎಂಬ ಆಶಾಭಾವನೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ವ್ಯಕ್ತಪಡಿಸಿದೆ. ಮಹಿಳಾ ಸಂಘಟನೆಗಳು, ಕಾರ್ಮಿಕ ಒಕ್ಕೂಟಗಳು ಸೇರಿದಂತೆ ಅನೇಕ ಯುವ ಸಂಘಟನೆಗಳು ಚಳವಳಿಗೆ ಸಾಥ್ ನೀಡುತ್ತಿವೆ. 27ರಂದು ಕಿಸಾನ್ ಮಹಾಪಂಚಾಯತ್ಗಳು, ಬೈಕ್ ಹಾಗೂ ಸೈಕಲ್ ಜಾಥಾಗಳನ್ನು ಆಯೋಜಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಮೊನ್ನೆ ತಾನೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಕ್ಷೇತ್ರ ಗೋರಕ್ಪುರದಲ್ಲಿ ರೈತರ ಜಾಥಾ ಏರ್ಪಡಿಸಲಾಗಿತ್ತು. ಲಕ್ಷಾಂತರ ರೈತರು ಭಾಗವಹಿಸಿ ಚಳವಳಿ ಯಶಸ್ವಿಗೊಳಿಸಿದ್ದಾರೆ. ಅತ್ತ ದಿಲ್ಲಿಯ ನಾಯಕರು ಈ ಮುಂಗಾರು ಹಂಗಾಮಿನಲ್ಲಿ ಅತ್ಯಧಿಕ ಉತ್ಪಾದನೆ ಆಗಿದೆ ಎಂದು ಬೀಗುತ್ತಿದ್ದಾರೆ. ಹೌದು ಸ್ವಾಮಿ, ಉತ್ಪಾದನೆಯೇನೋ ರೈತರು ಮಾಡಿದ್ದಾರೆ ಅದಕ್ಕೆ ತಕ್ಕುದಾದ ಬೆಲೆ, ಖಾತ್ರಿಯಾದ ಬೆಂಬಲ ಬೆಲೆ ಕೊಡಿ ಎಂದು ನಾವೂ ಕೇಳುತ್ತಿದ್ದೇವೆ ಎಂದು ರೈತ ನಾಯಕರು ಸರ್ಕಾರದ ಗಮನ ಸೆಳೆಯುತ್ತಿದ್ದಾರೆ. ಆ ಬಗ್ಗೆ ಸರ್ಕಾರ ಜಾಣ ಕಿವುಡು ಪ್ರದರ್ಶಿಸುತ್ತಿದೆ.

ಅಂದಹಾಗೆ ಸೆಪ್ಟೆಂಬರ್ 27ರಂದು ರೈತರು ಕರೆ ನೀಡಿರುವ ಭಾರತ್ ಬಂದ್ಗೆ ಕರ್ನಾಟಕದಲ್ಲಿ ಯಾವ್ಯಾವ ಪಕ್ಷಗಳು, ವಿಶೇಷವಾಗಿ ರೈತ ಪರ-ಜನಪರ ಎಂದು ಹೇಳಿಕೊಳ್ಳುವ ಯಾವ್ಯಾವ ನಾಯಕರು ಬೆಂಬಲ ಸೂಚಿಸುತ್ತಾರೆ ಕಾದು ನೋಡಬೇಕಿದೆ.
-
School Land Bill: ಸರ್ಕಾರಿ ಶಾಲೆಗಳ ಭೂರಕ್ಷಣ ವಿಧೇಯಕ ಜಾರಿ; ಕನ್ನಡದ ಹಿತದೃಷ್ಠಿಯಿಂದ ಮಹತ್ವದ ಹೆಜ್ಜೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications