ಬಿಜೆಪಿಯ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ
Recommended Video
ಬೆಂಗಳೂರು, ನವೆಂಬರ್ 20: ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ನೀಡಿರುವ ಯಡಿಯೂರಪ್ಪ ಅವರು, ಕಬ್ಬು ಬೆಳೆಗಾರರ ಬಾಕಿ ಉಳಿಸಿಕೊಂಡಿರುವ ಬಿಜೆಪಿ ಮುಖಂಡರಿಗೂ ಎಚ್ಚರಿಕೆ ನೀಡಿದ್ದಾರೆ.
ಸಂಪುಟ ಸಭೆಯಲ್ಲಿ ಎಚ್ದಿಕೆಗೆ ರಮೇಶ್ ಜಾರಕಿಹೊಳಿ ಕೊಟ್ಟ ಪತ್ರದಲ್ಲಿ ಇದ್ದದ್ದಾದರೂ ಏನು?
ಸಕ್ಕರೆ ಕಾರ್ಖಾನೆ ಹೊಂದಿರುವ ಬಿಜೆಪಿ ಶಾಸಕರು ಮತ್ತು ಮುಖಂಡರು ಒಂದು ವಾರದ ಒಳಗೆ ಬೆಳೆಗಾರರ ಬಾಕಿ ಪಾವತಿಸಬೇಕು ಎಂದು ಅವರು ಹೇಳಿದ್ದಾರೆ.
ಕುಮಾರಸ್ವಾಮಿ ವಿರುದ್ಧ ರಾಜ್ಯವ್ಯಾಪಿ ಹೋರಾಟಕ್ಕೆ ಯಡಿಯೂರಪ್ಪ ಕರೆ
ಬಿಜೆಪಿಯವರೇ ರೈತರ ಬಾಕಿ ಪಾವತಿಸಲಿಲ್ಲವೆಂದರೆ ತಾವು ಕಾಂಗ್ರೆಸ್ ಹಾಗೂ ಜೆಡಿಎಸ್ ಅನ್ನು ಪ್ರಶ್ನೆ ಮಾಡುವ ನೈತಿಕತೆ ಉಳಿಸಿಕೊಳ್ಳುವುದಿಲ್ಲ ಎಂಬ ಕಾರಣಕ್ಕೆ ಯಡಿಯೂರಪ್ಪ ಅವರು ಈ ಆದೇಶ ಹೊರಡಿಸಿದ್ದಾರೆ.
ಕಬ್ಬು ಬೆಳಗಾರರ ಬಾಕಿ ಪಾವತಿ ಮಾಡದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮೇಲೆ ಕೈಗೊಳ್ಳಿ ಅವರು ಕಾಂಗ್ರೆಸ್ ನವರಾದರೂ ಸರಿ, ಬಿಜೆಪಿಯವರಾದರೂ ಸರಿ ಎಂದು ಯಡಿಯೂರಪ್ಪ ಅವರು ಖಡಕ್ ಆಗಿ ಹೇಳಿದ್ದಾರೆ.
ದುರಹಂಕಾರಕ್ಕೆ ಮಿತಿ ಇರಬೇಕು: ಎಚ್ಡಿಕೆ ವಿರುದ್ಧ ಯಡಿಯೂರಪ್ಪ ಗರಂ
ಉತ್ತರ ಕರ್ನಾಟಕ ಭಾಗದಲ್ಲಿನ ಹಲವು ಸಕ್ಕರೆ ಕಾರ್ಖಾನೆಗಳು ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು, ಮುಖಂಡರ ಸಕ್ಕರೆ ಕಾರ್ಖಾನೆಗಳೇ ಹೆಚ್ಚಿನ ಸಂಖ್ಯೆಯಲ್ಲಿವೆ. ಬಿಜೆಪಿಯು ಕಬ್ಬು ಬೆಳೆಗಾರರ ವಿಷಯವನ್ನು ಬೆಳಗಾವಿ ಅಧಿವೇಶನದಲ್ಲಿ ಅಸ್ತ್ರವಾಗಿ ಬಳಸಲು ಯೋಜಿಸಿದ್ದು, ತಮ್ಮ ಪಕ್ಷದವರೇ ರೈತರಿಗೆ ಬಾಕಿ ಉಳಿಸಿಕೊಂಡಿದ್ದರೆ ಹಿನ್ನಡೆ ಆಗುತ್ತದೆ ಎನ್ನುವುದು ಯಡಿಯೂರಪ್ಪ ಅವರ ಆಲೋಚನೆ.