ಗೋಕಾಕದ ಅರಭಾವಿಯಲ್ಲಿ ಭಾರೀ ವಂಚನೆ

ಗೋಕಾಕ ತಾಲೂಕಿನ ಮೂಡಲಗಿಯ ಭೀಮಪ್ಪ ಗುಂಡಪ್ಪ ಗಡಾದ ಅವರು ನೀಡಿದ ದೂರಿನ ಅನ್ವಯ ಜಿಲ್ಲಾಧಿಕಾರಿಗಳು ಈ ಕುರಿತಂತೆ ತನಿಖೆ ಕೈಗೊಳ್ಳಲು ಬೆಳಗಾವಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಉಪವಿಭಾಗಾಧಿಕಾರಿಗಳು ಗೋಕಾಕ ತಹಸೀಲದಾರರಿಗೆ ವರದಿ ನೀಡುವಂತೆ ಸೂಚಿಸಿದ್ದರು.1677 ಪ್ರಕರಣಗಳಲ್ಲಿ ಅನರ್ಹರ ಪಿಂಚಣಿ ಪಡೆದದ್ದು ಬಹಿರಂಗವಾಯಿತು. ಈ ಪಿಂಚಣಿ ಪಡೆಯಲು ಖೊಟ್ಟಿ ದಾಖಲೆ ನೀಡಿದವರ ಮೇಲೆಯೂ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದೂ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಬೆಳೆ ವಿಮೆ : ರೈತರಿಗೆ ಸೂಚನೆ
ಜೋಳ ನೀರಾವರಿ, ಜೋಳ ಖುಷ್ಕಿ, ಗೋಧಿ ನೀರಾವರಿ, ಗೋಧಿ ಖುಷ್ಕಿ, ಕಡಲೆ ನೀರಾವರಿ, ಕಡಲೆ ಖುಷ್ಕಿ ಬೆಳೆಯನ್ನು ಬೆಳೆದ ರೈತರು ಪ್ರಾಯೋಗಿಕ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಅಥಣಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈ ಬೆಳೆಗಳಿಗೆ ವಿಮೆ ಮಾಡಿಸಲು ಸಾಲ ಪಡೆದ ರೈತರು ಸಂಬಂಧಿಸಿದ ಬ್ಯಾಂಕ್ಗಳಲ್ಲಿ ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಕಡಲೆ ನೀರಾವರಿ ಹಾಗೂ ಕಡಲೆ ಒಣ ಬೇಸಾಯ ಬೆಳೆಗಳಿಗೆ ನವೆಂಬರ್ 30 ಹಾಗೂ ಉಳಿದ ಬೆಳೆಗಳಿಗೆ ಕೊನೆಯ ದಿನಾಂಕ ಡಿಸೆಂಬರ್ 31. ಹಾಗೂ ಉಳಿದ ಬೆಳೆಗಳಿಗೆ ನವೆಂಬರ್ 30 ಕೊನೆಯ ದಿನಾಂಕ ಆಗಿರುತ್ತದೆ. ಸಾಲ ಪಡೆದ ರೈತರಿಗೆ ಈ ವಿಮೆ ಕಡ್ಡಾಯವಾಗಿರುತ್ತದೆ. ಈ ವಿಮೆಯನ್ನು ಅನುಷ್ಠಾನಗೊಳಿಸುವ ಸಂಸ್ಥೆ, ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ ಇಂಡಿಯಾ ಲಿ.
ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿಯಲ್ಲಿ ಜೋಳ ನೀರಾವರಿ, ಜೋಳ ಖುಷ್ಕಿ, ಜೋಳ ನೀರಾವರಿ, ಗೋಧಿ ನೀರಾವರಿ, ಗೋಧಿ ಮಳೆ ಆಶ್ರಿತ, ಕಡಲೆ ನೀರಾವರಿ, ಕಡಲೆ ಒಣ ಬೇಸಾಯ, ಸೂರ್ಯಕಾಂತಿ ನೀರಾವರಿ, ಸೂರ್ಯಕಾಂತಿ ಒಣ ಬೇಸಾಯ, ಕುಸುಬೆ ಮಳೆ ಆಶ್ರಿತ, ಈ ಬೆಳೆಗಳಿಗೆ ಹಿಂಗಾರು ಹಂಗಾಮಿಗೆ ಹಾಗೂ ಸೂರ್ಯಕಾಂತಿ ನೀರಾವರಿ, ಬೇಸಿಗೆ ಹಂಗಾಮಿಗೆ ರೈತರು ವಿಮೆಯನ್ನು ಮಾಡಿಸಬಹುದಾಗಿದೆ. ಮೇಲಿನ ಬೆಳೆಗಳನ್ನು ಬೆಳೆದ ಬೆಳೆ ಸಾಲ ಪಡೆದ ರೈತರು ಇದರಲ್ಲಿ ಭಾಗವಹಿಸುವಂತಿಲ್ಲ.
ಅಂಥ ರೈತರು ಪ್ರಾಯೋಗಿಕ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಮಾತ್ರ ಭಾಗವಹಿಸಬಹುದು. ಇತರೇ ರೈತರು ಇದರಲ್ಲಿ ಭಾಗವಹಿಸುವುದು ಐಚ್ಛಿಕವಾಗಿರುತ್ತದೆ. ಬೆಳೆ ಬಿತ್ತಿದ 30 ದಿನಗಳೊಳಗಾಗಿ ಬ್ಯಾಂಕಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಬೆಳೆ ಹಾಗೂ ಬೆಳೆ ಆರೋಗ್ಯಕರವಾಗಿರಬೇಕು. ಪ್ರಸ್ತಾವನೆಗಳನ್ನು ಸಲ್ಲಿಸಲು ಹಿಂಗಾರು ಹಂಗಾಮಿಗೆ ಕೊನೆಯ ದಿನ ಡಿಸೆಂಬರ್ 31 ಹಾಗೂ ಬೇಸಿಗೆ ಹಂಗಾಮಿಗೆ ಕೊನೆಯ ದಿನ 2010ರ ಫೆಬ್ರವರಿ 28. ಬೇಸಿಗೆ ಹಂಗಾಮಿಗೆ ಸೂರ್ಯಕಾಂತಿ (ನೀರಾವರಿ) ಬೆಳೆಗೆ ಮಾತ್ರ ರೈತರು ವಿಮೆ ಮಾಡಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಸ್ಥಳೀಯ ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಬ್ಯಾಂಕ್ಗಳು, ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಹಾಗೂ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.
(ದಟ್ಸ್ ಕನ್ನಡ ವಾರ್ತೆ)
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications