ಗೋಕಾಕದ ಅರಭಾವಿಯಲ್ಲಿ ಭಾರೀ ವಂಚನೆ

ಗೋಕಾಕ ತಾಲೂಕಿನ ಮೂಡಲಗಿಯ ಭೀಮಪ್ಪ ಗುಂಡಪ್ಪ ಗಡಾದ ಅವರು ನೀಡಿದ ದೂರಿನ ಅನ್ವಯ ಜಿಲ್ಲಾಧಿಕಾರಿಗಳು ಈ ಕುರಿತಂತೆ ತನಿಖೆ ಕೈಗೊಳ್ಳಲು ಬೆಳಗಾವಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಉಪವಿಭಾಗಾಧಿಕಾರಿಗಳು ಗೋಕಾಕ ತಹಸೀಲದಾರರಿಗೆ ವರದಿ ನೀಡುವಂತೆ ಸೂಚಿಸಿದ್ದರು.1677 ಪ್ರಕರಣಗಳಲ್ಲಿ ಅನರ್ಹರ ಪಿಂಚಣಿ ಪಡೆದದ್ದು ಬಹಿರಂಗವಾಯಿತು. ಈ ಪಿಂಚಣಿ ಪಡೆಯಲು ಖೊಟ್ಟಿ ದಾಖಲೆ ನೀಡಿದವರ ಮೇಲೆಯೂ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದೂ ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಬೆಳೆ ವಿಮೆ : ರೈತರಿಗೆ ಸೂಚನೆ
ಜೋಳ ನೀರಾವರಿ, ಜೋಳ ಖುಷ್ಕಿ, ಗೋಧಿ ನೀರಾವರಿ, ಗೋಧಿ ಖುಷ್ಕಿ, ಕಡಲೆ ನೀರಾವರಿ, ಕಡಲೆ ಖುಷ್ಕಿ ಬೆಳೆಯನ್ನು ಬೆಳೆದ ರೈತರು ಪ್ರಾಯೋಗಿಕ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಅಥಣಿ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈ ಬೆಳೆಗಳಿಗೆ ವಿಮೆ ಮಾಡಿಸಲು ಸಾಲ ಪಡೆದ ರೈತರು ಸಂಬಂಧಿಸಿದ ಬ್ಯಾಂಕ್ಗಳಲ್ಲಿ ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಕಡಲೆ ನೀರಾವರಿ ಹಾಗೂ ಕಡಲೆ ಒಣ ಬೇಸಾಯ ಬೆಳೆಗಳಿಗೆ ನವೆಂಬರ್ 30 ಹಾಗೂ ಉಳಿದ ಬೆಳೆಗಳಿಗೆ ಕೊನೆಯ ದಿನಾಂಕ ಡಿಸೆಂಬರ್ 31. ಹಾಗೂ ಉಳಿದ ಬೆಳೆಗಳಿಗೆ ನವೆಂಬರ್ 30 ಕೊನೆಯ ದಿನಾಂಕ ಆಗಿರುತ್ತದೆ. ಸಾಲ ಪಡೆದ ರೈತರಿಗೆ ಈ ವಿಮೆ ಕಡ್ಡಾಯವಾಗಿರುತ್ತದೆ. ಈ ವಿಮೆಯನ್ನು ಅನುಷ್ಠಾನಗೊಳಿಸುವ ಸಂಸ್ಥೆ, ಅಗ್ರಿಕಲ್ಚರಲ್ ಇನ್ಸೂರೆನ್ಸ್ ಕಂಪನಿ ಇಂಡಿಯಾ ಲಿ.
ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿಯಲ್ಲಿ ಜೋಳ ನೀರಾವರಿ, ಜೋಳ ಖುಷ್ಕಿ, ಜೋಳ ನೀರಾವರಿ, ಗೋಧಿ ನೀರಾವರಿ, ಗೋಧಿ ಮಳೆ ಆಶ್ರಿತ, ಕಡಲೆ ನೀರಾವರಿ, ಕಡಲೆ ಒಣ ಬೇಸಾಯ, ಸೂರ್ಯಕಾಂತಿ ನೀರಾವರಿ, ಸೂರ್ಯಕಾಂತಿ ಒಣ ಬೇಸಾಯ, ಕುಸುಬೆ ಮಳೆ ಆಶ್ರಿತ, ಈ ಬೆಳೆಗಳಿಗೆ ಹಿಂಗಾರು ಹಂಗಾಮಿಗೆ ಹಾಗೂ ಸೂರ್ಯಕಾಂತಿ ನೀರಾವರಿ, ಬೇಸಿಗೆ ಹಂಗಾಮಿಗೆ ರೈತರು ವಿಮೆಯನ್ನು ಮಾಡಿಸಬಹುದಾಗಿದೆ. ಮೇಲಿನ ಬೆಳೆಗಳನ್ನು ಬೆಳೆದ ಬೆಳೆ ಸಾಲ ಪಡೆದ ರೈತರು ಇದರಲ್ಲಿ ಭಾಗವಹಿಸುವಂತಿಲ್ಲ.
ಅಂಥ ರೈತರು ಪ್ರಾಯೋಗಿಕ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಲ್ಲಿ ಮಾತ್ರ ಭಾಗವಹಿಸಬಹುದು. ಇತರೇ ರೈತರು ಇದರಲ್ಲಿ ಭಾಗವಹಿಸುವುದು ಐಚ್ಛಿಕವಾಗಿರುತ್ತದೆ. ಬೆಳೆ ಬಿತ್ತಿದ 30 ದಿನಗಳೊಳಗಾಗಿ ಬ್ಯಾಂಕಿಗೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಬೆಳೆ ಹಾಗೂ ಬೆಳೆ ಆರೋಗ್ಯಕರವಾಗಿರಬೇಕು. ಪ್ರಸ್ತಾವನೆಗಳನ್ನು ಸಲ್ಲಿಸಲು ಹಿಂಗಾರು ಹಂಗಾಮಿಗೆ ಕೊನೆಯ ದಿನ ಡಿಸೆಂಬರ್ 31 ಹಾಗೂ ಬೇಸಿಗೆ ಹಂಗಾಮಿಗೆ ಕೊನೆಯ ದಿನ 2010ರ ಫೆಬ್ರವರಿ 28. ಬೇಸಿಗೆ ಹಂಗಾಮಿಗೆ ಸೂರ್ಯಕಾಂತಿ (ನೀರಾವರಿ) ಬೆಳೆಗೆ ಮಾತ್ರ ರೈತರು ವಿಮೆ ಮಾಡಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಸ್ಥಳೀಯ ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಬ್ಯಾಂಕ್ಗಳು, ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಹಾಗೂ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.
(ದಟ್ಸ್ ಕನ್ನಡ ವಾರ್ತೆ)
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications