ಕುರಿಗಾಹಿಗೆ ವರದಾನವಾದ ಉಣ್ಣೆ ಕಟಾವು ಯಂತ್ರ: ಉಣ್ಣೆ ಉತ್ಪಾದಕರ ಸಹಕಾರ ಸಂಘದಿಂದ ಯಂತ್ರ ಬಾಡಿಗೆ
ರಾಯಚೂರು ಜೂನ್ 28: ಆಧುನಿಕ ಜಗತ್ತಿನ ಎಲ್ಲ ಕ್ಷೇತ್ರಗಳಲ್ಲೂ ಯಂತ್ರಗಳ ಬಳಕೆ ಹೆಚ್ಚಾಗಿದೆ. ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಐದು ವರ್ಷಗಳ ಹಿಂದೆ ಸರ್ಕಾರ ಪರಿಚಯಿಸಿದ್ದ ಉಣ್ಣೆ ಕಟಾವು ಯಂತ್ರ ಈಗ ಗ್ರಾಮೀಣ ಭಾಗಕ್ಕೂ ಕಾಲಿಟ್ಟಿದೆ.
ಅಂದಾಜು 2.5 ಲಕ್ಷ ಬೆಲೆ ಬಾಳುವ ಯಂತ್ರವನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಿಗೆ ಉಚಿತವಾಗಿ ನೀಡಲಾಗುತ್ತದೆ.

ಪ್ರತಿ ಕುರಿಯ ಉಣ್ಣೆ ತೆಗೆಯಲು 5 ರೂಪಾಯಿ ನಿಗದಿ ಮಾಡಿದ್ದು ಅದರಲ್ಲಿ ನಿಗಮಕ್ಕೆ 2 ರೂಪಾಯಿ, ಸಹಕಾರ ಸಂಘಕ್ಕೆ 1 ರೂಪಾಯಿ ಮತ್ತು ಯಂತ್ರದ ಆಪರೇಟರ್ಗೆ 2 ರೂಪಾಯಿ ಪಡೆಯಲು ನಿಗಮ ನಿರ್ದೇಶಿಸಿದೆ. ಕುರಿಗಾಹಿಗಳಿಂದ ಪಡೆಯುವ ಎರಡು ರೂಪಾಯಿ ಯಲ್ಲಿ ಬೇಡ್ ಬದಲಾವಣೆ ಸೇರಿ ಯಂತ್ರದ ನಿರ್ವಹಣೆ ಮಾಡಬೇಕು.
ಕತ್ತರಿ ಬಳಸಿ ತೆಗೆಯುತ್ತಿದ್ದ ಉಣ್ಣೆ ಅರೆಬರೆ ಬರುತ್ತಿದ್ದ ಕಾರಣ ಅದನ್ನು ಬಿಸಾಡುತ್ತಿದ್ದರು. ಸದ್ಯ ಈ ಯಂತ್ರ ಬಳಿಸಿ ಉಣ್ಣೆ ಕಟಾವು ಮಾಡಿದಾಗ ಸಂಪೂರ್ಣ ಉಣ್ಣೆ ಬರುತ್ತದೆ. ಸಮಯದ ಉಳಿತಾಯದ ಜತೆಗೆ ಉಣ್ಣೆ ಮಾರಾಟ ಮಾಡುವ ಮೂಲಕ ಆರ್ಥಿಕವಾಗಿ ಲಾಭ ಪಡೆಯಬಹುದು ಎನ್ನುವುದು ಸಹಕಾರ ಸಂಘಗಳ ಅನಿಸಿಕೆ.

ಒಂದು ಗಂಟೆ ಅವಧಿಯಲ್ಲಿ ಅಂದಾಜು 30 ರಿಂದ 40 ಕುರಿಗಳ ಉಣ್ಣೆ ತೆಗೆಯಬಹುದು. ಚರ್ಮಕ್ಕೆ ಗಾಯವಾಗುವುದಿಲ್ಲ. ಯಂತ್ರ ಬಳಕೆಯಿಂದ ಉದ್ದನೆಯ ಉಣ್ಣೆ ಬರುತ್ತದೆ ಅದನ್ನು ಪ್ರತಿ ಕೆ ಜಿಗೆ 70 ರೂಪಾಯಿ ರಂತೆ ಸಂಘವೇ ಖರೀದಿಸುವ್ಯದರಿಂದ ಕುರಿಗಾಹಿಗಳಿಗೆ ಈ ಯಂತ್ರ ವರದಾನವಾಗಲಿದೆ ಎಂದು ಮಲ್ಲದಗುಡ್ಡದ ಅಮೋಘ ಸಿದ್ಧೇಶ್ವರ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮಲ್ಲಯ್ಯ ಗೋರ್ಕಲ್ ಹೇಳಿದರು.
ಕಂಬಳಿ ತಯಾರಿಕೆ ಜತೆಗೆ ಉಣ್ಣೆಯನ್ನು ತುಂಬಿದ ಗಾ ದೆ ರೂಪದ ಹಾಸಿಗೆ ಬಳಸಿ ಆಸ್ಪತ್ರೆಗಳಲ್ಲಿ ಆಕ್ಯೂಪಂಕ್ಚರ್ ಚಿಕಿತ್ಸೆ ನೀಡಲಾಗುತ್ತಿರುವ್ಯದರಿಂದ ಕುರಿ ಉಣ್ಣೆಗೆ ಬೇಡಿಕೆ ಹೆಚ್ಚಿದೆ. ಯಂತ್ರದಿಂದ ಉಣ್ಣೆ ತೆಗೆದು ಮಾರಾಟ ಮಾಡಿದರೆ ಗ್ರಾಮೀಣ ಭಾಗದ ಕುರಿಗಾಹಿಗಳು ಆರ್ಥಿಕವಾಗಿ ಸದೃಢರಾಗಬಹುದು ಎಂದು ಮಲ್ಲಯ್ಯ ಅಭಿಪ್ರಾಯಪಟ್ಟರು.

ಯಂತ್ರ ಬಳಕೆಯಿಂದ ಸಲೀಸಾಗಿ ಉಣ್ಣೆ ತೆಗೆಯಲು ಸಾಧ್ಯವಾಯಿತು. ವಿದ್ಯುತ್ ಚಾಲಿತ ಯಂತ್ರವಾಗಿದ್ದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕೈ ಕೊಟ್ಟರೆ ಸಮಸ್ಯೆಯಾಗುತ್ತದೆ. ಬ್ಯಾಟರಿ ಅಥವಾ ಸೋಲಾರ್ ವ್ಯವಸ್ಥೆಯಡಿ ಯಂತ್ರ ಬಳಸುವಚಿತಾದರೆ ಹೆಚ್ಚು ಉಪಯುಕ್ತವಾಗುತ್ತದೆ ಎಂದು ಕುರಿಗಾಹಿ ದೇವಣ್ಣ ಹೇಳಿದರು.
ಈ ಭಾಗದ ಕುರಿಗಳಲ್ಲಿ ಉಣ್ಣೆ ಉತ್ಪಾದನೆ ಕಡಿಮೆ. ಹೀಗಾಗಿ ಕುರಿಗಳಿಗೆ ಉಣ್ಣೆ ತೆಗೆದು ಕೀಟ ಬೀಳದಂತೆ ತಡೆಯಲು ಮಾತ್ರ ಯಂತ್ರ ಬಳಕೆಯಾಗುತ್ತಿದೆ. ಜಿ ಲ್ಲೆಯಲ್ಲಿ 13 ಸಂಘಗಳಿಗೆ ಯಂತ್ರ ವಿತರಣೆ ಮಾಡಲಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ರಾಯಚೂರು ಇಲಾಖೆಯ ಸಹಾಯಕ ನಿರ್ದೇಶಕ ಯಮನಪ್ಪ ವಾಲ್ಮೀಕಿ ಹೇಳಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications