ಬಿ.ಟಿ ಬದನೆ ಸಾವಯವ ಕೃಷಿ ಮಿಷನ್ ಅರಿವು

ಸಾವಯವ ಮಿಷನ್ ವತಿಯಿಂದ ಸ್ಥಳೀಯ/ನಾಟಿ ಬೀಜಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದರ ಮುಖ್ಯ ಉದ್ದೇಶವು ರೈತರು ಸಾದ್ಯವಾದಷ್ಟೂ ಮಟ್ಟಿಗೆ ಹೊರಗಿನ ಕಂಪನಿಗಳ ಮೇಲೆ ಬೀಜಕ್ಕೆ ಅಬಲಂಬಿತರಾಗದೇ ತಮ್ಮ ಮಟ್ಟದಲ್ಲಿಯೇ ಸಾಧ್ಯವಾದಷ್ಟೂ ಮಟ್ಟಿಗೆ ಬೀಜವನ್ನು ಉತ್ಪಾದಿಸಿಕೊಳ್ಳುವುದೂ ಆಗಿರುತ್ತದೆ.
ಸ್ಥಳೀಯ/ನಾಟಿ ಬೀಜಗಳಿಗೆ ಭೂಮಿಯಿಂದ ಮತ್ತು ಸಾವಯವ ಗೊಬ್ಬರಗಳಿಂದ ಪೋಷಕಾಂಶಗಳನ್ನು ಚೆನ್ನಾಗಿ ಪಡೆದುಕೊಳ್ಳುವ ಶಕ್ತಿ ಇರುತ್ತದೆ. ಈ ಕಾರಣದಿಂದಾಗಿ ರೈತರ ಉತ್ಪಾದನೆ ವೆಚ್ಚ ಕಡಿಮೆ ಆಗಿರುತ್ತದೆ. ವಿಷ ರಹಿತ ಆಹಾರದ ಉತ್ಪಾದನೆ ಸಾಧ್ಯವಾಗುತ್ತದೆ.
ಕೇಂದ್ರ ಸರ್ಕಾರವು ಜೈವಿಕ ತಂತ್ರಜ್ಞಾನ ರಂಗದ ನಿಯಂತ್ರಣ ಸಂಸ್ಥೆಯಾಗಿರುವ ಕುಲಾಂತರಿ ಅನುಮೋದನಾ ಸಮಿತಿಯು ಕುಲಾಂತರಿ ಬದನೆಯ ವಾಣಿಜ್ಯ ಬೆಳೆಗೆ ಅನುಮೋದನೆ ನೀಡಿರುವುದು ಮಿಷನ್ ಗಮನಕ್ಕೆ ಬಂದಿರುತ್ತದೆ. ಸಮಿತಿಯು ಅನುಮೋದನೆ ನೀಡಿದರೂ ಬಿ.ಟಿ. ತಳಿಯ ಬದನೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರದ ಅನುಮತಿ ಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಈ ಸಂಬಂಧದಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸುವುದು ಅವಶ್ಯಕ.
ಬಿ.ಟಿ. ಬದನೆ ಬಗ್ಗೆ ಈ ಕೆಳಕಂಡ ತೀವ್ರತರವಾದ ಆಕ್ಷೇಪಣೆಗಳಿರುತ್ತವೆ.
*ಮನುಷ್ಯ, ಜಾನುವಾರುಗಳ ಮತ್ತು ಪರಿಸರದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ.
*ಸ್ಥಳೀಯ/ನಾಟಿ ತಳಿ ಬದನೆಗಳ ನಾಶ.
*ಬಹುರಾಷ್ಟ್ರೀಯ ಕಂಪನಿಗಳ ಮೇಲೆ ಜೀಜಕ್ಕಾಗಿ ಅವಲಂಬನೆ ಮತ್ತು ಈ ಕಂಪೆನಿಗಳ ಏಕಸ್ವಾಮ್ಯ.
*ಉತ್ಪದನಾ ವೆಚ್ಚ ಹೆಚ್ಚಳ.
*ಸಾವಯವ ಪ್ರಮಾಣೀಕರಣ ಪ್ರಕ್ರಿಯೆಯಲ್ಲಿ ಬಿ.ಟಿ. ತಳಿಗಳಿಗೆ ಅವಕಾಶವಿಲ್ಲ. ಇದರಿಂದಾಗಿ ಸಾವಯವ ಕೃಷಿ ಉತ್ಪನ್ನಗಳ ಮಾರುಕಟ್ಟೆಗೆ ದೊಡ್ಡ ಹೊಡೆತ ಬೀಳುತ್ತದೆ.
ಮೇಲೆ ತಿಳಿಸಿದ ಎಲ್ಲಾ ಕಾರಣಗಳಿಂದಾಗಿ ಸಾವಯವ ಕೃಷಿಮಿಷನ್ ಕುಲಾಂತರಿ ತಳಿಗಳ ಬಗ್ಗೆ ತನ್ನವಿರೋಧ ವ್ಯಕ್ತಪಡಿಸುತ್ತದೆ. ಈ ವಿಚಾರವಾಗಿ ಮಿಷನ್ ವತಿಯಿಂದ ರೈತರ, ಗ್ರಾಹಕರ, ವಿಜ್ಞಾನಿಗಳ ಕಾರ್ಯಗಾರವೊಂದನ್ನು ಸದ್ಯದಲ್ಲೇ ಏರ್ಪಡಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯ ಸರ್ಕಾರವು ಕೂಡ ಕುಲಾಂತರಿ ತಳಿಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಾವಯವ ಕೃಷಿ ಮಿಷನ್ ಅನುವು ಮಾಡಿಕೊಡುತ್ತದೆ. ನಾಟಿ ತಳಿಗಳ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ಹಾಗೂ ಕುಲಾಂತರಿ ತಳಿಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಿಷನ್ ವ್ಯಾಪಕವಾಗಿ ಹಮ್ಮಿಕೊಳ್ಳಲಿದೆ ಎಂದು ಕೃಷಿ ಆಯುಕ್ತಾಲಯದ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications