ಬಿ.ಟಿ ಬದನೆ ಸಾವಯವ ಕೃಷಿ ಮಿಷನ್ ಅರಿವು

ಸಾವಯವ ಮಿಷನ್ ವತಿಯಿಂದ ಸ್ಥಳೀಯ/ನಾಟಿ ಬೀಜಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದರ ಮುಖ್ಯ ಉದ್ದೇಶವು ರೈತರು ಸಾದ್ಯವಾದಷ್ಟೂ ಮಟ್ಟಿಗೆ ಹೊರಗಿನ ಕಂಪನಿಗಳ ಮೇಲೆ ಬೀಜಕ್ಕೆ ಅಬಲಂಬಿತರಾಗದೇ ತಮ್ಮ ಮಟ್ಟದಲ್ಲಿಯೇ ಸಾಧ್ಯವಾದಷ್ಟೂ ಮಟ್ಟಿಗೆ ಬೀಜವನ್ನು ಉತ್ಪಾದಿಸಿಕೊಳ್ಳುವುದೂ ಆಗಿರುತ್ತದೆ.
ಸ್ಥಳೀಯ/ನಾಟಿ ಬೀಜಗಳಿಗೆ ಭೂಮಿಯಿಂದ ಮತ್ತು ಸಾವಯವ ಗೊಬ್ಬರಗಳಿಂದ ಪೋಷಕಾಂಶಗಳನ್ನು ಚೆನ್ನಾಗಿ ಪಡೆದುಕೊಳ್ಳುವ ಶಕ್ತಿ ಇರುತ್ತದೆ. ಈ ಕಾರಣದಿಂದಾಗಿ ರೈತರ ಉತ್ಪಾದನೆ ವೆಚ್ಚ ಕಡಿಮೆ ಆಗಿರುತ್ತದೆ. ವಿಷ ರಹಿತ ಆಹಾರದ ಉತ್ಪಾದನೆ ಸಾಧ್ಯವಾಗುತ್ತದೆ.
ಕೇಂದ್ರ ಸರ್ಕಾರವು ಜೈವಿಕ ತಂತ್ರಜ್ಞಾನ ರಂಗದ ನಿಯಂತ್ರಣ ಸಂಸ್ಥೆಯಾಗಿರುವ ಕುಲಾಂತರಿ ಅನುಮೋದನಾ ಸಮಿತಿಯು ಕುಲಾಂತರಿ ಬದನೆಯ ವಾಣಿಜ್ಯ ಬೆಳೆಗೆ ಅನುಮೋದನೆ ನೀಡಿರುವುದು ಮಿಷನ್ ಗಮನಕ್ಕೆ ಬಂದಿರುತ್ತದೆ. ಸಮಿತಿಯು ಅನುಮೋದನೆ ನೀಡಿದರೂ ಬಿ.ಟಿ. ತಳಿಯ ಬದನೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರದ ಅನುಮತಿ ಬೇಕಾಗಿರುತ್ತದೆ. ಕೇಂದ್ರ ಸರ್ಕಾರ ಈ ಸಂಬಂಧದಲ್ಲಿ ಯಾವುದೇ ನಿರ್ಣಯ ಕೈಗೊಳ್ಳುವ ಮುನ್ನ ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸುವುದು ಅವಶ್ಯಕ.
ಬಿ.ಟಿ. ಬದನೆ ಬಗ್ಗೆ ಈ ಕೆಳಕಂಡ ತೀವ್ರತರವಾದ ಆಕ್ಷೇಪಣೆಗಳಿರುತ್ತವೆ.
*ಮನುಷ್ಯ, ಜಾನುವಾರುಗಳ ಮತ್ತು ಪರಿಸರದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ.
*ಸ್ಥಳೀಯ/ನಾಟಿ ತಳಿ ಬದನೆಗಳ ನಾಶ.
*ಬಹುರಾಷ್ಟ್ರೀಯ ಕಂಪನಿಗಳ ಮೇಲೆ ಜೀಜಕ್ಕಾಗಿ ಅವಲಂಬನೆ ಮತ್ತು ಈ ಕಂಪೆನಿಗಳ ಏಕಸ್ವಾಮ್ಯ.
*ಉತ್ಪದನಾ ವೆಚ್ಚ ಹೆಚ್ಚಳ.
*ಸಾವಯವ ಪ್ರಮಾಣೀಕರಣ ಪ್ರಕ್ರಿಯೆಯಲ್ಲಿ ಬಿ.ಟಿ. ತಳಿಗಳಿಗೆ ಅವಕಾಶವಿಲ್ಲ. ಇದರಿಂದಾಗಿ ಸಾವಯವ ಕೃಷಿ ಉತ್ಪನ್ನಗಳ ಮಾರುಕಟ್ಟೆಗೆ ದೊಡ್ಡ ಹೊಡೆತ ಬೀಳುತ್ತದೆ.
ಮೇಲೆ ತಿಳಿಸಿದ ಎಲ್ಲಾ ಕಾರಣಗಳಿಂದಾಗಿ ಸಾವಯವ ಕೃಷಿಮಿಷನ್ ಕುಲಾಂತರಿ ತಳಿಗಳ ಬಗ್ಗೆ ತನ್ನವಿರೋಧ ವ್ಯಕ್ತಪಡಿಸುತ್ತದೆ. ಈ ವಿಚಾರವಾಗಿ ಮಿಷನ್ ವತಿಯಿಂದ ರೈತರ, ಗ್ರಾಹಕರ, ವಿಜ್ಞಾನಿಗಳ ಕಾರ್ಯಗಾರವೊಂದನ್ನು ಸದ್ಯದಲ್ಲೇ ಏರ್ಪಡಿಸುವ ಉದ್ದೇಶ ಹೊಂದಲಾಗಿದೆ. ರಾಜ್ಯ ಸರ್ಕಾರವು ಕೂಡ ಕುಲಾಂತರಿ ತಳಿಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಾವಯವ ಕೃಷಿ ಮಿಷನ್ ಅನುವು ಮಾಡಿಕೊಡುತ್ತದೆ. ನಾಟಿ ತಳಿಗಳ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ಹಾಗೂ ಕುಲಾಂತರಿ ತಳಿಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಿಷನ್ ವ್ಯಾಪಕವಾಗಿ ಹಮ್ಮಿಕೊಳ್ಳಲಿದೆ ಎಂದು ಕೃಷಿ ಆಯುಕ್ತಾಲಯದ ಪ್ರಕಟಣೆ ತಿಳಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications