Union Budget 2023: ಕೃಷಿ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಘೋಷಣೆಗಳೇನು? ತಿಳಿಯಿರಿ
2023 ಮತ್ತು 2024 ನೇ ಆರ್ಥಿಕ ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಕೃಷಿ ಕ್ಷೇತ್ರಕ್ಕೆ ಒಂದಷ್ಟು ಘೋಷಣೆಗಳನ್ನು ಮಾಡಿದ್ದಾರೆ.
ಬೆಂಗಳೂರು, ಫೆಬ್ರುವರಿ 01: 2023 ಮತ್ತು 2024 ನೇ ಆರ್ಥಿಕ ಸಾಲಿನ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದ ಕೃಷಿ ಕ್ಷೇತ್ರಕ್ಕೆ ಒಂದಷ್ಟು ಘೋಷಣೆಗಳನ್ನು ಮಾಡಿದ್ದಾರೆ.
ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್ಅಪ್ಗಳನ್ನು ಉತ್ತೇಜಿಸಲು ಕೃಷಿ ವೇಗ ನೀಡುವ ಉದ್ದೇಶದ ನಿಧಿ ಆರಂಭಿಸಲಾಗುವುದು. ಕೃಷಿಯಲ್ಲಿ ಹೆಚ್ಚು ಮಂದಿ ಅವಲಂಬಿಸಿರುವ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಗಮನದಲ್ಲಿಟ್ಟುಕೊಂಡು ಕೃಷಿ ಸಾಲದ ಗುರಿಯನ್ನು ರೂ.20 ಟ್ರಿಲಿಯನ್ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಹಿಂದಿನ ವರ್ಷ ಸರ್ಕಾರವು 2022-23 ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿ ರೂ.16.50 ಟ್ರಿಲಿಯನ್ನಿಂದ ರೂ.18 ಟ್ರಿಲಿಯನ್ಗೆ ಏರಿಕೆ ಮಾಡಿದ್ದೇವೆ. ಕೇಂದ್ರ ಸರ್ಕಾರ 10 ಮಿಲಿಯನ್ ರೈತರನ್ನು ನೈಸರ್ಗಿಕ ಕೃಷಿ ಮಾಡಲು ಪ್ರೋತ್ಸಾಹಿಸುತ್ತದೆ ಎಂದು ಅವರು ವಿವರಿಸಿದರು.

ಕೃಷಿ ಮೂಲಭೂತ ಸೌಕರ್ಯಕ್ಕಾಗಿ ಡಿಜಿಟಲ್ ವ್ಯವಸ್ಥೆ ಪ್ರಬಲಗೊಳಿಸುವುದು. ಅಂತರ್ಗತ ರೈತ-ಕೇಂದ್ರಿತ ಪರಿಹಾರಗಳನ್ನು ಸಕ್ರಿಯಗೊಳಿಸುವ ಜೊತೆಗೆ ಕೃಷಿ ಒಳಹರಿವು, ಮಾರುಕಟ್ಟೆ ಇಂಟೆಲ್ ಹಾಗೂ ಕೃಷಿ ಉದ್ಯಮ, ಸ್ಟಾರ್ಟ್ಅಪ್ ಬೆಂಬಲಿಸಲಾಗುವುದು.
ಇನ್ನೂ ಪರ್ಯಾಯ ರಸಗೊಬ್ಬರ ಬಳಕೆ ಹೆಚ್ಚಳ ಸಂಬಂಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಉತ್ತೇಜಿಸಲು ಸರ್ಕಾರ PM PRANAM ಯೋಜನೆ ಆರಂಭಿಸಲಿದೆ ಎಂದರು.
ಕೃಷಿಗೆ ಪೂರಕವಾದ ಬಜೆಟ್
ಕೃಷಿ ವಲಯಕ್ಕೆ ಅತ್ಯಗತ್ಯಾವಾಗಿ ಬೇಕಾದ ಸೌಲಭ್ಯಗಳನ್ನು ಪೂರೈಸುವತ್ತ ಕೇಂದ್ರ ಬಜೆಟ್ ಹೆಚ್ಚು ಒತ್ತು ನೀಡಿದೆ. ಕೃಷಿಗೆ ಹೆಚ್ಚು ಸಾಲ ಲಭಿಸುವಂತೆ ಮಾಡುವುದು, ಅನುಕೂಲಕ್ಕೆ ತಕ್ಕ ಹಾಗೇ ಡಿಜಿಟಲ್ ಮೂಲಸೌಕರ್ಯ ವ್ಯವಸ್ಥೆ ಮಾಡುವ ಜೊತೆಗೆ ಸೂಕ್ತ ಬಂಡವಾಳ ಹೂಡಿಕೆಗೆ ಅನುಮಾಡಿಕೊಡಲು ಸರ್ಕಾರ ಮುಂದಾಗಿದೆ. ಈ ಎಲ್ಲ ಅಂಶಗಳು ಕೃಷಿ ವಲಯದ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಡೆಲಾಯ್ಟ್ ಇಂಡಿಯಾ ಸಂಸ್ಥೆ ಪಾಲುದಾರರಾದ ಆನಂದ್ ರಾಮನಾಥನ್ ಪ್ರತಿಕ್ರಿಯಿಸಿದ್ದಾರೆ.

ಕೃಷಿ ಉತ್ಪನ್ನಗಳ ರಫ್ತುಗಳ ಮೇಲೆ ಹೆಚ್ಚಿನ ಗಮನ ಹರಿಸಲಾಗಿದೆ. ಮೀನುಗಾರಿಕೆ ವಿಭಾಗದಲ್ಲಿ ಅಧಿಕ ಹೂಡಿಕೆ ಮತ್ತು ನೈಸರ್ಗಿಕ ಕೃಷಿಗೆ ಉತ್ತೇಜನ ನೀಡುವುದು, ಬೆಳೆ ವೈವಿಧ್ಯತೆ ಅನುಸರಿಸುವುದು, ಸುಸ್ಥಿರತೆ ಕಾಪಾಡುವುದು ಹಾಗೂ ಪೌಷ್ಟಿಕಾಂಶದತ್ತ ದೃಷ್ಠಿ ಹರಿಸುವುದು ಬಜೆಟ್ನ ಪ್ರಮುಖ ಅಂಶಗಳಾಗಿವೆ.
ಅದೇ ರೀತಿ ಸಹಕಾರಿ ಸಂಘಗಳು ಮತ್ತು ಉತ್ಪಾದಕ ಸಮೂಹಗಳ ಉತ್ತಮ ನಿರ್ವಹಣೆಯಿಂದ ರೈತರಿಗೆ ಸಹಾಯವಾಗಲಿದೆ. ಆಗ್ರಿ-ಟೆಕ್ ಉದ್ಯಮಗಳಲ್ಲಿ ಸ್ಟಾರ್ಟ್-ಅಪ್ಗಳನ್ನು ಉತ್ತೇಜಿಸಲು ಸರ್ಕಾರ ತೀರ್ಮಾನಿಸಿದೆ. ಬೆಳೆ ಇಳುವರಿ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಿ ಸಮರ್ಪಕ ಮಾರುಕಟ್ಟೆಯ ಬೇಡಿಕೆ ಈಡೇರಿಸುವ ಅಂಶಗಳು ಬಜೆಟ್ನಲ್ಲಿ ಅಡಕವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications