ಹಿಂಗಾರು ರಸಗೊಬ್ಬರ ಸಬ್ಸಿಡಿಗೆ ಕೇಂದ್ರದ ಅನುಮೋದನೆ
ನವದೆಹಲಿ, ನ.02: ಹಿಂಗಾರು ಋತುವಿನ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳಿಗೆ ಅಕ್ಟೋಬರ್ 1ರಿಂದ 2023 ಮಾರ್ಚ್ 31ರ ವರೆಗೆ 51,875 ಕೋಟಿ ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳ ವಿವಿಧ ಪೋಷಕಾಂಶಗಳಾದ ಸಾರಜನಕ(ಎನ್), ರಂಜಕ(ಪಿ), ಪೊಟ್ಯಾಷ್(ಕೆ), ಸಲ್ಫರ್(ಎಸ್) ಪೊಟ್ಯಾಷ್(ಪಿ)ಗೆ ಪ್ರತಿ ಕಿಲೋಗ್ರಾಂ ದರದಲ್ಲಿ ಪೋಷಕಾಂಶ ಆಧಾರಿತ ಸಬ್ಸಿಡಿ (ಎನ್ಬಿಎಸ್) ಒದಗಿಸುವ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆಯ ಪ್ರಸ್ತಾವನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಕೇಂದ್ರ ಸಚಿವ ಸಂಪುಟ ಸಭೆಯು 2022ರ ಹಿಂಗಾರು ಹಂಗಾಮಿಗೆ ಅಂದರೆ 2022 ಅಕ್ಟೋಬರ್ 01ರಿಂದ 2023 ಮಾರ್ಚ್ 31ರ ವರೆಗೆ ಅನ್ವಯವಾಗುವಂತೆ, ರಸಗೊಬ್ಬರಗಳ ಪೋಷಕಾಂಶ ಆಧರಿತ ಸಬ್ಸಿಡಿ ಮೊತ್ತ 51,875 ಕೋಟಿ ರೂ. ಒದಗಿಸಲು ಅನುಮೋದನೆ ನೀಡಿದೆ. ದೇಶೀಯ ರಸಗೊಬ್ಬರ ಕಾರ್ಖಾನೆಗಳಿಗೆ ಬೆಂಬಲ ನೀಡಲು ಕೇಂದ್ರ ಸರ್ಕಾರವು, ಸರಕು ಸಬ್ಸಿಡಿ ಮೂಲಕ ಈ ಸಹಾಯಧನ ಒದಗಿಸುತ್ತಿದೆ.

2022-23ರ ಹಿಂಗಾರು ಹಂಗಾಮಿನಲ್ಲಿ ದೇಶದ ರೈತರಿಗೆ ರಾಸಾಯನಿಕಗಳು ಮತ್ತು ರಸಗೊಬ್ಬರಗಳು ಸಬ್ಸಿಡಿ ಹಾಗೂ ಕೈಗೆಟುಕುವ ಬೆಲೆಗೆ ಸಿಗುವಂತೆ ಮಾಡಲು ಇದು ಸಹಕಾರಿ. ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ (ಪಿ&ಕೆ) ರಸಗೊಬ್ಬರಗಳ ಸುಗಮ ಲಭ್ಯತೆ ದೊರೆಯುವುದರಿಂದ ಕೃಷಿ ವಲಯಕ್ಕೆ ಬೆಂಬಲ ದೊರೆಯಲಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಸಗೊಬ್ಬರಗಳು ಮತ್ತು ಕಚ್ಚಾ ವಸ್ತುಗಳ ಬೆಲೆ ಏರಿಳಿತವನ್ನು ಹತ್ತಿಕ್ಕಲು ಸರ್ಕಾರದ ಈ ನಿರ್ಧಾರವು ಸಹಾಯಕವಾಗಲಿದೆ.
ಕೇಂದ್ರ ಸರ್ಕಾರವು ರಸಗೊಬ್ಬರ ತಯಾರಕರು, ಆಮದುದಾರರ ಮೂಲಕ ರೈತರಿಗೆ ಸಬ್ಸಿಡಿ ಬೆಲೆಯಲ್ಲಿ ಯೂರಿಯಾ ಮತ್ತು ಪಿ&ಕೆ ರಸಗೊಬ್ಬರಗಳ 25 ಶ್ರೇಣಿಗಳು ರೈತರಿಗೆ ಲಭ್ಯವಾಗುವಂತೆ ಮಾಡುತ್ತಿದೆ. ಪಿ ಅಂಡ್ ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಪೋಷಕಾಂಶ ಆಧರಿತ ಸಬ್ಸಿಡಿ(ಎನ್ ಬಿ ಎಸ್) ಯೋಜನೆ ಮೂಲಕ ರೈತಸ್ನೇಹಿ ವಿಧಾನಕ್ಕೆ ಅನುಗುಣವಾಗಿ, ಕೇಂದ್ರ ಸರ್ಕಾರವು ಕೈಗೆಟಕುವ ಬೆಲೆಗೆ ರೈತರಿಗೆ ಪಿ&ಕೆ ರಸಗೊಬ್ಬರಗಳ ದೊರೆಯುವಂತೆ ಮಾಡುತ್ತಿದೆ.

ಯೂರಿಯಾ, ಡಿಎಪಿ, ಎಂಒಪಿ ಮತ್ತು ಸಲ್ಫರ್ ಮತ್ತಿತರ ರಸಗೊಬ್ಬರಗಳ ಅಂತಾರಾಷ್ಟ್ರೀಯ ಬೆಲೆ ಏರಿಳಿತದಿಂದ ರೈತರಿಗೆ ಆಗುವ ಹಣಕಾಸಿನ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರವು, ಡಿಎಪಿ ಸೇರಿದಂತೆ ಪಿ & ಕೆ ರಸಗೊಬ್ಬರಗಳ ಮೇಲಿನ ಸಬ್ಸಿಡಿ ಹೆಚ್ಚಿಸುವ ಮೂಲಕ ರೈತರಿಗೆ ಬೆಂಬಲ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅನುಮೋದಿತ ದರಗಳ ಪ್ರಕಾರ, ದೇಶೀಯ ರಸಗೊಬ್ಬರ ಕಂಪನಿಗಳಿಗೆ ಸಬ್ಸಿಡಿ ಬಿಡುಗಡೆ ಮಾಡಲಾಗುವುದು ಇದರಿಂದ ಅವರು ರೈತರಿಗೆ ಕೈಗೆಟುಕುವ ಬೆಲೆಗೆ ರಸಗೊಬ್ಬರ ಲಭ್ಯವಾಗುವಂತೆ ಮಾಡುತ್ತಾರೆ.
2022-23ರ ಹಿಂಗಾರು ಸಬ್ಸಿಡಿ. ರೂಪಾಯಿಗಳಲ್ಲಿ.
ಸಾರಜನಕ(ಎನ್)- 98.02
ರಂಜಕ(ಪಿ)- 66.93
ಪೊಟ್ಯಾಷ್(ಕೆ)- 23.65
ಸಲ್ಫರ್(ಎಸ್)- 6.12
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications