ಭತ್ತಕ್ಕೆ 200 ರೂ. ಕನಿಷ್ಠ ಬೆಂಬಲ ಬೆಲೆ: ಕೇಂದ್ರ ಸಂಪುಟ ಅನುಮೋದನೆ
ನವದೆಹಲಿ, ಜುಲೈ 4: ಭತ್ತಕ್ಕೆ ನೀಡುವ ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಕ್ವಿಂಟಲ್ಗೆ 200 ರೂ.ನಷ್ಟು ಹೆಚ್ಚಿಸಿದೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಈ ನಿರ್ಧಾರ ಕೈಗೊಂಡಿದೆ.
ರೈತರಿಗೆ ತಮ್ಮ ಉತ್ಪಾದನೆಯ ವೆಚ್ಚಕ್ಕಿಂತ ಶೇ 50ಕ್ಕಿಂತ ಹೆಚ್ಚು ದರ ನೀಡುವ ಚುನಾವಣಾ ಪೂರ್ವ ಭರವಸೆಯನ್ನು ಈಗ ಈಡೇರಿಸುವತ್ತ ಕೇಂದ್ರ ಸರ್ಕಾರ ಮುಂದಾಗಿದೆ.
ರೈತರ ಕೃಷಿ ಉತ್ಪನ್ನಗಳಿಗೆ ಅದಕ್ಕೆ ತಗಲುವ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚಿನ ದರವನ್ನು ನೀಡುವುದಾಗಿ 2014ರಲ್ಲಿ ಬಿಜೆಪಿ ಭರವಸೆ ನೀಡಿತ್ತು.

ಈ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರವು ಈ ವರ್ಷದ ಫೆಬ್ರುವರಿ 1ರಂದು ಮಂಡಿಸಿದ ಕೊನೆಯ ವಾರ್ಷಿಕ ಬಜೆಟ್ನಲ್ಲಿ ಚಾಲನೆ ನೀಡುವ ಪ್ರಯತ್ನಕ್ಕೆ ಮುಂದಾಗಿತ್ತು.
ಭತ್ತ ಸೇರಿದಂತೆ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಿಸುವ ಕುರಿತು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ನಡೆಸಿದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಸಾಮಾನ್ಯ ದರ್ಜೆಯ ಭತ್ತದ ದರವು 200 ರೂ.ನಷ್ಟು ಹೆಚ್ಚಳವಾಗಿದ್ದು, ಕ್ವಿಂಟಲ್ಗೆ 1,750 ಲಭ್ಯವಾಗಲಿದೆ. ಹಾಗೆಯೇ 'ಎ' ದರ್ಜೆಯ ಭತ್ತದ ಕನಿಷ್ಠ ಬೆಲೆಯನ್ನು 160 ರೂ.ಗೆ ಏರಿಸಲಾಗಿದ್ದು, ರೈತರಿಗೆ ಕ್ವಿಂಟಲ್ಗೆ 1,750 ರೂ. ಸಿಗಲಿದೆ.
ಮಧ್ಯಮ ಗಾತ್ರದ ಹತ್ತಿಯ ಕನಿಷ್ಠ ಬೆಂಬಲ ಬೆಲೆಯು ಕ್ವಿಂಟಲ್ಗೆ 4,020 ರೂ.ನಿಂದ 5,150 ರೂ.ಗೆ ಹೆಚ್ಚಳವಾಗಿದೆ. ಉದ್ದದ ಗಾತ್ರದ ಹತ್ತಿಯ ಎಂಎಸ್ಪಿ 4,320 ರೂ.ನಿಂದ 5,450 ರೂ.ಗೆ ಏರಿಕೆಯಾಗಿದೆ.
ಧಾನ್ಯಗಳ ಎಂಎಸ್ಪಿಯಲ್ಲಿಯೂ ಹೆಚ್ಚಳ ಮಾಡಲಾಗಿದೆ. ತೊಗರಿಬೇಳೆಯು ಕ್ವಿಂಟಲ್ಗೆ 5,450 ರೂ. ನಿಂದ 5,675 ರೂಪಾಯಿಗೆ ಹೆಚ್ಚಳವಾಗಿದೆ. ಕನಿಷ್ಠ ಬೆಂಬಲ ಬೆಲೆಯ ನೆರವಿನಿಂದ ಹೆಸರು ಬೇಳೆ ಕ್ವಿಂಟಲ್ಗೆ 5,757 ರೂಪಾಯಿಯಿಂದ 6,975ಗೆ ಏರಿಕೆಯಾಗಿದೆ. ಕ್ವಿಂಟಲ್ಗೆ 5,400 ರೂ.ನಷ್ಟಿದ್ದ ಉದ್ದಿನ ಬೇಳೆ ದರ 5600 ರೂ.ಗೆ ತಲುಪಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications