ಡಿಎಪಿ ರಸಗೊಬ್ಬರ ಸಬ್ಸಿಡಿ 700 ರೂ. ಹೆಚ್ಚಳ
ನವದೆಹಲಿ, ಜೂನ್ 17: ಡಿಎಪಿ ರಸಗೊಬ್ಬರದ ಮೇಲೆ ರೈತರಿಗೆ ನೀಡುವ ಸಬ್ಸಿಡಿಯನ್ನು 700 ರೂ,ಗೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ.
ಈ ಮೊದಲು ಡಿಎಪಿ ರಸಗೊಬ್ಬರ ಖರೀದಿ ಮೇಲೆ ರೈತರಿಗೆ 500 ರೂ. ಸಬ್ಸಿಡಿ ನೀಡಲಾಗುತ್ತಿದ್ದು, ಅದನ್ನು ಈಗ 700 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಚಿವ ಮನಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಜಾಗತಿಕ ಬೆಲೆ ಏರಿಕೆ ಹೊರತಾಗಿಯೂ ರೈತರಿಗೆ ಹಳೆಯ ದರದಲ್ಲೇ ಡಿಎಪಿ ರಸಗೊಬ್ಬರ ಪೂರೈಸುವ ಉದ್ದೇಶದೊಂದಿಗೆ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 141775 ಕೋಟಿ ರೂ. ಹೊರೆ ಬೀಳಲಿದೆ. ಡಿಎಪಿ ರಸಗೊಬ್ಬರದ ಸಬ್ಸಿಡಿಯನ್ನು ಶೇ.140 ಏರಿಸುವ ತೀರ್ಮಾನವನ್ನು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಡಿಎಪಿಗೆ (ಡೈ ಅಮೋನಿಯಂ ಫಾಸ್ಫೇಟ್) ಒಟ್ಟು 1200 ರೂಪಾಯಿ ಸಬ್ಸಿಡಿ ನೀಡಲು ನಿರ್ಧಾರವಾಗಿದೆ. ರೈತರಿಗೆ ಒಂದು ಮೂಟೆ ಡಿಎಪಿ 1,200 ರೂಪಾಯಿಗೆ ಸಿಗಲಿದೆ. ಮಾರ್ಕೆಟ್ನಲ್ಲಿ 1 ಮೂಟೆ ಡಿಎಪಿ ಬೆಲೆ 2,400 ರೂ. ಇದೆ. ಯೂರಿಯಾಗೆ 900 ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಒಳನಾಡು ಜಲಸಾರಿಗೆ ಮಾರ್ಗದ ಅಭಿವೃದ್ಧಿಗೆ ನಿರ್ಣಯ ತೆಗೆದುಕೊಂಡರು. ಸಮುದ್ರದ ಆಳದ ಮಿಷನ್ ರಚನೆಗೆ ಕೇಂದ್ರ ಸಂಪುಟ ಒಪ್ಪಿಗೆ ಸಿಕ್ಕಿದೆ. ಇದರ ಮೂಲಕ ಸಾಕಷ್ಟು ಅಭಿವೃದ್ಧಿ ಕಾಣಬಹುದಾಗಿದೆ ಎಂದರು.
ಸಮುದ್ರದ 6 ಸಾವಿರ ಮೀಟರ್ ಒಳಭಾಗದಲ್ಲಿ ಖನಿಜಗಳಿವೆ. ಸಮುದ್ರದ ಆಳದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಅಧ್ಯಯನ ನಡೆಯಲಿದೆ. ಅಡ್ವಾನ್ಸ್ ಮರೀನ್ ಸ್ಟೇಷನ್ ಸ್ಥಾಪಿಸಲಾಗುತ್ತದೆ ಎಂದು ಸಚಿವ ಜಾವಡೇಕರ್ ಮಾಹಿತಿ ನೀಡಿದರು.
ಸಾಗರದಾಳದ ಜೀವ ವೈವಿಧ್ಯ ಮತ್ತು ಹವಾಮಾನ ವೈಪರೀತ್ಯದ ಕುರಿತೂ ಇಲ್ಲಿ ಗಮನಿಸಲಾಗುತ್ತದೆ ಎಂದು ಸಚಿವರು ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications