ರೈತರು ಕೇಳಿದಷ್ಟು ಪರಿಹಾರ ಕೊಡಲು ಆಗದು: ಡಿಸಿಎಂ ಲಕ್ಷ್ಮಣ ಸವದಿ
Recommended Video
ಬೆಳಗಾವಿ, ಅಕ್ಟೋಬರ್ 04: ರೈತರು ಕೇಳಿದಷ್ಟು ನೆರೆ ಪರಿಹಾರ ನೀಡಲು ಸಾಧ್ಯವಿಲ್ಲವೆಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ನೆರೆ ಪರಿಹಾರಕ್ಕೆ ಮನವಿ ಮಾಡಿದ ರೈತರನ್ನು ಭೇಟಿಯಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ ಸವದಿ ಅವರು ಹೀಗೆ ಹೇಳಿದ್ದಾರೆ.
'ರೈತರು ಕೇಳಿದಷ್ಟು ಪರಿಹಾರ ನೀಡಿದರೆ ನಾನೇ 1 ಕೋಟಿ ರೂಪಾಯಿ ಪರಿಹಾರ ತೆಗೆದುಕೊಳ್ಳಬೇಕಾಗುತ್ತದೆ' ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

'ಎಕರೆಗೆ 50 ಸಾವಿರ, 1 ಲಕ್ಷ ಪರಿಹಾರ ಕೊಡಿ ಎಂದು ರೈತರು ಕೇಳುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೆರ ಪರಿಹಾರ ವಿತರಣೆ ಮಾರ್ಗಸೂಚಿ ತೆಗೆದುಬಿಡಿ ಎಂದು ಕೇಳುತ್ತಿದ್ದಾರೆ. ಎಲ್ಲರಿಗೂ ಗರಿಷ್ಠ ಪರಿಹಾರ ಕೊಟ್ಟುಬಿಡಿ ಎನ್ನುತ್ತಿದ್ದಾರೆ ಇದು ಸಾಧ್ಯವಿಲ್ಲ' ಎಂದು ಸವದಿ ಹೇಳಿದರು.
ರೈತರು ಹೇಳಿದಂತೆ ಮಾಡಲಾಗುವುದಿಲ್ಲ ಎಂದ ಸವದಿ, ಕೇಂದ್ರವು ಕೊಡುವ ಬೆಳೆ ಪರಿಹಾರದೊಂದಿಗೆ ನಾವೂ ಒಂದಷ್ಟು ಸೇರಿಸಿ ಕೊಡಬೇಕು ಎಂಬ ಚಿಂತನೆ ನಡೆಸಿದ್ದೇವೆ. ರೈತ ಮುಖಂಡರಿಗೆ ಸಮಾಧಾನ ಆಗದೇ ಇದ್ದರೆ ನಾನೇನೂ ಮಾಡಲು ಆಗುವುದಿಲ್ಲ' ಎಂದು ಸವದಿ ಕೈಚೆಲ್ಲಿದರು.
ಜಿಲ್ಲಾ ವಿಭಜನೆ ಬಗ್ಗೆಯೂ ಇದೇ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, 'ಬಳ್ಳಾರಿ, ಬೆಳಗಾವಿ ಸೇರಿದಂತೆ ಯಾವುದೇ ಜಿಲ್ಲೆಗಳ ವಿಭಜನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ'' ಎಂದು ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications