ಕಾವೇರಿ ವಿವಾದ: ತಮಿಳುನಾಡಿನಲ್ಲಿ ಮೂರನೇ ಬೆಳೆಗೆ ನಿರ್ಬಂಧ ವಿಧಿಸುವಂತೆ ಮಾಜಿ ಸಚಿವ ತಮ್ಮಣ್ಣ ಒತ್ತಾಯ
ಮಂಡ್ಯ, ಅಕ್ಟೋಬರ್, 04: ರಾಷ್ಟ್ರದ ಬಹುತೇಕ ಎಲ್ಲ ರಾಜ್ಯಗಳಲ್ಲೂ ವರ್ಷಕ್ಕೆ ಎರಡು ಬೆಳೆ ಬೆಳೆಯಲು ಅವಕಾಶ ಇದೆ. ಆದರೆ ತಮಿಳುನಾಡಿನಲ್ಲಿ ಮಾತ್ರ ಮೂರು ಬೆಳೆ ಬೆಳೆಯುತ್ತಿದ್ದಾರೆ. ಇದಕ್ಕೆ ಮೊದಲು ನಿರ್ಬಂಧ ವಿಧಿಸುವ ನಿಟ್ಟಿನಲ್ಲಿ ಕಾನೂನು ಹೋರಾಟ ಮಾಡಬೇಕು ಎಂದು ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಒತ್ತಾಯಿಸಿದರು.
ನಗರದ ಸರ್.ಎಂ.ವಿ. ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಕೃತಿ ಯಾರ ಸ್ವತ್ತೂ ಅಲ್ಲ, ಮಳೆ ಕೊರತೆಯಾಗಿ ಸಂಕಷ್ಟ ಪರಿಸ್ಥಿತಿ ಬಂದಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಬಳಕೆ ಮಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಕರ್ನಾಟಕದ ರೈತರು ಬೇರಲ್ಲ, ತಮಿಳುನಾಡಿನವರು ಬೇರೆಲ್ಲ, ಆದರೆ ನಮ್ಮಲ್ಲಿ ಒಂದು ಬೆಳೆಗೆ ನೀರು ಕೊಡುವುದಿರಲಿ, ಕುಡಿಯಲೂ ನೀರಿಲ್ಲದ ಪರಿಸ್ಥಿತಿ ಇರುವಾಗ ಮೂರನೇ ಬೆಳೆ ಬೆಳೆಯಲು ನೀರು ಕೇಳುವುದು ಯಾವ ನ್ಯಾಯ ಎಂಬುದನ್ನು ಎಲ್ಲರೂ ಅರಿಯಬೇಕು. ಮತ್ತು ಈ ವಿಚಾರವನ್ನು ಸುಪ್ರೀಂ ಕೋರ್ಟ್ಗೆ ನಮ್ಮ ಕಾನೂನು ತಂಡ ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.
ಮೂರನೇ ಬೆಳೆ ಬೆಳೆಯಲು ಸುಪ್ರೀಂ ಕೋರ್ಟ್ ನಿರ್ಬಂಧ ಹೇರಬೇಕು. ಈ ಬಗ್ಗೆ ನ್ಯಾಯಾಲಯಕ್ಕೆ ಸಮಗ್ರ ಮಾಹಿತಿಯೊಂದಿಗೆ ಮನವರಿಕೆ ಮಾಡಿಕೊಟ್ಟಲ್ಲಿ ನಮಗೆ ಸ್ವಲ್ಪ ಮಟ್ಟಿಗೆ ನ್ಯಾಯ ಸಿಗಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ನೀರು ಹಂಚಿಕೆಯಾಗಿದೆ. ಆದರೆ ಸಂಕಷ್ಟ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿ ಆದೇಶದಲ್ಲಿ ತಿಳಿಸಿಲ್ಲ. ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.
ವಿಪರೀತ ಮಳೆ ಬಂದು ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದುಹೋಗುತ್ತಿರುವ ಬಗ್ಗೆಯೂ ಮಾಹಿತಿ ನೀಡಬೇಕು. ಅದನ್ನು ಸಂಗ್ರಹಿಸಿ ಉಪಯೋಗ ಮಾಡಿಕೊಳ್ಳುವ ಬಗ್ಗೆಯೂ ನ್ಯಾಯಾಲಯದಿಂದಲೇ ಆದೇಶ ಪಡೆಯಬೇಕು ಎಂದು ಹೇಳಿದರು. ಹಾಗೆಯೇ ಈ ಎಲ್ಲಾ ಬೇಡಿಕೆಗಳನ್ನು ಸುಪ್ರೀಂ ಕೋರ್ಟ್ನ ಮುಂದಿಟ್ಟು ತಾತ್ಕಾಲಿಕವಾಗಿ ಪರಿಹಾರ ಕಂಡುಕೊಂಡು ಉಪಯೋಗ ಮಾಡಿಕೊಂಡ ನಂತರ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೋರಾಟ ರೂಪಿಸಬೇಕು ಎಂದು ತಿಳಿಸಿದರು.
ಕರ್ನಾಟಕದಿಂದ ತಮಿಳುನಾಡಿಗೆ ಹರಿದುಹೋಗುವ ನೀರನ್ನು ಅಳೆಯಲು ಬಿಳಿಗುಂಡ್ಲು ಬಳಿ ಅಳತೆ ಮಾಪನ ಅಳವಡಿಸಲಾಗಿದೆ. ಅದೇ ರೀತಿ ತಮಿಳುನಾಡಿನಲ್ಲಿ ಕಾವೇರಿ ಸಮುದ್ರಕ್ಕೆ ಸೇರುವ ಸ್ಥಳದಲ್ಲೂ ಅಳತೆ ಮಾಪನವನ್ನು ಅಳವಡಿಸಬೇಕು. ಎಷ್ಟು ಪ್ರಮಾಣದಲ್ಲಿ ಸಮುದ್ರಕ್ಕೆ ನೀರು ಹರಿದುಹೋಗುತ್ತದೆ ಎಂಬುದರ ಬಗ್ಗೆಯೂ ಮಾಹಿತಿ ಪಡೆಯಬೇಕು ಎಂದು ಹೇಳಿದರು.
ತಮಿಳುನಾಡಿನಲ್ಲಿ ಹೆಚ್ಚಾಗಿ ಅಂತರ್ಜಲ ಇದೆ. ಸಂಕಷ್ಟ ಸಮಯದಲ್ಲಿ ಅಂತರ್ಜಲವನ್ನು ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನಾವು ಸುಪ್ರೀಂ ಕೋರ್ಟ್ಗೆ ಎಲ್ಲ ಸಂಗತಿಗಳನ್ನೂ ತಿಳಿಸಿಕೊಡುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications