ಕಾವೇರಿ ಕಿಚ್ಚು: ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ವಿನೋದ್ ರಾಜ್, ಲೀಲಾವತಿ
ಮಂಡ್ಯ, ಸೆಪ್ಟೆಂಬರ್, 25: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎಂದು ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗೆಯೇ ಇಂದು ಮಂಡ್ಯದಲ್ಲಿ ನಟ ವಿನೋದ್ ರಾಜ್ ಹಾಗೂ ತಾಯಿ ಲೀಲಾವತಿ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದ್ದರು. ಹಾಗಾದರೆ ಅವರು ಏನು ಹೇಳಿದ್ದಾರೆ ಎನ್ನುವ ವಿವರನ್ನು ಇಲ್ಲಿ ತಿಳಿಯಿರಿ.
ಕಾವೇರಿ ನೀರನ್ನು ಅವಲಂಬಿಸಿರುವ ಕನ್ನಡಿರಿಗೆ ಎಷ್ಟು ಅನ್ಯಾಯ ಆಗುತ್ತಿದೆ ಎಂಬುದು ತಿಳಿದಿದೆ. ಪ್ರತಿ ಬಾರಿಯೂ ಕಾವೇರಿ ವಿಚಾರದಲ್ಲಿ ನ್ಯಾಯ ಸಿಗುತ್ತಿಲ್ಲ, ಇದು ನಿಲ್ಲಲು ಸಂಕಷ್ಟ ಸೂತ್ರ ಅನಿವಾರ್ಯವಿದೆ ಎಂದು ನಟ ವಿನೋದ್ ರಾಜ್ ಆಗ್ರಹಿಸಿದರು.

ನಗರದ ಸರ್ಎಂ.ವಿ.ಪ್ರತಿಮೆ ಎದುರು ಜಿಲ್ಲಾ ರೈತಹಿತಕ್ಷಣಾ ಸಮಿತಿ ನಡೆಸುತ್ತಿರುವ ಧರಣಿಗೆ ಬೆಂಬಲ ನೀಡಿ ಮಾತನಾಡಿದ ಅವರು, ಕೃಷಿ ಮಾಡುತ್ತಾ ನನಗೆ ನೀರಿನ ಅಭಾವ ತಿಳಿಯಿತು. ಪ್ರತಿ ಬಾರಿಯೂ ನಮಗೆ ಅನ್ಯಾಯ ಆಗಿದೆ. ಸಂಕಷ್ಟ ಸೂತ್ರ ಅನಿವಾರ್ಯವಿದೆ. ನಾವು ಕ್ಷೇಮವಾಗಿದ್ದರೆ ಇನ್ನೊಬ್ಬರ ಕ್ಷೇಮವನ್ನು ವಿಚಾರಿಸಬಹುದು. ನಾವು ಕ್ಷಾಮವಾದಾಗ ಇನ್ನೊಬವರ ಕ್ಷೇಮ ಕೇಳಲು ಆಗುವುದಿಲ್ಲ ಎಂದರು.
ತುಂಬಾ ನೋವುಂಟು ಮಾಡುವ ಸನ್ನಿವೇಶಗಳೇ ಹೆಚ್ಚಾಗಿದೆ, ಮಲತಾಯಿ ಧೋರಣೆಯೇ ಹೆಚ್ಚಾಗಿದೆ. ನಮ್ಮ ರೈತರಿಗೆ ಇಂತಹ ದುಸ್ಥಿತಿ ಬರಬಾರದು. ಕಾನೂನಿಗಿಂತ ನಾವು ದೊಡ್ಡವರಲ್ಲ. ಸುಪ್ರೀಂ ಹಾಗೂ ಪ್ರಾಧಿಕಾರ ವಾಸ್ತವ ಸ್ಥಿತಿ ನೋಡಿ ಆದೇಶ ಮಾಡಬೇಕು. ನೀರಿಲ್ಲ ನೀರಿಲ್ಲ ಎಂದು ಹೋರಾಡುತ್ತಿದ್ದೇವೆ. ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ. ರೈತರನ್ನು ವಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದರು.
ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಸರ್ಕಾರ ಚಿಂತನೆ ಮಾಡಬೇಕು. ವಾಸ್ತವ ಸ್ಥಿತಿ ಅರಿತುಕೊಳ್ಳಬೇಕು. ನಮಗೆ ಅವಾಮಾನವೇ ಆಗುತ್ತಿದೆ. ಜನರಿಗೋಸ್ಕರ ಯಾವ ಕೆಲಸನೂ ನಡೆಯುತ್ತಿಲ್ಲ, ರೈತರಿಗೆ ಅರಣ್ಯ ಇಲಾಖೆಯಿಂದಲೂ ತೊಂದರೆಯಾಗಿದೆ ಇದು ನಿಲ್ಲಬೇಕು. ನೀರಿಗಾಗಿ ಪ್ರಾಮಾಣಿಕವಾಗಿ ಹಾಗೂ ಶಾಂತಿಯಿಂದ ಹೋರಾಟ ಮಾಡುತ್ತಿದ್ದರೆ ಅದು ಮುಂದುವರಿಯಲಿ ಎಂದರು.
ರೈತರಿಗೆ ಸಂಕಷ್ಟ ಪರಿಸ್ಥಿತಿ ಬರದಿರಲಿ ಎಂದು ಶ್ರೀ ಭುವನೇಶ್ವರಿ, ಶ್ರೀ ಚಾಮುಂಡೇಶ್ವರಿ ಹಾಗೂ ಕಾವೇರಿ ತಾಯಿಗೆ ಕೈ ಮುಗಿದು ಬೇಡಿಕೊಳ್ಳುತ್ತೇನೆ. ಎಂದಿಗೂ ರೈತರಿಗೆ ಕಷ್ಟ ಕೊಡಬೇಡಿ ಎಂದು ಬೇಡಿಕೊಳ್ಳುತ್ತೇನೆ ಎಂದರು. ಈ ವೇಳೆ ತಾಯಿ ಲೀಲಾವತಿ ಅವರು ಕೂಡ ಭಾಗವಹಿಸಿದ್ದರು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications