ಕರ್ನಾಟಕ ರೈತರಿಗೆ ಕೃಷಿ ಸಚಿವರ ತಾಂಬೂಲ!
ನವದೆಹಲಿ, ಜು. 24- ಕರ್ನಾಟಕ ರಾಜ್ಯದಲ್ಲಿ ಬೆಳೆಯುವ ಕೆಂಪು ಮತ್ತು ಬಿಳಿ ಅಡಿಕೆಗಳನ್ನು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿಯಲ್ಲಿ ಕೊಂಡುಕೊಳ್ಳುವ ಯಾವುದೇ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೃಷಿ ಇಲಾಖೆ ರಾಜ್ಯ ಸಚಿವ ಕೆ.ವಿ. ಥಾಮಸ್ ಅವರು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಸಂಸದರಾದ ಡಿ.ವಿ. ಸದಾನಂದ ಗೌಡ ಹಾಗೂ ಬಿ.ವೈ. ರಾಘವೇಂದ್ರ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಕರ್ನಾಟಕ ಸರ್ಕಾರವು 2009ರ ಜನವರಿ 28ರಂದು ಕೃಷಿ ಇಲಾಖೆಗೆ ಈ ಸಂಬಂಧ ಪ್ರಸ್ತಾವನೆಯೊಂದನ್ನು ಸಲ್ಲಿಸಿತ್ತು. ಅದರಲ್ಲಿ 10,000(6000 ಟನ್ ಬಿಳಿ ಅಡಿಕೆ ಮತ್ತು 4,000ಟನ್ ಕೆಂಪು ಅಡಿಕೆ) ಟನ್ ಅಡಿಕೆಯನ್ನು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಕೇಂದ್ರ ಸರ್ಕಾರ ಕೊಂಡುಕೊಳ್ಳಬೇಕು ಎಂದು ಕೋರಲಾಗಿತ್ತು. ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯ ನಿಯಮಾವಳಿಗಳ ಪ್ರಕಾರ 01-03-2009ರಿಂದ 31-03-2009ರ ಅವಧಿಯಲ್ಲಿ ಲಭ್ಯ ಇರುವ ಅಡಿಕೆಯನ್ನು ಕೊಂಡುಕೊಳ್ಳಲು ಅನುಮತಿ ನೀಡಲಾಯಿತು ಎಂದು ತಿಳಿಸಿದರು.
ತದನಂತರ ರಾಜ್ಯ ಸರ್ಕಾರದ ನಿಖರ ಮನವಿಯ ಮೇರೆಗೆ ಅಡಿಕೆ ಕೊಂಡುಕೊಳ್ಳುವಿಕೆಯ ದಿನಾಂಕವನ್ನು ದಿನಾಂಕ ಏಪ್ರಿಲ್ 30ರ ವರೆಗೆ ವಿಸ್ತರಿಸಲಾಯಿತು. ಆ ಮೇಲೆ ಅದನ್ನು ಜೂನ್ 30ರವರೆಗೆ ಮತ್ತೊಮ್ಮೆ ವಿಸ್ತರಣೆ ಮಾಡಲಾಯಿತು. ಆದರೆ, ರಾಜ್ಯ ಸರ್ಕಾರದ ಮನವಿಯಂತೆ ರಾಜ್ಯದಲ್ಲಿ ಬೆಳೆಯು 1.08 ಮೆಟ್ರಿಕ್ ಟನ್ ಅಡಿಕೆಯನ್ನೆಲ್ಲ ಕೊಂಡುಕೊಳ್ಳಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿಯಲ್ಲಿ ಅವಕಾಶವಿಲ್ಲ. ಈ ಯೋಜನೆಯಡಿಯಲ್ಲಿ ಕೇವಲ ಶೇ. 10ರಷ್ಟು ಉತ್ಪನ್ನಗಳನ್ನು ಮಾತ್ರ ಕೊಂಡುಕೊಳ್ಳಲು ಅವಕಾಶವಿದೆ. ಈ ಕಾರಣದಿಂದ ಈ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಯಾವುದೇ ಪ್ರಸ್ತಾವಣೆಗಳು ಇದೀಗ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಸಚಿವರು ವಿವರಿಸಿದರು.
(ದಟ್ಸ್ ಕನ್ನಡವಾರ್ತೆ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications