ಪ್ರತಿ ಲೀಟರ್ ಎಥೆನಾಲ್ ಮೇಲೆ 2.5 ರೂ ಏರಿಕೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ, ನವೆಂಬರ್ 10: ಪ್ರತಿ ಲೀಟರ್ ಎಥೆನಾಲ್‌ ಮೇಲೆ 2.5 ರೂ ಏರಿಕೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಈ ಬೆಲೆ ಡಿಸೆಂಬರ್ 1 ರಿಂದ ಅನ್ವಯವಾಗಲಿದೆ, ಕ್ಯಾಬಿನೆಟ್ ಸಮಿತಿಯು ನವೆಂಬರ್ 10 ರಂದು ಎಥನಾಲ್ ಬೆಲೆಯನ್ನು 80 ಪೈಸೆ ಏರಿಕೆ ಮಾಡಿದೆ.

ಇದೀಗ ಎಥನಾಲ್ ಬೆಲೆ 62.65 ರೂನಿಂದ 63.45 ರೂ.ಗೆ ಏರಿಕೆ ಮಾಡಿದಂತಾಗಿದೆ ಎಂದು ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಈ ಹೊಸ ಬೆಲೆಯು ಡಿಸೆಂಬರ್ 1 ರಿಂದ ಅನ್ವಯವಾಗಲಿದೆ, ಬಿ-ಹೆವಿ ಮೊಲಾಸಸ್ ಹಾಗೂ ಸಿ-ಹೆವಿ ಮೊಲಾಸಸ್ ಪ್ರತಿ ಲೀಟರ್‌ಗೆ 2.55 ಹಾಗೂ 2.12ರೂ ಏರಿಕೆ ಮಾಡಲಾಗಿದೆ.

Central Cabinet Hikes Ethanol Prices By Upto Rs 2.5 Per Litre

ಬಿ-ಹೆವಿ ಮೊಲಾಸಸ್ ಎಥೆನಾಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 57.61 ರೂ ರಿಂದ 59.08ಕ್ಕೆ ನಿಗದಿಪಡಿಸಲಾಗಿದೆ. ಹಾಗೂ ಸಿ-ಹೆವಿ ಮೊಲಾಸಸ್ ಬೆಲೆ ಪ್ರತಿ ಲೀಟರ್‌ಗೆ 44.54 ರೂ.ನಿಂದ 46.66 ರೂ.ಗೆ ಏರಿಕೆ ಮಾಡಲಾಗಿದೆ.

ಈ ಎಥನಾಲ್ ಬೆಲೆ ಏರಿಕೆಯು 12 ರಾಜ್ಯಗಳ ರೈತರಿಗೆ ಅನುಕೂಲ ಒದಗಿಸಲಿದೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಕಾರ್ಯಕ್ರಮದ ಅಡಿಯಲ್ಲಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಿಂದ ಎಥೆನಾಲ್ ಅನ್ನು ಸಂಗ್ರಹಿಸುವ ಕಾರ್ಯವಿಧಾನವನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ.

ಸಿ ಹೆವಿ ಸಿ ಮೊಲಸಿಸ್ ನಿಂದ ಎಥೆನಾಲ್‌ನ ಬೆಲೆ ರೂ 46.66/ಲೀಟರ್‌ಗೆ ಏರಿಕೆಯಾಗಿದೆ. ಬಿ ಹೆವಿ ಸಿ ಮೊಲಸಿಸ್ ನಿಂದ ಎಥೆನಾಲ್‌ನ ಬೆಲೆ ಲೀಟರ್‌ಗೆ 59.08 ರೂ.ಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಜೂಟ್ ಪ್ಯಾಕೇಜಿಂಗ್ ಮೆಟೀರಿಯಲ್ ಆಕ್ಟ್, 1987 ರ ಅಡಿಯಲ್ಲಿ 2021-22 ರ ಸೆಣಬಿನ ಪ್ಯಾಕೇಜಿಂಗ್ ಮೆಟೀರಿಯಲ್‌ಗಳಿಗೆ ಮೀಸಲು ಮಾನದಂಡಗಳನ್ನು ಕ್ಯಾಬಿನೆಟ್ ಅನುಮೋದಿಸಿರುವುದರಿಂದ ಶೇ 100 ಆಹಾರ ಧಾನ್ಯಗಳು ಮತ್ತು ಶೇ20 ಸಕ್ಕರೆಯನ್ನು ಸೆಣಬಿನ ಚೀಲಗಳಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಭಾರತೀಯ ಹತ್ತಿ ನಿಗಮಕ್ಕೆ 17,408.85 ಕೋಟಿ ರೂ.ಗಳ ಬದ್ಧ ಬೆಲೆ ಬೆಂಬಲಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 2014-15 ರಿಂದ 2020-21 ರವರೆಗಿನ ಹತ್ತಿ ಋತುವಿನಲ್ಲಿ (ಅಕ್ಟೋಬರ್‌ನಿಂದ ಸೆಪ್ಟೆಂಬರ್) ಹತ್ತಿಗೆ ಎಂಎಸ್​​ಪಿ ಆಪ್‌ಗಳ ಅಡಿಯಲ್ಲಿ ನಷ್ಟವನ್ನು ಮರುಪಾವತಿಸಲು ಸಿಸಿಇಎ (CCEA) ಅನುಮೋದಿಸಿದೆ.

ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವಾದ ನವೆಂಬರ್ 15 ಅನ್ನು 'ಜನಜಾತಿಯ ಗೌರವ್ ದಿವಸ್' ಎಂದು ಘೋಷಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಬುಡಕಟ್ಟು ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು 15-22 ನವೆಂಬರ್ 2021 ರಿಂದ ವಾರದ ಅವಧಿಯ ಆಚರಣೆಗಳನ್ನು ಯೋಜಿಸಲಾಗಿದೆ.

ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರದ್ದು ಮಾಡಲಾಗಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಮರುಸ್ಥಾಪನೆ ಮತ್ತು ಮುಂದುವರಿಕೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ 2021-22 ರ ಆರ್ಥಿಕ ವರ್ಷದ ಉಳಿದ ಭಾಗಕ್ಕೆ ಯೋಜನೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳಿದರು.

ಯೋಜನೆಯು 2025-26 ರವರೆಗೆ ಮುಂದುವರಿಯುತ್ತದೆ. 2021-22ರ ಉಳಿದ ಅವಧಿಗೆ ಪ್ರತಿ ಸಂಸದರಿಗೆ 2 ಕೋಟಿ ರೂ.ನಂತೆ ಒಂದೇ ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗುವುದು ಎಂದರು. 2022-23 ರಿಂದ 2025-26 ರವರೆಗೆ ಈ ಯೋಜನೆಯಡಿಯಲ್ಲಿ ಪ್ರತಿ ಸಂಸದರಿಗೆ ತಲಾ 2.5 ಕೋಟಿ ರೂ.ಗಳಂತೆ ಎರಡು ಕಂತುಗಳಲ್ಲಿ ವಾರ್ಷಿಕ 5 ಕೋಟಿ ರೂ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+