ಕೇಂದ್ರ ಸರ್ಕಾರದಿಂದ ಅಡಿಕೆ ಬೆಳೆಗಾರರಿಗೆ ಗಂಡಾಂತರ: ಐವನ್ ಡಿಸೋಜಾ
ಮಂಗಳೂರು, ಫೆಬ್ರವರಿ 17: ಅಡಿಕೆ ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯನ್ನು ಕೇಂದ್ರ ಸರಕಾರ ಸೃಷ್ಟಿಸಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಆರೋಪಿಸಿದ್ದಾರೆ .
ಮಂಗಳೂರಿನಲ್ಲಿ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸತ್ ಕಲಾಪ ಸಂದರ್ಭದಲ್ಲಿ ಅಡಿಕೆ ಬಳಕೆ ಕ್ಯಾನ್ಸರ್ ಗೆ ಕಾರಣವಾಗುತ್ತದೆಯೇ ? ಎಂದು ಬಿಹಾರದ ಸಿವಾನ್ ಸಂಸದ ಓಂಪ್ರಕಾಶ್ ಯಾದವ್ ಕೇಳಿದ ಪ್ರಶ್ನೆಗೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, "ಅಡಿಕೆ ಕ್ಯಾನ್ಸರ್ ಕಾರಕ" ಎಂದು ಸ್ಪಷ್ಟ ಉತ್ತರ ನೀಡಿರುವುದು ದುರಂತ ಎಂದು ಅವರು ಹೇಳಿದರು.
ಕೇಂದ್ರ ಸರಕಾರದಿಂದ ಅಡಿಕೆ ಬೆಳೆಗಾರರಿಗೆ ಅನ್ಯಾಯವಾಗುತ್ತಿದ್ದರೂ ರಾಜ್ಯದ ಸಂಸದರು ಧ್ವನಿ ಎತ್ತದಿರುವುದು ಖಂಡನೀಯ ಎಂದು ಅವರು ಕಿಡಿಕಾರಿದರು. ಅಡಿಕೆ ಬೆಳೆಗಾರರ ಹಿತರಕ್ಷಣೆಗಾಗಿ ಅಡಿಕೆ ಬೆಳೆ ಪ್ರದೇಶದ ಸಂಸದರ ವೇದಿಕೆ ಅಸ್ತಿತ್ವದಲ್ಲಿದೆ. ಆದರೆ ವೇದಿಕೆ ನಿಷ್ಕ್ರೀಯವಾಗಿದೆ ಎಂದು ಅವರು ಆರೋಪಿಸಿದರು.

"ರಾಜ್ಯದಲ್ಲಿ ಒಟ್ಟು 2.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆಯನ್ನು ಬೆಳೆಯಲಾಗುತ್ತಿದೆ. ವಾರ್ಷಿಕ 4.13 ಲಕ್ಷ ಟನ್ ಗಳಷ್ಟು ಅಡಿಕೆ ಬೆಳೆಯಲಾಗುತ್ತಿದೆ. ಅಡಿಕೆ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ," ಎಂದು ಹೇಳಿದ ಅವರು ಕೇಂದ್ರದ ಈ ಬೇಜವಾಬ್ದಾರಿ ಧೋರಣೆಯಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ದೂರಿದರು.
ರಾಜ್ಯದ ಅಡಿಕೆ ಬೆಳೆಗಾರರ ಹಿತ ಕಾಪಾಡುವ ದೃಷ್ಟಿಯಿಂದ ಕಾಂಗ್ರೆಸ್ ಕೇಂದ್ರ ಸರಕಾರದ ವಿರುದ್ದ ರಾಜ್ಯದಾದ್ಯಂತ ಹೋರಾಟ ಆರಂಭಿಸಲಿದೆ ಎಂದು ಅವರು ಹೇಳಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications