10 ಲಕ್ಷ ಟನ್ ಬೇಳೆ ಕಾಳುಗಳ ಆಮದಿಗೆ ಸರ್ಕಾರ ಚಿಂತನೆ, ಕಾರಣವೇನು?
ನವದೆಹಲಿ, ಜನವರಿ 12: ಭವಿಷ್ಯದಲ್ಲಿ ಕೊರತೆಯಾಗುವ ಭಯದಿಂದ ದೇಶೀಯ ಅವಶ್ಯಕತೆಗಳನ್ನು ಪೂರೈಸಲು ಖಾಸಗಿ ವ್ಯಾಪಾರದ ಮೂಲಕ ಈ ವರ್ಷ ಸುಮಾರು 10 ಲಕ್ಷ ಟನ್ ಹೆಚ್ಚಿನ ಗುಣಮಟ್ಟದ ತೊಗರಿ ಬೇಳೆಯನ್ನು ಆಮದು ಮಾಡಿಕೊಳ್ಳಲು ಮುಂಗಡ ಯೋಜನೆಯನ್ನು ಮಾಡಿದೆ ಎಂದು ಸರ್ಕಾರ ಗುರುವಾರ ಹೇಳಿದೆ.
ಕೃಷಿ ಸಚಿವಾಲಯದ ಆರಂಭಿಕ ಅಂದಾಜಿನ ಪ್ರಕಾರ ಖಾರಿಫ್ ಬೆಳೆಯಾದ ತೊಗರಿ ಬೇಳೆ ಉತ್ಪಾದನೆಯು 2022-23 ಬೆಳೆ ವರ್ಷದಲ್ಲಿ (ಜುಲೈ-ಜೂನ್) ಹಿಂದಿನ ವರ್ಷದಲ್ಲಿ 4.34 ಮಿಲಿಯನ್ ಟನ್ಗಳಿಂದ 3.89 ಮಿಲಿಯನ್ ಟನ್ಗಳಿಗೆ ಕಡಿಮೆಯಾಗಿದೆ ಎಂದು ಹೇಳಿದೆ.
ಗುಲ್ಬರ್ಗ ಪ್ರದೇಶಗಳಲ್ಲಿ (ಕರ್ನಾಟಕದಲ್ಲಿ) ಹವಾಮಾನ ಮತ್ತು ಬೆಳೆ ರೋಗದಿಂದಾಗಿ ತೊಗರಿ ಬೇಳೆ ಉತ್ಪಾದನೆಯಲ್ಲಿ ಕೊರತೆ ಉಂಟಾಗಬಹುದು. ಭವಿಷ್ಯದಲ್ಲಿ ಉಂಟಾಗಬಹುದಾದ ಕೊರತೆಯನ್ನು ಆಮದು ಮೂಲಕ ಪೂರೈಸಲು ಯೋಜನೆಯನ್ನು ಮಾಡಲಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ದೇಶೀಯವಾಗಿ ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡಲು ಪ್ರಸಕ್ತ ಮಾರುಕಟ್ಟೆ ವರ್ಷದಲ್ಲಿ (ಡಿಸೆಂಬರ್-ನವೆಂಬರ್) ದೇಶವು ಸುಮಾರು 10 ಲಕ್ಷ ಟನ್ ತೊಗರಿ ಬೇಳೆಯನ್ನು ಆಮದು ಮಾಡಿಕೊಳ್ಳಬೇಕಾಗಿದೆ. 2021-22ರಲ್ಲಿ ಸುಮಾರು 7.6 ಲಕ್ಷ ಟನ್ ಟರ್ ಆಮದು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಈ ಸಂಬಂಧ ಸರ್ಕಾರವು ಮುಂಗಡ ಯೋಜನೆಯನ್ನು ರೂಪಿಸಿದ್ದು, ಈಗಾಗಲೇ ತೊಗರಿ ಬೇಳೆ ಆಮದುಗಾಗಿ ಖಾಸಗಿ ವ್ಯಾಪಾರಿಗಳೊಂದಿಗೆ ಚರ್ಚಿಸಲಾಗಿದೆ. ಅದರಂತೆ 2022ರ ಡಿಸೆಂಬರ್ನಲ್ಲಿ ಸುಮಾರು 2 ಲಕ್ಷ ಟನ್ಗಳಷ್ಟು ತೊಗರಿ ಬೇಳೆಯನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಹೇಳಿದರು.
ತೊಗರಿ ಬೇಳೆಯನ್ನು ಪೂರ್ವ ಆಫ್ರಿಕಾದ ದೇಶಗಳಿಂದ ಮತ್ತು ಕೆಲವೊಂದಷ್ಟನ್ನು ಮ್ಯಾನ್ಮಾರ್ನಿಂದ ಗರಿಷ್ಠವಾಗಿ ಆಮದು ಮಾಡಿಕೊಳ್ಳಲಾಗುತ್ತದೆ. ಈ ದೇಶಗಳಲ್ಲಿ ಸುಮಾರು 11-12 ಲಕ್ಷ ಟನ್ಗಳಷ್ಟು ತೊಗರಿ ಸಿಗುವುದಾಗಿ ಅಂದಾಜಿಸಿರುವುದರಿಂದ ಭಾರತವು ಅಗತ್ಯ ಪ್ರಮಾಣದ ತೊಗರಿಯನ್ನು ಆಮದು ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಬೇಳೆಕಾಳುಗಳ ಸುಗಮ ಆಮದಿಗೆ ಅನುಕೂಲವಾಗುವಂತೆ ಫ್ಯೂಮಿಗೇಶನ್ ಮತ್ತು ಫೈಟೊಸಾನಿಟರಿ ಮಾನದಂಡಗಳನ್ನು ಪುರೈಸಲು ಸರ್ಕಾರವು ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ 2024ರ ಮಾರ್ಚ್ 31 ರವರೆಗೆ ಬೇಳೆ ಕಾಳುಗಳ ಆಮದನ್ನು ಮುಕ್ತ ಸಾಮಾನ್ಯ ಪರವಾನಗಿ ಅಡಿಯಲ್ಲಿ ತರಲಾಗಿದೆ. ರುಳ್ಳಿಯ ವಿಷಯದಲ್ಲಿ ಪ್ರಸ್ತುತ ಬೆಲೆಗಳನ್ನು ಸ್ಥಿರವಾಗಿ ನಿರ್ವಹಿಸಲಾಗಿದೆ. ಮುಂಬರುವ ತಿಂಗಳುಗಳಲ್ಲಿ ಅದರ ಶೇಖರಣೆಗಾಗಿ ಸರ್ಕಾರವು ರಬಿ ಬೆಳೆಯಿಂದ ಈರುಳ್ಳಿಯನ್ನು ಸಂಗ್ರಹಿಸುತ್ತದೆ ಎಂದು ಕಾರ್ಯದರ್ಶಿ ಹೇಳಿದರು.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ











Click it and Unblock the Notifications