ದಿನಗೂಲಿ ಪರಿಷ್ಕರಣೆಗೆ ಮುಂದಾದ ಕೇಂದ್ರ ಸರ್ಕಾರ
ನವದೆಹಲಿ, ಜುಲೈ, 05: ರಸಗೊಬ್ಬರ ದರ ಇಳಿಕೆ ಮಾಡಿ ರೈತರಿಗೆ ಸಿಹಿಸುದ್ದಿ ನೀಡಿದ್ದ ಕೇಂದ್ರ ಸರ್ಕಾರ ದಿನಗೂಲಿ ನೌಕರರ ಕುಟುಂಬಕ್ಕೂ ಸಿಹಿಸುದ್ದಿ ನೀಡಲು ಮುಂದಾಗಿದೆ.
ಕೃಷಿ, ಕಟ್ಟಡ ನಿರ್ಮಾಣ, ಗಣಿ, ಝಾಡಮಾಲಿಗಳು ಸೇರಿ 45 ವಲಯಗಳ ದಿನಗೂಲಿ ನೌಕರರ ಕನಿಷ್ಠ ವೇತನ ಪರಿಷ್ಕರಣೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರ ಕಾರ್ಮಿಕ ಇಲಾಖೆ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಹಾಗಾಗಿ ಇನ್ನು ಮುಂದೆ ದಿನಗೂಲಿ ಕಾರ್ಮಿಕರ ಕನಿಷ್ಠ ವೇತನ 400 ರು. ಗಿಂತ ಅಧಿಕವಾಗಲಿದೆ.[ಕಾರ್ಮಿಕನ ಕಾಡಿಸಿ ಬಸ್ ಕಳೆದುಕೊಂಡ ಕೆಎಸ್ಆರ್ಟಿಸಿ!]

ದೆಹಲಿಯಲ್ಲಿನ ಅಸಂಘಟಿತ ವಲಯದ ಕಾರ್ಮಿಕರ ದಿನಗೂಲಿ 449 ರು. ಗೆ ನಿಗದಿಯಾಗುವ ಸಾಧ್ಯತೆ ಇದೆ. ಶಸ್ತ್ರಾಸ್ತ್ರ ರಹಿತ ಭದ್ರತಾ ಸಿಬ್ಬಂದಿ ಪ್ರಸ್ತುತ 407 ರೂ. ದಿನಗೂಲಿ ಪಡೆಯುತ್ತಿದ್ದು, ಇವರ ದಿನಗೂಲಿ 169 ರೂ. ಹೆಚ್ಚಳಗೊಂಡು 576 ರೂ.ಗೆ ತಲುಪಲಿದೆ.[ಭವಿಷ್ಯ ನಿಧಿ ನೀತಿ ಬದಲು, ಸರ್ಕಾರ ಕೈ ಸುಟ್ಟಿಕೊಂಡಿದ್ದು ಹೇಗೆ?]
ಕನಿಷ್ಠ ಕೂಲಿ ಕಾನೂನು ಏನು ಹೇಳುತ್ತದೆ?
1948 ರ ಕನಿಷ್ಠ ಕೂಲಿ ಕಾನೂನು ಪ್ರಕಾರ ದಿನಗಗೂಲಿಯನ್ನು ಪ್ರತಿ 5 ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಬೇಕು. ಕೃಷಿ ಕ್ಷೇತ್ರದಲ್ಲಿ ಕೊನೆಯದಾಗಿ 2005 ರಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಸ್ವಚ್ಛತೆ ಕಾರ್ಮಿಕರಿಗೆ ಸಂಬಂಧಿಸಿ 2008 ರಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಕಟ್ಟಡ ಕಾರ್ಮಿಕರಿಗೆ 2009 ರಲ್ಲಿ ಪರಿಷ್ಕರಣೆ ನೀಡಲಾಗಿತ್ತು. ಇದೀಗ ಕೇಂದ್ರ ಸರ್ಕಾರ ಎಲ್ಲ ವಿಭಾಗದ ದಿನಗೂಲಿ ಪರಿಷ್ಕರಣೆಗೆ ಮುಂದಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications