ಈರುಳ್ಳಿ ರಫ್ತು ನಿಷೇಧ ಹಿಂದಕ್ಕೆ, ಬೆಂಗಳೂರು ರೋಸ್ ಅರಳಲಿದೆ
ನವದೆಹಲಿ, ಡಿ. 29: ಜನವರಿ 01, 2021ರಿಂದ ಈರುಳ್ಳಿ ಮೇಲೆ ಹೇರಿದ್ದ ರಫ್ತು ನಿಷೇಧವನ್ನು ಹಿಂದಕ್ಕೆ ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಬೆಳೆಗಾರರಿಗೆ ಶುಭ ಸುದ್ದಿ ಸಿಕ್ಕಿದೆ.
ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯದಿಂದ ನಿಷೇಧ ಹಿಂತೆಗೆದುಕೊಂಡಿರುವ ಬಗ್ಗೆ ಅಧಿಕೃತ ಮಾಹಿತಿ ಹೊರ ಬಂದಿದ್ದು, ಬೆಂಗಳೂರು ರೋಸ್ ಸೇರಿದಂತೆ ಎಲ್ಲಾ ಬಗೆಯ ಈರುಳ್ಳಿ ಬೆಳೆ ರಫ್ತು ಮಾಡಲು ಅನುಮತಿ ಸಿಗಲಿದೆ.
ಬೆಂಗಳೂರು ರೋಸ್, ಕೃಷ್ಣಾಪುರಂ ಈರುಳ್ಳಿ ಬೆಳೆಯನ್ನು ಎಲ್ಲಾ ರೀತಿಯಲ್ಲಿ ಅಂದರೆ ಹಸಿ, ಕತ್ತರಿಸಿ, ಪುಡಿ ರೂಪದಲ್ಲಿ ಬೇಕಾದರೂ ರಫ್ತು ಮಾಡಲು ಅನುಮತಿ ನೀಡಿ ವಿದೇಶ ವ್ಯಾಪಾರ ನಿರ್ದೇಶನಾಲಯವು ಅಧಿಸೂಚನೆ ಹೊರಡಿಸಿದೆ.

ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಹಾಗೂ ಬಳಕೆ ಅಗತ್ಯ ಮನಗಂಡು ರಫ್ತು ನಿಷೇಧ ಹೇರಲಾಗಿತ್ತು. ಈರುಳ್ಳಿ ಬೆಲೆ ಗಗನಕ್ಕೇರಿತ್ತು. ದೇಶದ ವಿವಿಧ ಮಾರುಕಟ್ಟೆಗಳಲ್ಲಿಈರುಳ್ಳಿ ರೀಟೇಲ್ ದರ ಕೆಜಿಗೆ 75ರಿಂದ 120 ರೂ. ದಾಟಿತ್ತು.
ಅಗತ್ಯವಸ್ತುಗಳ ಕಾಯ್ದೆಗೆ ಕೆಲವು ದಿನಗಳ ಹಿಂದಷ್ಟೇ ತಿದ್ದುಪಡಿ ತಂದಿದ್ದ ಸರ್ಕಾರ, ಅಗತ್ಯ ವಸ್ತುಗಳ ಪಟ್ಟಿಯಿಂದ ಈರುಳ್ಳಿಯನ್ನು ಕೈಬಿಟ್ಟಿತ್ತು. ಆದರೆ ಈಗ ಬೆಲೆ ಏರಿಕೆ ತಡೆಯುವ ಉದ್ದೇಶದಿಂದ ಈರುಳ್ಳಿ ಸಂಗ್ರಹದ ಮೇಲೆ ಮಿತಿ ವಿಧಿಸಿತ್ತು.ಚಿಲ್ಲರೆ ಮಾರಾಟಗಾರರು 20 ಕ್ವಿಂಟಾಲ್ ಹಾಗೂ ಸಗಟು ಮಾರಾಟಗಾರರು 250 ಕ್ವಿಂಟಾಲ್ ಈರುಳ್ಳಿ ಸಂಗ್ರಹ ಮಿತಿ ನಿಗದಿಯಾಗಿತ್ತು.
ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಈ ಬಾರಿ 43 ಲಕ್ಷ ಟನ್ ಈರುಳ್ಳಿ ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮಳೆ, ಪ್ರವಾಹದಿಂದ ಬೆಳೆ ನಾಶವಾಗಿದ್ದು, ಉತ್ಪಾದನೆಯ ಅಂದಾಜನ್ನು 36 ಲಕ್ಷ ಟನ್ಗೆ ಪರಿಷ್ಕರಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications