Get Updates
Get notified of breaking news, exclusive insights, and must-see stories!

ಸಗಣಿ ಸಂಗ್ರಹಕ್ಕೆ ಮುಂದಾದ ಸರ್ಕಾರ, ಕೆಜಿಗೆ 1.50 ರು!

ರಾಯಪುರ್, ಜುಲೈ 06: ಗ್ರಾಮೀಣ ಜನ, ಹೈನುಗಾರಿಕೆ, ರೈತರಿಗೆ ಆರ್ಥಿಕ ಉತ್ತೇಜನ ನೀಡುವ ಸಲುವಾಗಿ ಛತ್ತೀಸ್ ಗಢ ಸರ್ಕಾರವು ಮಹತ್ವದ ಯೋಜನೆಯನ್ನು ಭಾನುವಾರದಂದು ಜಾರಿಗೆ ತಂದಿದೆ. ಸಾವಯವ, ಎರೆ ಹುಳು ಗೊಬ್ಬರ ಉತ್ಪಾದನೆಗೆ ಮುಂದಾಗಿರುವ ಸರ್ಕಾರ, ದನಗಾಹಿಗಳಿಂದ ಸಗಣಿ ಸಂಗ್ರಹಿಸತೊಡಗಿದೆ.

Recommended Video

      Virat Kohli Conflict Of Interest Trouble | Oneindia Kannada

      ಒಂದು ಕೆ.ಜಿ ಸಗಣಿಗೆ 1.50 ರೊ.ನಂತೆ ಖರೀದಿರಲು ಛತ್ತೀಸ್ ಘಢ ಸರ್ಕಾರ ಬೆಲೆ ನಿಗದಿ ಮಾಡಿದೆ. ಜುಲೆೈ 20ರಿಂದ ಹರೇಲಿ ಹಬ್ಬದ ಅಂಗವಾಗಿ ಗೋಧನ್ ನ್ಯಾಯ ಯೋಜನೆ ಅನ್ವಯ ಸಗಣಿ ಖರೀದಿಸಲಾಗುವುದು, ಸಗಣಿ ಸಂಗ್ರಹಕ್ಕೆ ಮಹಿಳಾ ಸ್ವಯ ಸಹಾಯ ಸಂಘದವರನ್ನು ಬಳಸಿಕೊಳ್ಳಲಾಗುತ್ತಿದೆ.

      Chhattisgarh To Procure Cow Dung From Farmers For Vermicompost

      ಕೃಷಿ ಸಚಿವ ರವೀಂದ್ರ ಚೌಬೆ ನೇತೃತ್ವ ಉಪ ಸಮಿತಿ ನೀಡಿದ ವರದಿ ಆಧಾರದ ಮೇಲೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಜೂನ್ 25ರಂದೇ ಈ ಯೋಜನೆ ಬಗ್ಗೆ ಘೋಷಣೆ ಮಾಡಿದ್ದರು. ಈಗ ಹರೇಲಿ ಹಬ್ಬದಿಂದ ಆರಂಭಗೊಂಡು ಸಗಣಿ ಸಂಗ್ರಹ ಬೃಹತ್ ಪ್ರಮಾಣದಲ್ಲಿ ಆಗಲಿದ್ದು, ಸಾವಿರಾರು ಟನ್ ಸಗಣಿ ಸಂಗ್ರಹಿಸಿ, ಸಾವಯವ ಗೊಬ್ಬರ ಉತ್ಪಾದನೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+