ರೇಡಿಯೋದಲ್ಲಿ ಸಿಎಂ ಸಿದ್ದು ರೈತರನ್ನು ಉದ್ದೇಶಿಸಿ ’ಮನ್ ಕಿ ಬಾತ್’
ಬೆಂಗಳೂರು, ಜುಲೈ 18: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ "ಮನ್ ಕೀ ಬಾತ್' ರೇಡಿಯೋ ಭಾಷಣದ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಜು 18) ರಾಜ್ಯದ ರೈತರನ್ನು ಉದ್ದೇಶಿಸಿ ಆಕಾಶವಾಣಿ ಮೂಲಕ ಭಾಷಣ ಮಾಡಿದ್ದಾರೆ.
ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ರೈತರಿಗೆ ಧೈರ್ಯ ತುಂಬಲು ಬೆಳಗ್ಗೆ 8.35ಕ್ಕೆ ಭಾಷಣ ಆರಂಭಿಸಿದ ಸಿದ್ದರಾಮಯ್ಯ, ಯಾವ ಕಾರಣಕ್ಕೂ ಆತ್ಮಹತ್ಯೆಯ ಮೊರೆ ಹೋಗಬೇಡಿ ಎಂದು ರೈತರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ರೇಡಿಯೋ ಮೂಲಕ ಮಾಡಿದ ಭಾಷಣದ ಪ್ರಮುಖಾಂಶ:
> ರೈತನ ಸಾವು ನನಗೆ ತೀವ್ರ ನೋವು ತಂದಿದೆ, ಇದರಿಂದ ಬಹಳ ನೊಂದಿದ್ದೇನೆ.
> ರೈತನ ಮಗನಾಗಿ ಇನ್ನೊಬ್ಬ ರೈತನ ನೋವು, ಕಷ್ಟ ನನಗೆ ಅರ್ಥವಾಗುತ್ತೆ, ಆದರೆ ಆತ್ಮಹತ್ಯೆ ಇದಕ್ಕೆ ಪರಿಹಾರವಲ್ಲ.
> ಅಧಿಕಾರದಲ್ಲಿ ಇರಲಿ, ಬಿಡಲಿ ನಾನು ಮೊದಲು ರೈತನ ಮಗ.
> ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ತಕ್ಷಣಕ್ಕೆ ಅನುಕೂಲವಾಗುವಂತೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದೇವೆ.
> ರೈತರನ್ನು ಶೋಷಣೆ ಮಾಡುವವರ ವಿರುದ್ದ ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುವುದು.
> ಅಕ್ರಮ ಬಡ್ಡಿ ದಂಧೆಕೋರರಿಗೆ ಬಿಸಿ ಮುಟ್ಟಿಸಲು ಡಿಸಿಗಳಿಗೆ ಸೂಚನೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು.
> ಎಂಟು ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ. ಇದುವರೆಗೆ 1800 ಕೋಟಿ ರೂಪಾಯಿ ರೈತರ ಸಾಲವನ್ನು ಸರಕಾರ ಭರಿಸಿದೆ.
> ಬಡ್ಡಿಕೋರರಿಂದಲೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಲೇವಾದೇವಿ ನಡೆಸುವವರಿಗೆ ಸರಿಯಾದ ಶಿಕ್ಷೆ ವಿಧಿಸಲಾಗುವುದು. ಲೇವಾದೇವಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು.
> ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ದ ರೈತರು ದೂರು ದಾಖಲಿಸ ಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು.
> ಕೃಷಿ ಮತ್ತು ಆರೋಗ್ಯ ಸಚಿವಾಲಯದಡಿಯಲಿ ರೈತ ಸಂಪರ್ಕ ಸಭೆಯನ್ನು ನಡೆಸಲಾಗುವುದು.
> ಸಾಲದ ಶೂಲದಿಂದ ಪಾರು ಮಾಡುವುದೇ ನಮ್ಮ ಉದ್ದೇಶ.
> ನಿಮ್ಮೊಂದಿಗೆ ನಾವಿದ್ದೇವೆ, ದಯವಿಟ್ಟು ಆತ್ಮಹತ್ಯೆಗೆ ಶರಣಾಗಬೇಡಿ.
> ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ, ಆತ್ಮಭಲದಿಂದ ಬದುಕುತ್ತೇನೆಂದು ಶಪಥ ಮಾಡಲು ರೈತರಿಗೆ ಸಿಎಂ ಮನವಿ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications