ರೇಡಿಯೋದಲ್ಲಿ ಸಿಎಂ ಸಿದ್ದು ರೈತರನ್ನು ಉದ್ದೇಶಿಸಿ ’ಮನ್ ಕಿ ಬಾತ್’
ಬೆಂಗಳೂರು, ಜುಲೈ 18: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ "ಮನ್ ಕೀ ಬಾತ್' ರೇಡಿಯೋ ಭಾಷಣದ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ (ಜು 18) ರಾಜ್ಯದ ರೈತರನ್ನು ಉದ್ದೇಶಿಸಿ ಆಕಾಶವಾಣಿ ಮೂಲಕ ಭಾಷಣ ಮಾಡಿದ್ದಾರೆ.
ಅನ್ನದಾತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ರೈತರಿಗೆ ಧೈರ್ಯ ತುಂಬಲು ಬೆಳಗ್ಗೆ 8.35ಕ್ಕೆ ಭಾಷಣ ಆರಂಭಿಸಿದ ಸಿದ್ದರಾಮಯ್ಯ, ಯಾವ ಕಾರಣಕ್ಕೂ ಆತ್ಮಹತ್ಯೆಯ ಮೊರೆ ಹೋಗಬೇಡಿ ಎಂದು ರೈತರಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ರೇಡಿಯೋ ಮೂಲಕ ಮಾಡಿದ ಭಾಷಣದ ಪ್ರಮುಖಾಂಶ:
> ರೈತನ ಸಾವು ನನಗೆ ತೀವ್ರ ನೋವು ತಂದಿದೆ, ಇದರಿಂದ ಬಹಳ ನೊಂದಿದ್ದೇನೆ.
> ರೈತನ ಮಗನಾಗಿ ಇನ್ನೊಬ್ಬ ರೈತನ ನೋವು, ಕಷ್ಟ ನನಗೆ ಅರ್ಥವಾಗುತ್ತೆ, ಆದರೆ ಆತ್ಮಹತ್ಯೆ ಇದಕ್ಕೆ ಪರಿಹಾರವಲ್ಲ.
> ಅಧಿಕಾರದಲ್ಲಿ ಇರಲಿ, ಬಿಡಲಿ ನಾನು ಮೊದಲು ರೈತನ ಮಗ.
> ಆತ್ಮಹತ್ಯೆ ಮಾಡಿಕೊಂಡ ಕುಟುಂಬಕ್ಕೆ ತಕ್ಷಣಕ್ಕೆ ಅನುಕೂಲವಾಗುವಂತೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದೇವೆ.
> ರೈತರನ್ನು ಶೋಷಣೆ ಮಾಡುವವರ ವಿರುದ್ದ ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳಲಾಗುವುದು.
> ಅಕ್ರಮ ಬಡ್ಡಿ ದಂಧೆಕೋರರಿಗೆ ಬಿಸಿ ಮುಟ್ಟಿಸಲು ಡಿಸಿಗಳಿಗೆ ಸೂಚನೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು.
> ಎಂಟು ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದೆ. ಇದುವರೆಗೆ 1800 ಕೋಟಿ ರೂಪಾಯಿ ರೈತರ ಸಾಲವನ್ನು ಸರಕಾರ ಭರಿಸಿದೆ.
> ಬಡ್ಡಿಕೋರರಿಂದಲೇ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಲೇವಾದೇವಿ ನಡೆಸುವವರಿಗೆ ಸರಿಯಾದ ಶಿಕ್ಷೆ ವಿಧಿಸಲಾಗುವುದು. ಲೇವಾದೇವಿ ಕಾಯ್ದೆಗೆ ತಿದ್ದುಪಡಿ ತರಲಾಗುವುದು.
> ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ದ ರೈತರು ದೂರು ದಾಖಲಿಸ ಬಹುದು. ದೂರು ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು.
> ಕೃಷಿ ಮತ್ತು ಆರೋಗ್ಯ ಸಚಿವಾಲಯದಡಿಯಲಿ ರೈತ ಸಂಪರ್ಕ ಸಭೆಯನ್ನು ನಡೆಸಲಾಗುವುದು.
> ಸಾಲದ ಶೂಲದಿಂದ ಪಾರು ಮಾಡುವುದೇ ನಮ್ಮ ಉದ್ದೇಶ.
> ನಿಮ್ಮೊಂದಿಗೆ ನಾವಿದ್ದೇವೆ, ದಯವಿಟ್ಟು ಆತ್ಮಹತ್ಯೆಗೆ ಶರಣಾಗಬೇಡಿ.
> ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ, ಆತ್ಮಭಲದಿಂದ ಬದುಕುತ್ತೇನೆಂದು ಶಪಥ ಮಾಡಲು ರೈತರಿಗೆ ಸಿಎಂ ಮನವಿ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications