ಚಿಕ್ಕಬಳ್ಳಾಪುರ: ಸಾಲದಲ್ಲಿ ಮುಳುಗಿದ್ದ ರೈತನ ಕೈ ಹಿಡಿದು ಕೋಟ್ಯಧಿಪತಿ ಮಾಡಿದ ಕೆಂಪು ಸುಂದರಿ
ಚಿಕ್ಕಬಳ್ಳಾಪುರ, ಜುಲೈ 20: ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಪುಲಗಲ್ ಗ್ರಾಪಂ ವ್ಯಾಪ್ತಿಯ ಎ. ಬೆಲ್ಲಾಲಂಪಲ್ಲಿಯ ಪ್ರಗತಿಪರ ರೈತ ಬಿ. ನರಸಿಂಹಪ್ಪ ಅವರು 8 ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದು 1 ಕೋಟಿ ರೂಪಾಯಿಗಿಂತ ಅಧಿಕ ಲಾಭ ಗಳಿಸಿದ್ದಾರೆ.
ನರಸಿಂಹಪ್ಪ ಹಗಲಿರುಳು ಎನ್ನದೆ ಹೊಲದಲ್ಲಿ ಟೊಮೆಟೊ ಬೆಳೆ ರಕ್ಷಣೆ ಮಾಡಿ ಅತ್ಯಧಿಕ ದರ ಸಿಕ್ಕಿದ ಸಂಭ್ರಮದಲ್ಲಿ ತೇಲಾಡುತ್ತಿದ್ದಾರೆ. ಕಳೆದ ತಿಂಗಳು ಟೊಮೆಟೊ ಬೆಳೆದ ರೈತರು ಸಮರ್ಪಕ ಬೆಲೆ ಸಿಗದೆ, ಯಾಕಾಗಿ ಈ ಬೆಳೆ ಬೆಳೆದವೋ ಎನ್ನುವ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಇದೀಗ ಟೊಮೆಟೊಗೆ ಎಲ್ಲಿಲ್ಲದ ಬೆಲೆ ಬಂದಿದೆ.

ರೈತ ಬಿ. ನರಸಿಂಹಪ್ಪ ಎ. ಬೆಲ್ಲಾಲಂಪಲ್ಲಿ ಗ್ರಾಮದಲ್ಲಿ ಒಂದಿಷ್ಟು ಜಮೀನು ಉಳುಮೆ ಮಾಡಿ ತರಕಾರಿ ಬೆಳೆಯುತ್ತಿದ್ದರು. ಈ ಹಿಂದೆಯೂ ಬೀನ್ಸ್, ಬದನೆಕಾಯಿ, ಮೆಣಸಿನಕಾಯಿ, ಕೋಸು ಇತರೆ ತರಕಾರಿಗಳನ್ನು ಬೆಳೆದು ಸ್ವಲ್ಪ ಮಟ್ಟಿಗೆ ನಷ್ಟ ಅನುಭವಿಸಿದ್ದರು. ಆದರೆ ಇದೀಗ ಅವರ ಪಾಲಿಗೆ ಅದೃಷ್ಟವೇ ಒಲಿದಿದ್ದು ಬಂಗಾರದ ಬೆಲೆ ಈಗ ಟೊಮೆಟೊಗೆ ಸಿಕ್ಕಿದೆ.
ಈಗಾಗಲೇ 3 ಬಾರಿ ಟೊಮೆಟೊ ಬೆಳೆದು ಕೊಯ್ದು ಮಾರಾಟ ಮಾಡಿದ್ದಾರೆ. 4 ತಿಂಗಳ ಹಿಂದೆ ಹೊಲ ಹಸನು ಮಾಡಿ, ನರ್ಸರಿಯಲ್ಲಿ ಸಸಿಗಳನ್ನು ನಾಟ ಮಾಡಿ ಅವುಗಳಿಗೆ ಔಷಧಿ ಹಾಗೂ ಗೊಬ್ಬರ ಹಾಕಿ ಬೆಳೆಸಿದ್ದರು. ಟೊಮೆಟೊ ಬೆಳೆಗೆ ಸಸಿಗಳ ನಾಟಿ ಪ್ರಾರಂಭದಿಂದ ಹಿಡಿದು ಮೊದಲ ಕೊಯ್ಲು ತನಕ 10 ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ಆದರೆ ಟೊಮೆಟೊ ಮಾರಾಟದಿಂದ ಕೋಟ್ಯಂತರ ರೂಪಾಯಿ ಗಳಿಸಿದ್ದಾರೆ.
ಈ ಹಿಂದೆ ಅನೇಕ ಬೆಳೆಗಳಿಗೆ ಬೆಲೆ ಸಿಗದೆ ಸಾಲಗಾರನಾಗಿದ್ದೆ. ಇದೀಗ ಟೊಮೆಟೊ ಒಂದೇ ಒಂದು ಬೆಳೆಯಿಂದ ಎಲ್ಲರಿಗೂ ಸಾಲ ತೀರಿಸಿ ನೆಮ್ಮದಿಯಾಗಿದ್ದೇನೆ ಎಂದು ರೈತ ಬಿ. ನರಸಿಂಹಪ್ಪ ತಮ್ಮ ಖುಷಿ ಹಂಚಿಕೊಂಡಿದ್ದಾರೆ. ಟೊಮೆಟೊ ಬಾಕ್ಸ್ಗಳನ್ನು ಕೋಲಾರ ಹಾಗೂ ಚಿಂತಾಮಣಿ ಮಾರುಕಟ್ಟೆಗೆ ತೆಗೆದು ಕೊಂಡು ಹೋಗಿ ನೇರವಾಗಿ ಮಾರಾಟ ಮಾಡಲಾಗಿದ್ದು, ಇದರಿಂದ ಮಧ್ಯವರ್ತಿಗಳಿಗೆ ಕೊಡಬೇಕಾದ ಹಣ ಉಳಿದಿದೆ ಎಂದರು.
ಟೊಮೆಟೊ ಬೆಳೆಯಿಂದ ಲಕ್ಷಾಧಿಪತಿಯಾದ ಕಾನ್ಸ್ಟೇಬಲ್
ಈ ಹಿಂದೆ ಹಾಸನ ಜಿಲ್ಲೆಯ ಪೊಲೀಸರೊಬ್ಬರು ಟೊಮೆಟೊ ಬೆಳೆಯಿಂದ ಉತ್ತಮ ಆದಾಯಗಳಿಸಿರುವುದನ್ನು ಬಹಿರಂಗಪಡಿಸಿದ್ದರು. ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿರುವ ಬೈರೇಶ್ ವೃತ್ತಿಯಲ್ಲಿ ಪೊಲೀಸ್ ಪ್ರವೃತ್ತಿಯಲ್ಲಿ ರೈತನಾಗಿದ್ದು, ಈ ಬಾರಿ ಟೊಮೆಟೊ ಬೆಳೆಯಿಂದ ಉತ್ತಮ ಲಾಭಗಳಿಸಿದ್ದಾರೆ.
ಬೇಲೂರು ತಾಲೂಕಿನ ಹಳೇಬೀಡು ಹೋಬಳಿಯ ಬಸ್ತಿಹಳ್ಳಿ ಗ್ರಾಮದ ಬೈರೇಶ್ ಈ ಬಾರಿ ತಮ್ಮ ಒಂದು ಎಕರೆ ಆರು ಗುಂಟೆ ಜಾಗದಲ್ಲಿ ಟೊಮೊಟೊ ಬೆಳೆದಿದ್ದು, ನಿರೀಕ್ಷೆಗೂ ಮೀರಿದ ಆದಾಯಗಳಿಸಿದ್ದಾರೆ. ಟೊಮೆಟೊ ದರ ಏರಿಕೆ ದಿನಗಳೂ ಸೇರಿದಂತೆ ಬೈರೇಶ್ ಟೊಮೆಟೊ ಬೆಳೆಯಿಂದ ಈವರಗೆ 20 ಲಕ್ಷ ರೂಪಾಯಿ ಆದಾಯ ಗಳಿಸಿದ್ದಾರೆ ಎನ್ನಲಾಗಿದೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications