ಮೆಕ್ಕೆಜೋಳಕ್ಕೆ ಸೈನಿಕ ಹುಳು ಲಗ್ಗೆ: ಇಳುವರಿ ನಷ್ಟದ ಭಯದಲ್ಲಿ ರೈತಾಪಿ ವರ್ಗ- ಪರಿಹಾರ ನೀಡಲು ಆಗ್ರಹ!
ಚಿಕ್ಕಬಳ್ಳಾಪುರ ಜುಲೈ 12: ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಅವಧಿ ಪೂರ್ವ ಮೆಕ್ಕೆಜೋಳದ ಸಣ್ಣಗಿಡಗಳಗೆ ದಾಳಿ ಮಾಡಿರುವ ಸೈನಿಕ ಹುಳುವಿನ ದಾಳಿಯಿಂದ ರೈತ ಕಂಗಾಲಾಗಿದ್ದು ರೋಗ ನಿಯಂತ್ರಣಕ್ಕೆ ಸೂಕ್ತ ಮಾಹಿತಿ ಹಾಗೂ ರಾಸಾಯನಿಕ ಔಷಧ ದೊರೆಯದ ಕಾರಣ ಫಸಲು ಇಳಿಮುಖವಾಗುವ ಬೀತಿ ಆವರಿಸಿದೆ.
ಚಿಕ್ಕಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಮುಂಗಾರಿನಲ್ಲಿ ಬಿತ್ತಿರುವ ಮೆಕ್ಕೆಜೋಳದ ಬೆಳೆಗೆ ಸೈನಿಕ ಹುಳು ಬಾಧೆ ಕಾಡುತ್ತಿದೆ. ತಾಲೂಕಿನಲ್ಲಿ ನೂರಾರು ಹೆಕ್ಟರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆಯಾಗಿದ್ದು, ಉತ್ತಮ ಫಸಲು ಹಾಗೂ ಇಳುವರಿ ನಿರೀಕ್ಷೆಯಲ್ಲಿದ್ದ ರೈತರಿಗೆ ಸೈನಿಕ ಹುಳುವಿನ ಬಾಧೆ ಕಾಣಿಸಿಕೊಂಡಿದ್ದು ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯಲ್ಲಿನ ರೈತರು ಈಗಾಗಲೇ ಮೇ ತಿಂಗಳಿನಲ್ಲೇ ಮೆಕ್ಕೆಜೋಳ ಬಿತ್ತನೆ ಮಾಡಿದ್ದು ಬೆಳೆಯು 1 ತಿಂಗಳು ರಿಂದ 45 ದಿನಗಳ ಹಂತದಲ್ಲಿದೆ. ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳು ಬಾಧೆ ಕಂಡುಬಂದಿದೆ. ಈ ಕೀಟದಿಂದ ರೈತರು ಬೆಳೆ ರಕ್ಷಣೆ ಮಾಡಿಕೊಳ್ಳಲು ಹಾಗೂ ಕೀಟ ನಿರ್ವಹಣೆ ಕ್ರಮಗಳ ಬಗ್ಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೇಶವರೆಡ್ಡಿ ಅವರಲ್ಲಿ ರೈತರಲ್ಲಿ ಮನವಿ ಮಾಡಿದ್ದಾರೆ.
ಈ ಕೀಟ ಪ್ರಮುಖವಾಗಿ ಮೆಕ್ಕೆಜೋಳದ ಪೀಡೆಯಾಗಿದೆ. ಇದರ ಜತೆಗೆ ಇತರೆ ಬೆಳೆಗಳಾದ ಭತ್ತ, ಜೋಳ ಸೇರಿದಂತೆ ಕೆಲ ತರಕಾರಿ ಬೆಳೆಗಳನ್ನು ಸಹ ಹಾನಿ ಮಾಡುತ್ತದೆ. ಮೋಡ ಕವಿದ ವಾತಾವರಣ, ಹೆಚ್ಚಿನ ಮಳೆ ಅಥವಾ ಹೆಚ್ಚಿನ ತೇವಾಂಶ ಮತ್ತು ಕಡಿಮೆ ಉಷ್ಣಾಂಶವಿದ್ದಲ್ಲಿ ಇದರ ಹಾವಳಿ ಹೆಚ್ಚಾಗುತ್ತದೆ. ಮೆಕ್ಕೆಜೋಳ ಬೆಳೆ 10ರಿಂದ 15 ದಿವಸವಿದ್ದಾಗ ಸೈನಿಕ ಹುಳುವಿನ ಬಾಧೆ ಕಾಣಿಸಿಕೊಳ್ಳುಲು ಆರಂಭಿಸುತ್ತದೆ.
ಕೃಷಿ ಅಧಿಕಾರಿಗಳ ಭೇಟಿಗೆ ಆಗ್ರಹ:
ಸೈನಿಕ ಹುಳುವಿನ ದಾಳಿಗೆ ತುತ್ತಾಗಿರುವ ರೈತರ ಜಮೀನಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಕೀಟ ಬಾಧೆ ಪರಿಶೀಲಿಸಿ ಸೂಕ್ತ ಔಷಧಿಗಳ ಸಿಂಪಡಣೆ ಮಾಡಲು ಮಾಹಿತಿ ನೀಡುವಂತೆ ಹಾಗೂ ಕೃಷಿ ಇಲಾಖೆಯಲ್ಲಿ ಕಡಿಮೆ ಬೆಲೆಗೆ ಈ ರೋಗಕ್ಕೆ ಸೂಕ್ತ ರಾಸಾಯನಿಕಗಳು ದೊರಯುವಂತೆ ಮಾಡಲಿ ಎಂದು ರೈತರು ಆಗ್ರಹಿಸಿದ್ದಾರೆ.

ವೇಗವಾಗಿ ಹರದಬಲ್ಲದು:
''35 ರಿಂದ 40 ದಿನದ ಜೀವನ ಚಕ್ರದ ಈ ಪತಂಗ ಗಾಳಿಯ ಮೂಲಕ ಸಾವಿರ ಕಿ.ಮೀ. ಚಲಿಸಬಲ್ಲದು. 1,500 ಮೊಟ್ಟೆ ಇಡುವ ಈ ಕೀಟವನ್ನು ವೈಜ್ಞಾನಿಕ ಮತ್ತು ಸುರಕ್ಷಿತ ರೀತಿಯಲ್ಲಿ ನಿಯಂತ್ರಿಸಬೇಕು ಎಂಬುದು ಕೃಷಿ ಇಲಾಖೆಯ ಅಧಿಕಾರಿಗಳ ಅಭಿಪ್ರಾಯವಾಗಿದೆ.
ಇಳುವಾರಿ ನಷ್ಟ:
ಮಾಗಿ ಉಳುಮೆ, ಬೇಗ ಬಿತ್ತನೆ, ಪರ್ಯಾಯ ಬೆಳೆ ಪದ್ಧತಿ ಹಾಗೂ ರಾಸಾಯನಿಕ ಸಿಂಪರಣೆ ಮೂಲಕ ಸೈನಿಕ ಹುಳುಗಳನ್ನು ನಿಯಂತ್ರಿಸಬಹುದು. ಈ ಹುಳು 20-25 ದಿನಗಳ ಜೀವನ ಚಕ್ರ ಹೊಂದಿದ್ದು, ಏಕ ಬೆಳೆಯಲ್ಲೇ ಇದರ ಮೂರು ಹಂತಗಳು (ಮೊಟ್ಟೆ, ಮರಿ ಹಳು, ಪ್ರೌಢ ಚಿಟ್ಟೆ) ಕಾಣಿಸಿಕೊಂಡು ಎಲೆ, ಸುಳಿಗಳನ್ನು ತಿಂದು, ರಂಧ್ರಗಳನ್ನು ಮಾಡಿ ಹಿಕ್ಕೆಗಳನ್ನು ಎಲೆಯ ಮೇಲೆಯೇ ಬಿಡುತ್ತದೆ. ಹೊಲದಲ್ಲಿ ದೀಪಾಕರ್ಷಕ ಬಲೆ ಅಳವಡಿಸಿ ಪತಂಗಗಳನ್ನು ಆಕರ್ಷಿಸಿ, ನಾಶಪಡಿಸ ಬಹುದಾಗಿದೆ.
ರೈತ ಸಂಪರ್ಕ ಕೇಂದ್ರಗಳಲ್ಲಿ ಔಷಧ ಖಾಲಿ:
ಮೆಕ್ಕೆಜೋಳ ಗಿಡದ ಸುಳಿಗೆ ಸೈನಿಕ ಹುಳು ಕತ್ತರಿ ಹಾಕುತ್ತಿರುವುದರಿಂದ ರೈತರು ಬೆಳೆ ನಾಶದ ಆತಂಕದಲ್ಲಿದ್ದಾರೆ. ರೈತರ ನೆರವಿಗೆ ಬರಬೇಕಿದ್ದ ಕೃಷಿ ಇಲಾಖೆ ಕೂಡ ಕೈಕಟ್ಟಿ ಕುಳಿತಿದೆ. ಎಲ್ಲ ರೈತ ಸಂಪರ್ಕ ಕೇಂದ್ರಗಳಿಗೆ ಔಷಧ ಸರಬರಾಜಾಗಬೇಕಿತ್ತು. ಆದರೆ ಈವರೆಗೂ ಔಷಧಿ ಸರಬರಾಜಾಗಿಲ್ಲ ಎಂದು ರೈತರು ಆತಂಕ ವ್ಯಕ್ತ ಪಡಿಸಿದ್ದಾರೆ.

ರೈತರ ಅಲೆದಾಟ:
ಸೈನಿಕ ಹುಳು ನಿಯಂತ್ರಣಕ್ಕೆ ಔಷಧಿ ಪಡೆಯಲು ಪ್ರತಿನಿತ್ಯ ರೈತ ಸಂಪರ್ಕ ಕೇಂದ್ರಕ್ಕೆ ರೈತರು ಅಲೆದಾಡುತ್ತಿದ್ದಾರೆ. ಅಧಿಕಾರಿಗಳು ಸರಬರಾಜು ಮಾಡುವ ಭರವಸೆ ನೀಡುತ್ತಿದ್ದೂ, ಸಮಯ ಮೀರಿದ ನಂತರ ಕೊಟ್ಟರೆ ಪ್ರಯೋಜನ ಏನು ಎಂದು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ. ಗ್ರಾಮೀಣ ಮತ್ತು ಗಡಿ ಭಾಗದ ರೈತರಿಗೆ ಮಾಹಿತಿ ಕೊರತೆ ಇದ್ದು ಕೃಷಿ ಇಲಾಖೆಯಿಂದ ಸೈನಿಕ ಹುಳು ನಿಯಂತ್ರಣ ಮಾಡಲು ಸಲಹೆ ಹಾಗೂ ಔಷದ ಬಗ್ಗೆ ಕರಪತ್ರ ಹಂಚುವಂತೆ ರೈತರು ಆಗ್ರಹಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಗ್ರಾಪಂ ಮಾಜಿ ಸದಸ್ಯ ಹಾಗೂ ರೈತ ಮುಖಂಡ ಆರ್.ಚೊಕ್ಕನಹಳ್ಳಿ ನರಸಿಂಹಪ್ಪ, 'ರೈತರು ಬೆಳೆದ ಬೆಳೆಗೆ ಕೃಷಿ ಅಧಿಕಾರಿಗಳ ಶಿಫಾರಸು ಹಾಗೂ ಮಾರ್ಗದರ್ಶನ ಅತ್ಯಗತ್ಯ. ಇಲಾಖೆ ಅಧಿ ಕಾರಿಗಳು ಬಿತ್ತನೆಯಿಂದ ಫಸಲಿನ ಹಂತದವರೆಗೂ ರೈತರೊಂದಿಗೆ ಸಂಪರ್ಕದಲ್ಲಿದ್ದು, ಜಮೀನಿಗೆ ಭೇಟಿ ನೀಡಿ, ಬೆಳೆ ವೀಕ್ಷಿಸಿ ಮಾಹಿತಿ ನೀಡಿದರೆ ಹೆಚ್ಚು ಅನುಕೂಲವಾಗಲಿದೆ' ಎಂದರು.
ಸಹಾಯಕ ಕೃಷಿ ನಿರ್ದೇಶಕ ಕೇಶವ ರೆಡ್ಡಿ ಈ ಬಗ್ಗೆ ಮಾತನಾಡಿ, 'ಬೆಳೆಯ 45 ದಿನಗಳವರೆಗೆ ಈ ಹುಳು ಕಾಣಿಸಿಕೊಂಡು ಶೇ.70-80 ರಷ್ಟು ಇಳುವರಿ ನಷ್ಟಕ್ಕೆ ಕಾರಣವಾಗುತ್ತದೆ. ರಾಸಾಯನಿಕ ಸಿಂಪರಣೆ ಮೂಲಕ ರೋಗ ನಿಯಂತ್ರಣ ಸಾಧ್ಯವಾಗುತ್ತದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಸೈನಿಕ ಹುಳು ನಿಯಂತ್ರಣಕ್ಕೆ ಇಲಾಖೆ ಸೂಚಿಸಿ ರುವ ಮೇಟಾರೈಜಿ ಯಮ್ ರಿಲೆ ರಾಸಾಯನಿಕ ಲಭ್ಯವಾಗುವಂತೆ ಕ್ರಮ ತೆಗೆದುಕೊಳ್ಳಲಾಗುವುದು' ಎಂದರು.
'ಕೃಷಿ ಇಲಾಖೆಯಿಂದ ರೈತರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡುತ್ತಿಲ್ಲ, ತಾಲೂಕು ಕೇಂದ್ರದಿಂದ 30 ಕಿ.ಮೀ ದೂರದಲ್ಲಿರುವ ಮಂಡಿಕಲ್ ಹೋಬಳಿ ಕಮ್ಮಾಗುಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ರೈತರಿಗೆ ಮಾಹಿತಿ ಕೊರತೆಯಿಂದ ಅನೇಕರು ಬೆಳೆ ವಿಮೆಯಿಂದ ವಂಚಿತರಾಗಿದ್ದಾರೆ, ಕಳೆದ ವರ್ಷ ಬರ ಪರಿಹಾರ ಸಿಕ್ಕಿಲ್ಲ ಇದಕ್ಕೆ ಕಾರಣ ಬೆಳೆ ಸಮೀಕ್ಷೆಯಲ್ಲಿ ಲೋಪವಾಗಿದೆ. ಕೃಷಿ ಸಲಕರಣೆಗಳು ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ಗ್ರಾಮೀಣ ಭಾಗದ ರೈತರಿಗೆ ಮಾಹಿತಿ ಸಿಗುವಂತಾಗಲಿ' ಎಂದು ಪ್ರಗತಿ ಪರ ರೈತರು, ಕಮ್ಮಗುಟ್ಟಹಳ್ಳಿ ಗ್ರಾಪಂ ಉಪಾಧ್ಯಕ್ಷ ಬಿ. ಎ. ಕೇಶವ ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications