ಕಳೆನಾಶಕ ಸಿಂಪಡಣೆ: 12 ಎಕರೆ ಕಾಫಿತೋಟ ನಾಶ
ಚಿಕ್ಕಮಗಳೂರು, ನವೆಂಬರ್ 19: ಚಿಕ್ಕಮಗಳೂರು ತಾಲ್ಲೂಕಿನ ಮಾಕೋಡು ಗ್ರಾಮದಲ್ಲಿ ಕಾಫಿ ಬೆಳೆಗೆ ಕಾಂಟಾಪ್ ಸಿಂಪಡಿಸುವ ಬದಲಾಗಿ ಅಸ್ಸಾಂ ಮೂಲದ ಕಾರ್ಮಿಕ ಕಳೆನಾಶಕ ರೌಂಡಾಫ್ ಸಿಂಪಡಿಸಿದ ಪರಿಣಾಮ ಇನ್ನೇನು ಫಸಲಿಗೆ ಸಿದ್ದವಾಗಿದ್ದ 12 ಎಕರೆ ಕಾಫಿ ತೋಟ ನಾಶವಾಗಿದೆ.
ಮೆಣಸಿನ ಬಳ್ಳಿಗಳು ಒಣಗಿ ಹೋಗಿದ್ದು, ಘಟನೆಯಿಂದ ಮನನೊಂದ ತೋಟದ ಮೇಲ್ವಿಚಾರಕ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಲ್ಲೇಗೌಡ ಎಂಬುವರಿಗೆ ಸೇರಿದ 12 ಎಕರೆ ಕಾಫಿತೋಟ ಫಸಲು ಬಂದಿದ್ದು, ಕಾಫಿತೋಟಕ್ಕೆ ಕಳೆನಾಶಕ ಸಿಂಪಡಣೆಯಿಂದ ಸಂಪೂರ್ಣ ಒಣಗಿ ಹೋಗಿದೆ.

ಬುಧವಾರ ಮಾಕೋಡು ಗ್ರಾಮದಲ್ಲಿರುವ ಕಾಫಿ ತೋಟದ ಮೇಲ್ವೀಚಾರಕ ಅಸ್ಸಾಂ ಮೂಲದ ಕಾರ್ಮಿಕರಿಗೆ ಕಾಫಿ ಗಿಡಗಳ ಎಲೆ ಹಸಿರಾಗಲು ಸಿಂಪಡಿಸುವ ಕಾಂಟಾಫ್ ಎಂಬ ಪೋಷಕಾಂಶಯುಕ್ತ ದ್ರವ ನೀಡುವ ಬದಲು ರೌಂಡಾಫ್ ಎಂಬ ಕಳೆನಾಶಕವನ್ನು ನೀಡಿದ್ದರು.
ಇದನ್ನು ಕಾರ್ಮಿಕರು 12 ಎಕರೆ ತೋಟಕ್ಕೆ ಸಿಂಪಡಿಸಿದ್ದಾರೆ ಎನ್ನಲಾಗಿದೆ. ಕಳೆನಾಶಕ ಸಂಪಡಿಸಿದ ಎರಡು ದಿನಗಳಲ್ಲಿ ಇಡೀ ತೋಟ ಸಂಪೂರ್ಣವಾಗಿ ನಾಶವಾಗಿದ್ದು, ಬೆಂಕಿಯಿಂದ ಸುಟ್ಟಂತಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications