ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಸಮಸ್ಯೆಗಳ ಸ್ಪಂದನೆಗೆ ಕೃಷಿ ಇಲಾಖೆಯಿಂದ ಸಹಾಯವಾಣಿ ಸ್ಥಾಪನೆ

|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 30: ಕೋವಿಡ್-19ರ ಎರಡನೇ ಅಲೆಯ ಪ್ರಯುಕ್ತ ಹೇರಲಾಗಿರುವ ಲಾಕ್‌ಡೌನ್ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಕುರಿತು ಕೃಷಿ ಇಲಾಖೆ ವತಿಯಿಂದ ಕೋವಿಡ್-19 ಸಹಾಯವಾಣಿ ಸ್ಥಾಪಿಸಲಾಗಿದೆ.

ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲೆಯ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಚಿತ್ರದುರ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕೋವಿಡ್-19 ಸಹಾಯವಾಣಿ ಆರಂಭಿಸಲಾಗಿದೆ.

ರೈತರು ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ಸಲಹೆ, ಮಾರ್ಗದರ್ಶನ ಪಡೆಯಲು ಮೊಬೈಲ್ ಸಂಖ್ಯೆ 8277931029 ಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

Chitradurga: Establishment Of Helpline From Agriculture Department To Solve Farmers Issues

ಹೆಚ್ಚಿನ ಮಾಹಿತಿಗಾಗಿ ರೈತರು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
The Covid-19 helpline has been set up by the Agriculture Department to solves farmer's issues in Chitradurga district during the lockdown.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X