ಶ್ರೀಗಂಧದ ಸಹವಾಸವೇ ಬೇಡ; ಚಿತ್ರದುರ್ಗ ರೈತನ ಗೋಳಾಟ
ಚಿತ್ರದುರ್ಗ, ನವೆಂಬರ್ 4: ಇತ್ತೀಚಿನ ವರ್ಷಗಳಲ್ಲಿ ಸರ್ಕಾರ, ರೈತರಿಗೆ ಶ್ರೀಗಂಧ ಬೆಳೆಯಲು ಅನುಮತಿ ನೀಡಿದೆ. ಅದಕ್ಕೆ ಸಬ್ಸಿಡಿ ನೀಡಿ ಖರೀದಿಸುತ್ತಿದೆ ಕೂಡ. ಆದರೆ ಇಲ್ಲೊಬ್ಬ ರೈತ ಶ್ರೀಗಂಧವನ್ನು ಬೆಳೆದು ಹೈರಾಣಾಗಿ ಹೋಗಿದ್ದಾರೆ. ಇದರ ಸಹವಾಸವೇ ಸಾಕು ಎನ್ನುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮದ ರೈತ ದಿನೇಶ್ ತಮ್ಮ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆದು ಅದನ್ನು ಕಾಪಾಡಿಕೊಳ್ಳಲು ಸಾಧ್ಯವಾಗದೇ ಕಂಗೆಟ್ಟುಹೋಗಿದ್ದಾರೆ. ಈ ರೈತನ ಗೋಳು ಕೇಳುವವರೇ ಇಲ್ಲದಂತಾಗಿದೆ.
ತಾನು ಕೆಲವು ವರ್ಷಗಳಿಂದ ಬೆಳೆದಿರುವ ಶ್ರೀಗಂಧದ ಮರಗಳಿಗೆ ಕಳ್ಳರು ಕೊಡಲಿ ಹಾಕಿ ಕಳವು ಮಾಡುತ್ತಲೇ ಇದ್ದಾರೆ. ಪದೇ ಪದೇ ಕಳ್ಳತನ ನಡೆಯುತ್ತಲೇ ಇದೆ. ಈ ಕುರಿತು ಪೊಲೀಸ್ ಠಾಣೆಗೆ ಹೋಗಿ ಶ್ರೀಗಂಧದ ಮರಗಳನ್ನು ರಕ್ಷಿಸಿ ಕೊಡಿ ಎಂದು ದೂರು ಕೊಟ್ಟರೆ ಅಲ್ಲಿನ ಪೊಲೀಸರು, ಅರಣ್ಯ ಇಲಾಖೆಗೆ ಹೋಗಿ ಇದು ನಮಗೆ ಬರುವುದಿಲ್ಲ ಎಂದು ಕೈಚೆಲ್ಲಿದ್ದಾರೆ. ಅರಣ್ಯ ಇಲಾಖೆಗೆ ಹೋದರೆ, ಪೊಲೀಸರಿಗೆ ದೂರು ನೀಡಿ ಎಂದು ಅವರೂ ಸಬೂಬು ಹೇಳಿ ಕಳಿಸುತ್ತಿದ್ದಾರೆ ಎಂದು ಬೇಸರ ತೋಡಿಕೊಂಡಿದ್ದಾರೆ.

ಇದರಿಂದ ಕಂಗಾಲಾಗಿ ಹೋಗಿರುವ ದಿನೇಶ್, ಕಷ್ಟಬಿದ್ದು ಶ್ರೀಗಂಧದ ಮರಗಳನ್ನು ಬೆಳೆದು ಕಳ್ಳರ ಪಾಲು ಮಾಡುವಂತಾಗಿದೆ. ಹಾಗಿದ್ದರೆ ನಾವೇಕೆ ಇದನ್ನು ಬೆಳೆಯಬೇಕು? ಅರಣ್ಯ, ಪೊಲೀಸ್ ಇಲಾಖೆ ಬೇಜವಾಬ್ದಾರಿತನದಿಂದ ರೈತರಿಗೆ ಕಷ್ಟ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.
-
ಸೋಷಿಯಲ್ ಮೀಡಿಯಾದಲ್ಲಿ ನಕಲಿ ಖಾತೆ ತೆರೆದು ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಸಂದೇಶ: 473 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ












Click it and Unblock the Notifications