ಹಿಪ್ಪುನೇರಳೆ ತೋಟಕ್ಕೆ ಅಧಿಕಾರಿಗಳ ಭೇಟಿ; ರೇಷ್ಮೆ ಬೆಳೆಗಾರರಿಗೆ ಸಲಹೆ
ಕೊಪ್ಪಳ, ಡಿಸೆಂಬರ್ 11; ಪ್ರಸಕ್ತ ವರ್ಷ ಮಳೆ ಕೊರತೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ವಿವಿಧ ಬೆಳೆಗಳಲ್ಲಿ ಹಲವು ರೋಗಬಾಧೆ ಕಾಣಿಸಿಕೊಂಡಿದೆ. ಇದೇ ಮಾದರಿಯಲ್ಲಿ ರೇಷ್ಮೆ ಹುಳುಗಳು ಜೀವಿತಾವಧಿ ವಿಸ್ತರಣೆಗೊಂಡು ಗೂಡು ಕಟ್ಟದೆ ಸಾಯುತ್ತಿರುವುದನ್ನು ಗಮನಿಸಲಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ಪ್ರಸ್ತುತ ರೇಷ್ಮೆ ಹುಳುಗಳು ಜೀವಿತಾವಧಿಯನ್ನು ಹೆಚ್ಚಿಸಿಕೊಂಡು ಗೂಡು ಕಟ್ಟದೇ ಸಾಯುತ್ತಿರುವುದನ್ನು ಇಲಾಖಾ ಅಧಿಕಾರಿಗಳು/ ಸಿಬ್ಬಂದಿ ರೇಷ್ಮೆ ಗುರುತಿಸಿದ್ದಾರೆ. ಅಲ್ಲದೇ ಬೆಳೆಗಾರರ ಹಿಪ್ಪುನೇರಳೆ ತೋಟಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕ್ರಿಮಿನಾಶಕ ಬಳಕೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಮಳೆ ಕೊರತೆ, ಬಿಸಿಲಿನ ಪ್ರಮಾಣ ಏರಿಳಿತವಾದ ಕಾರಣ ರೇಷ್ಮೆ ಹುಳುಗಳ ಮೇಲೆ ಪರಿಣಾಮ ಬೀರುತ್ತಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೆ ಹಿಪ್ಪುನೇರಳೆ ತೋಟದ ಅಕ್ಕಪಕ್ಕದ ಹೊಲಗಳಲ್ಲಿನ ಬೇರೆ ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಅಥವಾ ಗೊಬ್ಬರ/ ಪೋಷಕಾಂಶಗಳ ಕಣಗಳು ಗಾಳಿಯಲ್ಲಿ ತೇಲಾಡುತ್ತಾ, ಹಿಪ್ಪುನೇರಳೆ ಬೆಳೆ ಮೇಲೆ ಕುಳಿತು, ಇದನ್ನು ರೇಷ್ಮೆ ಹುಳುಗಳು ತಿನ್ನುವುದರಿಂದ ಹುಳುಗಳ ಮೇಲೆ ಅಡ್ಡ ಪರಿಣಾಮ ಉಂಟಾಗುತ್ತಿರಬಹುದೆಂದು ಅಭಿಪ್ರಾಯಪಟ್ಟಿದ್ದಾರೆ.
ರೈತರಿಗೆ ಸಲಹೆಗಳು; ಈ ಸಮಸ್ಯೆಯು ಕಲ್ಯಾಣ ಕರ್ನಾಟಕ ಭಾಗದ ಇತರೆ ಜಿಲ್ಲೆಗಳಲ್ಲಿಯೂ ಅಧಿಕವಾಗಿ ಕಾಣಿಸಿಕೊಂಡಿದೆ. ರಾಜ್ಯದ ರೇಷ್ಮೆ ಸಂಶೋಧನಾ ಅಭಿವೃದ್ಧಿ ಸಂಸ್ಥೆ, ಕೇಂದ್ರ ರೇಷ್ಮೆ ಸಂಸ್ಥೆಗಳ ವಿಜ್ಞಾನಿಗಳ ತಂಡಗಳು ಬೇರೆ ಬೇರೆ ತೋಟಗಳಿಗೆ ಭೇಟಿ ನೀಡಿ ಹುಳುಗಳ ಜೀವಿತಾವಧಿ ವಿಸ್ತರಣೆಗೊಂಡು ಗೂಡು ಕಟ್ಟದೇ ಸಾಯುತ್ತಿರುವ ಕುರಿತು ಅಧ್ಯಯನ ನಡೆಸಿವೆ.
ಹಿಪ್ಪುನೇರಳೆಯಲ್ಲಿ ಪೌಷ್ಠಿಕಾಂಶ ಕೊರತೆ, ಕೀಟಗಳ ನಿರ್ವಹಣೆ, ಜೈವಿಕ ನಿಯಂತ್ರಣಗಳು, ಎಲೆ ಶಿಲೀಂಧ್ರ ರೋಗ, ದುಂಡಾಣು ರೋಗ, ಬೇರು ಕೊಳೆ ರೋಗ, ಮಣ್ಣಿನಿಂದ ಹರಡುವ ರೋಗಗಳ ನಿಯಂತ್ರಣ, ಹಿಪ್ಪುನೇರಳೆ ಕೀಟಗಳ ನಿರ್ವಹಣೆ, ಹಿಪ್ಪುನೇರಳೆ ರೋಗಗಳ ನಿರ್ವಹಣೆ, ರೇಷ್ಮೆ ಹುಳು ಸಾಕಾಣಿಕೆ ಮನೆ/ ಶೆಡ್/ ಹಾಸಿಗೆ ಸೋಂಕು ನಿವಾರಕಗಳ ಬಳಕೆ ಕುರಿತು ಸಿ.ಎಸ್.ಆರ್.ಟಿ.ಐ., ಕೆ.ಎಸ್.ಎಸ್.ಆರ್.ಡಿ.ಐ., ಮತ್ತು ಎ.ಪಿ.ಎಸ್.ಎಸ್.ಆರ್.ಡಿ.ಐ. ಇಲಾಖೆಗಳಿಂದ ಶಿಫಾರಸ್ಸು ಮಾಡಿದ ಸೋಂಕು ನಿವಾರಕ, ಸಸ್ಯ ಸಂವರ್ಧಕ ಹಾಗೂ ಹಾಸಿಗೆ ಸೋಂಕು ನಿವಾರಕಗಳನ್ನೇ ಮಾತ್ರ ರೇಷ್ಮೆ ಬೆಳೆಗಾರರು ಬಳಸಬೇಕು ಎಂದು ಕರೆ ನೀಡಲಾಗಿದೆ.
ಮಾರುಕಟ್ಟೆಗಳಲ್ಲಿ ಸಿಗುವ ಇತರೆ ಯಾವುದೇ ನಕಲಿ ಉತ್ಪನ್ನಗಳನ್ನು ಬಳಸಬಾರದು ಎಂದು ಮನವಿ ಮಾಡಲಾಗಿದೆ. ರೇಷ್ಮೆ ಹುಳುಗಳು ಗೂಡು ಕಟ್ಟುತ್ತಿಲ್ಲದ ಕುರಿತು/ ಇತರೆ ಸಮಸ್ಯೆಗಳ ಕುರಿತು ಹೆಚ್ಚಿನ ಮಾಹಿತಿ ಸಲಹೆ ಸೂಚನೆಗಳನ್ನು ಹತ್ತಿರದ ರೇಷ್ಮೆ ಇಲಾಖೆಯ ಕಾರ್ಯಾಲಯಕ್ಕೆ ಭೇಟಿ ನೀಡಿ ಅಥವಾ ಇಲಾಖೆಯ ಅಧಿಕಾರಿಗಳು/ ಸಿಬ್ಬಂದಿಗಳನ್ನು ಸಂಪರ್ಕಿಸಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications