ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಜಯಮಾಲಾ
ಉಡುಪಿ, ನವೆಂಬರ್. 21:ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಮಹಿಳೆಯ ಕುರಿತು ಮಾತನಾಡಿರುವುದು ನಾನು ಕೇಳಿದ್ದೇನೆ. ಅವರ ಮಾತಿನ ಅರ್ಥ, ಭಾವನೆ ಮಹಿಳೆಯರ ವಿರುದ್ಧ ಇರಲಿಲ್ಲ. ಹೋರಾಟ ಮಾಡಿದ ರೈತ ಮಹಿಳೆಗೆ ಅವಮಾನ ಮಾಡಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಸಿಎಂ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಮಾತನಾಡಿರುವುದನ್ನು ಎಲ್ಲರೂ ಅವರವರ ಭಾವಕ್ಕೆ ತಕ್ಕಂತೆ ಬಿಂಬಿಸುತ್ತಿದ್ದಾರೆ. ಯಾವುದೇ ಗೂಡಾರ್ಥ ಇಟ್ಟುಕೊಂಡು ಸಿಎಂ ಮಾತನಾಡಿಲ್ಲ. ಹೆಣ್ಮಕ್ಕಳನ್ನು ತಾಯಿ ಅಂತಾನೆ ಗೌರವದಿಂದ ಕರಿತಾರೆ ಎಂದು ಹೇಳಿದರು.
ಇನ್ನು ಶಬರಿಮಲೆ ವಿವಾದ ಕುರಿತು ಪ್ರತಿಕ್ರಿಯಿಸಿದ ಅವರು , ಎಲ್ಲರೂ ಅವರ ಆತ್ಮ ಮುಟ್ಟಿಕೊಂಡು ವಿಚಾರ ಮಾಡಲಿ. ಈ ದೇಶ ಎಲ್ಲವನ್ನೂ ಗಮನಿಸುತ್ತಿದೆ ಎನ್ನುವುದನ್ನು ಮರಿಬೇಡಿ. ಅರ್ಧ ಆಕಾಶ, ಅರ್ಧ ಭೂಮಿ ಇದ್ದ ಹಾಗೆ, ಅರ್ಧ ಹೆಣ್ಮಕ್ಕಳಿದ್ದಾರೆ. ದೇವರು ನನ್ನ ನಂಬಿಕೆ. ನನಗೆ ಬದುಕು. ದೇವರನ್ನೇ ಟಾರ್ಗೆಟ್ ಮಾಡುವವರ ಬಗ್ಗೆ ನಾನು ಏನೂ ಹೇಳಲ್ಲ ಎಂದು ಪ್ರತಿಕ್ರಯಿಸಿದರು.

ರಾಜ್ಯೋತ್ಸವ ಪ್ರಶಸ್ತಿಯ ಘನತೆ, ಗೌರವ ಕಡಿಮೆ ಆಗೋಕೆ ನಾನು ಬಿಡಲ್ಲ. ರಾಜ್ಯದ ಪ್ರಶಸ್ತಿ ಪುರಸ್ಕೃತರ ಪಟ್ಟಿ ತಯಾರಿದೆ. ಮುಖ್ಯಮಂತ್ರಿಯವರಿಗೆ ಅಕ್ರೋಬರ್ 30 ಕ್ಕೆ ಪಟ್ಟಿ ಕೊಟ್ಟಿದ್ದೇನೆ. ಚುನಾವಣಾ ನೀತಿ ಸಂಹಿತೆಯಿಂದ ವಿಳಂಬವಾಗಿದೆ ಅಷ್ಟೇ. ರಾಜ್ಯೋತ್ಸವ ಪ್ರಶಸ್ತಿಗೆ ಬಗ್ಗೆ ನವೆಂಬರ್ 29 ಕ್ಕೆ ಸಿಎಂ ಸಭೆ ಕರೆದಿದ್ದಾರೆ. ನವೆಂಬರ್ ಅಂತ್ಯದೊಳಗೆ ಪ್ರಶಸ್ತಿ ಪ್ರಧಾನ ಮಾಡೇ ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.
ರೈತರ ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಏನು ಸಂದಿಗ್ಧತೆ ಇದೆಯೋ ಗೊತ್ತಿಲ್ಲ. ಅವರಿಗೆ ನಾನು ಕೇಳಿ ತಿಳಿಸುತ್ತೇನೆ . ರೈತರ ಸಮಸ್ಯೆ ನಮ್ಮದೇ ಸಮಸ್ಯೆ, ನಾವೆಲ್ಲರೂ ರೈತರೇ. ರೈತರಿಗೆ ಮೊದಲು ಸ್ಪಂದಿಸುವ ಸರ್ಕಾರ ನಮ್ಮದು ಎಂದು ಜಯಮಾಲಾ ಭರವಸೆ ನೀಡಿದರು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications