ಸಾಲ ಮನ್ನಾ ಕುರಿತು ಮಾಧ್ಯಮಗಳಲ್ಲಿ ತಪ್ಪು ಮಾಹಿತಿ: ಸಿಎಂ ಸ್ಪಷ್ಟನೆ

Recommended Video

      ಸಾಲಮನ್ನಾ ಗೊಂದಲಕ್ಕೆ ಸ್ಪಷ್ಟನೆ ಕೊಟ್ಟ ಸಿಎಂ ಕುಮಾರಸ್ವಾಮಿ | Oneindia Kannada

      ಬೆಂಗಳೂರು, ಜೂನ್ 11: ರೈತರ ಸಾಲಮನ್ನಾದ ಕುರಿತು ಕೆಲವು ಮಾಧ್ಯಮಗಳು ತಪ್ಪು ಮಾಹಿತಿಯನ್ನು ಪ್ರಕಟಿಸಿವೆ ಎಂದಿರುವ ಕುಮಾರಸ್ವಾಮಿ ಅವರು ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

      ಯಾದಗಿರಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳು ರೈತರ ಸಾಲಗಳ ವರ್ಗೀಕರಣ ಮಾಡುವಲ್ಲಿ ಆಗಿರುವ ಲೋಪದಿಂದಾಗಿ ಈ ಗೊಂದಲ ಉಂಟಾಗಿದೆ. ಪ್ರತಿ ಸಾಲ ಮನ್ನಾ ನಂತರ ರಾಜ್ಯ ಸರ್ಕಾರ ನಡೆಸುವ ಆಡಿಟ್ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ ಎಂದು ಸಿಎಂ ಟ್ವಿಟ್ಟರ್ ನಲ್ಲಿ ಹೇಳಿದ್ದಾರೆ.

      ಈ ವರೆಗೆ 13988 ರೈತರ ಸಾಲ ಖಾತೆಗಳಲ್ಲಿ ಈ ಗೊಂದಲ ಉಂಟಾಗಿದೆ. ಸ್ಥಳೀಯ ಬ್ಯಾಂಕುಗಳು ತಮ್ಮಿಂದ ಆಗಿರುವ ಲೋಪದ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜೂನ್ 14ರಂದು ಮಧ್ಯಾಹ್ನ 2.30 ಗಂಟೆಗೆ ರಾಜ್ಯ ಮಟ್ಟದ ಬ್ಯಾಂಕರುಗಳ ಸಭೆ ಕರೆಯಲಾಗಿದೆ ಎಂದು ಸಿಎಂ ಹೇಳಿದ್ದಾರೆ.

      CM Kumaraswamy called meeting of Bank officials to discuss loan waive

      ಮಾಧ್ಯಮಗಳಲ್ಲಿ ಸರ್ಕಾರದ ಲೋಪದಿಂದ ಹೀಗಾಗಿದೆ ಎಂದು ವರದಿ ಪ್ರಕಟವಾದ ಹಿನ್ನಲೆಯಲ್ಲಿ ಅದರ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ, ರಾಜ್ಯ ಸರ್ಕಾರದಿಂದ ಈ ಗೊಂದಲ ಉಂಟಾಗಿಲ್ಲ. ಹಾಗೂ ಚುನಾವಣೆಗೂ ಈ ಗೊಂದಲಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

      ಮುಂದುವರೆದು, ಮಾಧ್ಯಮಗಳು ಇಂತಹ ವಿಷಯಗಳನ್ನು ಅಧಿಕೃತ ಮಾಹಿತಿ ಪಡೆದುಕೊಂಡ ನಂತರವೇ ಸತ್ಯಾಸತ್ಯತೆ ಪರಿಶೀಲಿಸಿ ವರದಿ ಮಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+