ರೈತ ಮಹಿಳೆಗೆ ಬೈಗುಳ, ವಿವಾದಕ್ಕೆ ಸ್ಪಷ್ಟನೆ ಕೊಟ್ಟರು ಕುಮಾರಸ್ವಾಮಿ
ಬೆಂಗಳೂರು, ನವೆಂಬರ್ 19: ನಾನು ಪಲಾಯನವಾದಿಯಲ್ಲ, ನಾಳೆ ವಿಧಾನಸೌಧದಲ್ಲಿ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.
ರೈತರ ಪ್ರತಿಭಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವರು, ನಾನು ಆ ರೈತ ಮಹಿಳೆಯ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ, ನಾನು ಮಾತನಾಡಿದ ವಿಡಿಯೋ ಮತ್ತೆ ನೋಡಿ, ನಾನು ಆಕೆಗೆ 'ತಾಯಿ' ಎಂದು ಕರೆದಿದ್ದೇನೆ ಎಂದು ಹೇಳಿದರು.
ಸುದೀರ್ಘವಾಗಿ ಮಾತನಾಡಿದ ಕುಮಾರಸ್ವಾಮಿ ಅವರು, ಮಾಧ್ಯಮಗಳ ಮೇಲೂ ಅಸಮಾಧಾನ ಹೊರಹಾಕಿದರು. ನಾನು ಕೆಟ್ಟ ಉದ್ದೇಶದಿಂದ, ಅಗೌರವ ಮಾಡಬೇಕು ಎಂಬ ಉದ್ದೇಶದಿಂದ ಮಾತನಾಡಿಲ್ಲ, ಆ ಮಹಿಳೆಯನ್ನು 'ತಾಯಿ' ಎಂದು ಕರೆದು ಮಾತನಾಡಿದ್ದೇನೆ ಆದರೆ ನನ್ನ ಮಾತಿಗೆ ಬೇರೆ ಬಣ್ಣ ಬಳಿದು ತೋರಿಸಲಾಗಿದೆ ಎಂದು ಹೇಳಿದರು.
ನಾನು ಬೇಜವಾಬ್ದಾರಿಯ ಮನುಷ್ಯ ಅಲ್ಲ, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ಕೆಲಸ ಮಾಡುತ್ತಿದ್ದೇನೆ, ನಾನು ಯಾರ ಬಳಿಯಿಂದಲೂ ಹೇಳಿಸಿಕೊಂಡು ಕೆಲಸ ಮಾಡುವ ಅವಶ್ಯಕತೆ ಇಲ್ಲ ಎಂದು ಅವರು ಸಿಡಿಮಿಡಿಯಾದರು.

ಸಂಪುಟ ಸಭೆ ಕಾರಣ ಬೆಳಗಾವಿಗೆ ಹೋಗಿಲ್ಲ
ನಾನು ಪಲಾಯನ ಮಾಡುವನಲ್ಲ, ನಾನು ಬೆಳಗಾವಿಗೆ ಹೋಗದೇ ಇರುವುದಕ್ಕೆ ಸಂಪುಟ ಸಭೆ ಕಾರಣ ಅಷ್ಟೆ ಅಲ್ಲದೆ. ನಾನು ರೈತ ಮುಖಂಡರಿಗೆ ಇಲ್ಲಿಗೆ ಬರಲು ವ್ಯವಸ್ಥೆ ಮಾಡಿದ್ದೇನೆ. ನಾನು ಪಲಾಯನ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡರು.

ರೈತರ ಮೇಲೆ ಕ್ರಮ ಇಲ್ಲ
ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ. ನಾವು ಸಹ ಪ್ರತಿಭಟನಾನಿರತ ರೈತರ ಮೇಲೆ ಕ್ರಮ ಕೈಗೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದೆವು ಎಂದ ಕುಮಾರಸ್ವಾಮಿ, ನಿನ್ನೆ ಬೆಳಗಾವಿ ಸುವರ್ಣಸೌಧದ ಗೇಟ್ ಬಾಗಿಲು ಒಡೆಯುವ ಕಾರ್ಯ ಮಾಡಿದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಂಪುಟ ಸಭೆಯಲ್ಲಿ 48 ಯೋಜನೆಗಳಿಗೆ ಅಸ್ತು
ಸಂಪುಟ ಸಭೆಯಲ್ಲಿ 48 ಯೋಜನೆಗಳ ಬಗ್ಗೆ ಚರ್ಚೆ ಮಾಡಿ ಅನುಮೋದನೆ ಪಡೆದಿದ್ದೇವೆ. ನಾನು ಬೆಳಗಾವಿಗೆ ಹೋಗಿ ರೈತರನ್ನು ಭೇಟಿ ಆಗದೇ ಇದ್ದುದ್ದಕ್ಕೆ ಇದೇ ಕಾರಣ. ಬೆಳಗಾವಿಗೆ ಹೋಗಲಾಗದ ಕಾರಣ ಅವರನ್ನು ಇಲ್ಲಿಗೆ ಬರಲು ಹೇಳಿದ್ದೇನೆ ಎಂದು ಅವರು ಹೇಳಿದರು.

ಮನವಿ ಮಾಡಿದ್ದರೂ ಪ್ರತಿಭಟನೆ ಮಾಡಿದ್ದಾರೆ
ನಾನು ಮೊನ್ನೆಯೇ ರೈತ ಮುಖಂಡರೊಡನೆ ದೂರವಾಣಿ ಮೂಲಕ ಮಾತನಾಡಿ ಮನವಿ ಮಾಡಿದ್ದೇನೆ, ಆದರೂ ಸಹ ಕೆಲವರು ಪ್ರತಿಭಟನೆ ಮಾಡಿದ್ದಾರೆ. ನನ್ನ ಪ್ರತಿಕೃತಿಗೆ ಕೊಡಲಿಯಿಂದ ಹೊಡೆದಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾಳೆ ರೈತ ಮುಖಂಡರ ಜೊತೆ ನೇರವಾಗಿ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದರು.

ಯಡಿಯೂರಪ್ಪ ಮಾತಿಗೆ ಗರಂ
ತಮ್ಮ ವಿರುದ್ಧ ಆರೋಪಗಳನ್ನು ಮಾಡಿದ ಬಿಜೆಪಿಯವರ ಮೇಲೆ ವಿಶೇಷವಾಗಿ ಯಡಿಯೂರಪ್ಪ ಅವರ ಮೇಲೆ ಹರಿಹಾಯ್ದ ಸಿಎಂ, ಗೊಬ್ಬರ ಕೇಳಿದ ರೈತನಿಗೆ ಗುಂಡು ಹೊಡೆಸಿದ ಸರ್ಕಾರ ನಿಮ್ಮದು, ನೀವು ರೈತರ ಕಾಳಜಿ ಬಗ್ಗೆ ದೇವೇಗೌಡ, ಕುಮಾರಸ್ವಾಮಿ, ರೇವಣ್ಣಗೆ ಪಾಠ ಮಾಡುತ್ತೀರಾ ಎಂದು ಪ್ರಶ್ನೆ ಕೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications