ಸಾಲಮನ್ನಾ ತಡವಾಗುತ್ತಿರುವುದಕ್ಕೆ ಕಾರಣ ಕೊಟ್ಟ ಕುಮಾರಸ್ವಾಮಿ
ಯಾದಗಿರಿ, ಜೂನ್ 21: ಕುಮಾರಸ್ವಾಮಿ ಅವರ ಮಹಾತ್ವಾಕಾಂಕ್ಷೆಯ ಯೋಜನೆ ಸಾಲಮನ್ನಾ ವು ಬಹು ತ್ರಾಸದಾಯಕ ಆದಂತೆ ಗೋಚರವಾಗುತ್ತಿದೆ.
ಈಗಾಗಲೇ ಹಲವು ಲಕ್ಷ ರೈತರ ಸಾಲಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಲೆಕ್ಕಾ ಕೊಟ್ಟಿದ್ದಾರೆ. ಆದರೂ ಸಹ ಸಾಲಮನ್ನಾ ಯೋಜನೆ ನಿರೀಕ್ಷಿತ ವೇಗದಲ್ಲಿ ಆಗುತ್ತಿಲ್ಲ ಎಂಬ ದೂರು ಎಲ್ಲ ಕಡೆಯೂ ಕೇಳಿ ಬರುತ್ತಿದೆ. ಈ ದೂರಿಗೆ ಕುಮಾರಸ್ವಾಮಿ ಅವರು ಇಂದು ಕಾರಣ ನೀಡಿದ್ದಾರೆ.
ಡಿಸಿಸಿ ಮತ್ತು ಅಪೆಕ್ಸ್ ಬ್ಯಾಂಕ್ ನಡುವಿನ ಕಿತ್ತಾಟದಿಂದಾಗಿ ಸರ್ಕಾರ ಬಿಡುಗಡೆ ಮಾಡಿರುವ ಹಣ ರೈತರನ್ನು ತಲುಪುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಇಂದು ಹೇಳಿದ್ದಾರೆ.
ಯಾದಗಿರಿಯ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ನವರು ಅಪೆಕ್ಸ್ ಬ್ಯಾಂಕಿಗೆ ಸಾಲ ಬಾಕಿ ಇದ್ದರು, ಸರ್ಕಾರವು ಸಾಲಮನ್ನಾಕ್ಕಾಗಿ ನೀಡಿದ ಹಣವನ್ನು ಅಪೆಕ್ಸ್ ಬ್ಯಾಂಕ್ ತೆಗೆದುಕೊಂಡಿದೆ. ಹೀಗಾಗಿಗಿ ಡಿಸಿಸಿ ಬ್ಯಾಂಕ್ನಲ್ಲಿನ ರೈತರ ಸಾಲಮನ್ನಾ ಆಗಿಲ್ಲ ಎಂದು ಅವರು ಮಾಹಿತಿ ನೀಡಿದರು.

ಹೆಚ್ಚುವರಿ 100 ಕೋಟಿ ಬಿಡುಗಡೆ ಮಾಡಿದ್ದೇವೆ: ಸಿಎಂ
ಡಿಸಿಸಿ ಬ್ಯಾಂಕ್ನ ತಪ್ಪಿನಿಂದಾಗಿ ರೈತರಿಗೆ ಸಮಸ್ಯೆ ಆಗುತ್ತಿದೆ. ರೈತರಿಗೆ ಸಾಲಮನ್ನಾ ಆಗದೆ, ಹೊಸ ಸಾಲವೂ ಸಿಕ್ಕದೆ ಸಮಸ್ಯೆ ಆಗುತ್ತಿದೆ. ಮುಂಗಾರು ಸನಿಹದಲ್ಲಿದ್ದು, ಬಿತ್ತನೆ ಮಾಡಲು ಸಾಲದ ಅವಶ್ಯಕತೆ ಇದೆ. ಹಾಗಾಗಿ ಸರ್ಕಾರವೇ ಹೆಚ್ಚುವರಿ 100 ಕೋಟಿ ಹಣ ನೀಡಿ ಸಾಲ ದೊರಕುವಂತೆ ಕ್ರಮ ಕೈಗೊಂಡಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

'ಬ್ಯಾಂಕ್ ಸಮಸ್ಯೆಯನ್ನು ಸರ್ಕಾರ ಬಗೆಹರಿಸಲಿದೆ'
ಬ್ಯಾಂಕ್ಗಳ ಸಮಸ್ಯೆಯನ್ನು ಸರ್ಕಾರವೇ ಆದಷ್ಟು ಶೀಘ್ರವಾಗಿ ಬಗೆಹರಿಸಲಿದ್ದು, ಸಾಲಮನ್ನಾವು ಸುಗಮವಾಗಿ ಆಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಎಚ್ಡಿಕೆಯ ಮಹತ್ವಾಕಾಂಕ್ಷೆಯ ಸಾಲಮನ್ನಾ ಯೋಜನೆ
ರೈತರ ಸಾಲಮನ್ನಾ ಯೋಜನೆಯು ಕುಮಾರಸ್ವಾಮಿ ಅವರ ಬಹು ಮಹತ್ತರವಾದ ಯೋಜನೆ ಆಗಿದ್ದು, ಹಲವು ವಿರೋಧಾಬಾಸಗಳ ನಂತರ ಸಾಲಮನ್ನಾವನ್ನು ಜಾರಿಗೊಳಿಸಲಾಯಿತು. ಆದರೆ ಅದಕ್ಕೆ ಪ್ರಾರಂಭದಿಂದಲೂ ಕೆಲವು ವಿಘ್ನಗಳು ಎದುರಾಗುತ್ತಲೇ ಇವೆ.

ಬ್ಯಾಂಕ್ ಅಧಿಕಾರಿಗಳ ಸಭೆ ಕರೆದಿದ್ದ ಸಿಎಂ
ಕೆಲವು ದಿನಗಳ ಹಿಂದಷ್ಟೆ ಕುಮಾರಸ್ವಾಮಿ ಅವರು ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಮಾತುಕತೆ ನಡೆಸಿದ್ದು, ರೈತರ ಬಗ್ಗೆ ಕನಿಕರದಿಂದ ವ್ಯವಹರಿಸುವಂತೆ ಮನವಿ ಮಾಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications