ಸಾಲಮನ್ನಾ ತಡವಾಗುತ್ತಿರುವುದಕ್ಕೆ ಕಾರಣ ಕೊಟ್ಟ ಕುಮಾರಸ್ವಾಮಿ
ಯಾದಗಿರಿ, ಜೂನ್ 21: ಕುಮಾರಸ್ವಾಮಿ ಅವರ ಮಹಾತ್ವಾಕಾಂಕ್ಷೆಯ ಯೋಜನೆ ಸಾಲಮನ್ನಾ ವು ಬಹು ತ್ರಾಸದಾಯಕ ಆದಂತೆ ಗೋಚರವಾಗುತ್ತಿದೆ.
ಈಗಾಗಲೇ ಹಲವು ಲಕ್ಷ ರೈತರ ಸಾಲಮನ್ನಾ ಮಾಡಿದ್ದೇವೆ ಎಂದು ಕುಮಾರಸ್ವಾಮಿ ಅವರು ಲೆಕ್ಕಾ ಕೊಟ್ಟಿದ್ದಾರೆ. ಆದರೂ ಸಹ ಸಾಲಮನ್ನಾ ಯೋಜನೆ ನಿರೀಕ್ಷಿತ ವೇಗದಲ್ಲಿ ಆಗುತ್ತಿಲ್ಲ ಎಂಬ ದೂರು ಎಲ್ಲ ಕಡೆಯೂ ಕೇಳಿ ಬರುತ್ತಿದೆ. ಈ ದೂರಿಗೆ ಕುಮಾರಸ್ವಾಮಿ ಅವರು ಇಂದು ಕಾರಣ ನೀಡಿದ್ದಾರೆ.
ಡಿಸಿಸಿ ಮತ್ತು ಅಪೆಕ್ಸ್ ಬ್ಯಾಂಕ್ ನಡುವಿನ ಕಿತ್ತಾಟದಿಂದಾಗಿ ಸರ್ಕಾರ ಬಿಡುಗಡೆ ಮಾಡಿರುವ ಹಣ ರೈತರನ್ನು ತಲುಪುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಇಂದು ಹೇಳಿದ್ದಾರೆ.
ಯಾದಗಿರಿಯ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕ್ ನವರು ಅಪೆಕ್ಸ್ ಬ್ಯಾಂಕಿಗೆ ಸಾಲ ಬಾಕಿ ಇದ್ದರು, ಸರ್ಕಾರವು ಸಾಲಮನ್ನಾಕ್ಕಾಗಿ ನೀಡಿದ ಹಣವನ್ನು ಅಪೆಕ್ಸ್ ಬ್ಯಾಂಕ್ ತೆಗೆದುಕೊಂಡಿದೆ. ಹೀಗಾಗಿಗಿ ಡಿಸಿಸಿ ಬ್ಯಾಂಕ್ನಲ್ಲಿನ ರೈತರ ಸಾಲಮನ್ನಾ ಆಗಿಲ್ಲ ಎಂದು ಅವರು ಮಾಹಿತಿ ನೀಡಿದರು.

ಹೆಚ್ಚುವರಿ 100 ಕೋಟಿ ಬಿಡುಗಡೆ ಮಾಡಿದ್ದೇವೆ: ಸಿಎಂ
ಡಿಸಿಸಿ ಬ್ಯಾಂಕ್ನ ತಪ್ಪಿನಿಂದಾಗಿ ರೈತರಿಗೆ ಸಮಸ್ಯೆ ಆಗುತ್ತಿದೆ. ರೈತರಿಗೆ ಸಾಲಮನ್ನಾ ಆಗದೆ, ಹೊಸ ಸಾಲವೂ ಸಿಕ್ಕದೆ ಸಮಸ್ಯೆ ಆಗುತ್ತಿದೆ. ಮುಂಗಾರು ಸನಿಹದಲ್ಲಿದ್ದು, ಬಿತ್ತನೆ ಮಾಡಲು ಸಾಲದ ಅವಶ್ಯಕತೆ ಇದೆ. ಹಾಗಾಗಿ ಸರ್ಕಾರವೇ ಹೆಚ್ಚುವರಿ 100 ಕೋಟಿ ಹಣ ನೀಡಿ ಸಾಲ ದೊರಕುವಂತೆ ಕ್ರಮ ಕೈಗೊಂಡಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದರು.

'ಬ್ಯಾಂಕ್ ಸಮಸ್ಯೆಯನ್ನು ಸರ್ಕಾರ ಬಗೆಹರಿಸಲಿದೆ'
ಬ್ಯಾಂಕ್ಗಳ ಸಮಸ್ಯೆಯನ್ನು ಸರ್ಕಾರವೇ ಆದಷ್ಟು ಶೀಘ್ರವಾಗಿ ಬಗೆಹರಿಸಲಿದ್ದು, ಸಾಲಮನ್ನಾವು ಸುಗಮವಾಗಿ ಆಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಎಚ್ಡಿಕೆಯ ಮಹತ್ವಾಕಾಂಕ್ಷೆಯ ಸಾಲಮನ್ನಾ ಯೋಜನೆ
ರೈತರ ಸಾಲಮನ್ನಾ ಯೋಜನೆಯು ಕುಮಾರಸ್ವಾಮಿ ಅವರ ಬಹು ಮಹತ್ತರವಾದ ಯೋಜನೆ ಆಗಿದ್ದು, ಹಲವು ವಿರೋಧಾಬಾಸಗಳ ನಂತರ ಸಾಲಮನ್ನಾವನ್ನು ಜಾರಿಗೊಳಿಸಲಾಯಿತು. ಆದರೆ ಅದಕ್ಕೆ ಪ್ರಾರಂಭದಿಂದಲೂ ಕೆಲವು ವಿಘ್ನಗಳು ಎದುರಾಗುತ್ತಲೇ ಇವೆ.

ಬ್ಯಾಂಕ್ ಅಧಿಕಾರಿಗಳ ಸಭೆ ಕರೆದಿದ್ದ ಸಿಎಂ
ಕೆಲವು ದಿನಗಳ ಹಿಂದಷ್ಟೆ ಕುಮಾರಸ್ವಾಮಿ ಅವರು ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಮಾತುಕತೆ ನಡೆಸಿದ್ದು, ರೈತರ ಬಗ್ಗೆ ಕನಿಕರದಿಂದ ವ್ಯವಹರಿಸುವಂತೆ ಮನವಿ ಮಾಡಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications