ಬಡವರ ಬಂಧು ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾವುಕ ಮಾತು
ಬೆಂಗಳೂರು, ನವೆಂಬರ್ 22: ಕೆಲವು ದಿನಗಳಿಂದ ತಮ್ಮ ವಿರುದ್ಧ ಪ್ರಕಟವಾದ ಆಕ್ರೋಶ ಹಾಗೂ ತಮ್ಮ ಮಾತಿನಿಂದ ಎದುರಿಸಬೇಕಾಗಿ ಬಂದ ಪ್ರತಿಭಟನೆಯಿಂದ ಮನನೊಂದು ಇಂದುಯಾ ಕುಮಾರಸ್ವಾಮಿ ಅವರು ಮತ್ತೆ ಭಾವುಕರಾಗಿ ಮಾತನಾಡಿದರು.
ಬಡವರ ಬಂಧು ಕಾರ್ಯಕ್ರಮ ಉದ್ಘಾಟನೆ ವೇಳೆ ಮಾತನಾಡಿದ ಕುಮಾರಸ್ವಾಮಿ ಅವರು, ನಾನು ಏನೇ ಮಾಡಿದರೂ ಹಳದಿ ಕಣ್ಣಿನಿಂದಲೇ ನೋಡಲಾಗುತ್ತಿದೆ. ನಾನು ಏನೂ ಮಾಡುವುದು, ಮಾತನಾಡುವುದು ತಪ್ಪಾ? ಎಂದು ಪ್ರಶ್ನೆ ಮಾಡಿದರು.
ಯಾರ್ಯಾರು ನಮ್ಮನ್ನು ಹೇಗೆಲ್ಲಾ ಬಳಸಿಕೊಂಡಿದ್ದಾರೆ ಎಂಬುದು ನನಗೆ ಗೊತ್ತಿದೆ, ಅದರ ಬಗ್ಗೆ ಬಹಿರಂಗ ಚರ್ಚೆಗೂ ನಾನು ಸಿದ್ಧವಿದ್ದೇನೆ ಎಂದ ಅವರು, ಪರೋಕ್ಷವಾಗಿ ಯಡಿಯೂರಪ್ಪ ಹೇಳಿದ್ದ ಅಧಿಕಾರಕ್ಕಾಗಿ ಮನೆ ಬಾಗಿಲಿಗೆ ಬಂದಿದ್ದರು ಹೇಳಿಕೆಗೆ ಎದುರು ಪ್ರತಿಕ್ರಿಯೆ ನೀಡಿದರು.
ಎಷ್ಟು ಕಾಲ ಅಧಿಕಾರದಲ್ಲಿ ಇರುತ್ತೇನೆಯೋ ಗೊತ್ತಿಲ್ಲಾ, ಗೂಟಾ ಹೊಡೆದುಕೊಂಡು ಇರಲು ನಾನು ಬಂದಿಲ್ಲ ಮತ್ತು ಈ ಪದವಿ ಶಾಶ್ವತ ಎಂದೇನೂ ನಾನು ತಿಳಿದುಕೊಂಡಿಲ್ಲ. ಆದರೆ ಸಿಕ್ಕ ಅವಕಾಶದಲ್ಲಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುವ ಕಾರ್ಯ ಮಾಡುತ್ತಿದ್ದೇನೆ ಎಂದು ಅವರು ಭಾವುಕರಾಗಿ ನುಡಿದರು.

ಹಣೆಬರಹ ಇದ್ದಂತೆ ಆಗುತ್ತದೆ
ನನ್ನ ಹಣೆಯ ಬರಹದಲ್ಲಿ ಎಷ್ಟು ದಿನ ಅಧಿಕಾರದಲ್ಲಿ ಇರಬೇಕು ಎಂದು ಬರೆದಿದೆಯೋ ಅಷ್ಟು ದಿನ ಇರುತ್ತೇನೆ ಆದರೆ ಬದುಕಿರುವವರೆಗೂ ರೈತರಿಗಾಗಿ ದುಡಿಯುತ್ತೇನೆ ಉಸಿರು ಇರುವವರೆಗೆ ರೈತರ ಶ್ರೇಯೋಭಿವೃದ್ಧಿಗಾಗಿ ಹೋರಾಡುತ್ತೇನೆ ಎಂದು ಸಿಎಂ ಹೇಳಿದರು.

ಪತ್ರಿಕಾಗೋಷ್ಠಿಗಳಲ್ಲಿ ಮಾತನಾಡಲ್ಲ
ನಾನು ಮಾತನಾಡುವ ಮಾತನ್ನು ತಿರುಚಿ ಅಥವಾ ವೈಭವೀಕರಿಸಿ ತೋರಿಸಲಾಗುತ್ತಿದೆ. ಹಾಗಾಗಿ ಇನ್ನು ಮುಂದೆ ನಾನು ಸುದ್ದಿಗೋಷ್ಠಿಗಳಲ್ಲಿ ಮಾತನಾಡುವುದೇ ಇಲ್ಲ. ಇನ್ನು ಮುಂದೆ ಏನಿದ್ದರೂ ಸಮಾವೇಶಗಳ ವೇದಿಕೆಗಳಲ್ಲಿ ಅಷ್ಟೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ವಿಲನ್ನಂತೆ ಬಿಂಬಿಸಲಾಗುತ್ತಿದೆ
ಕಬ್ಬು ಬೆಳೆಗಾರರ ವಿಚಾರದಲ್ಲಿ ನನ್ನನ್ನು ವಿಲನ್ ನಂತೆ ಬಿಂಬಿಸಲಾಗುತ್ತಿದೆ. ನಾನು ಆದರೆ ಅಧಿಕಾರಕ್ಕೆ ಬಂದಿರುವುದು ಈಗ ಕಬ್ಬು ಬೆಳೆಗಾರರ ಬಾಕಿ ಈಗಿನದ್ದಲ್ಲ ಬಹಳ ಹಳೆಯದ್ದು ಆದರೂ ನಾನು ಹಗಲು ರಾತ್ರಿ ಒಂದು ಮಾಡಿ, ಸಭೆಗಳನ್ನು ಮಾಡಿ ಬೆಳೆಗಾರರ ಸಮಸ್ಯೆ ಬಗೆಹರಿಸಲು ಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿಯವರು ಅಧಿವೇಶನಕ್ಕೆ ಬರಲಿ
ಬಿಜೆಪಿಯವರು ನನ್ನ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಬುರುಡೆ ಬಿಡುತ್ತಿದ್ದಾನೆ ಎನ್ನುತ್ತಿದ್ದಾರೆ. ಆದರೆ ನನ್ನ ಬಳಿ ನಾನು ಮಾಡಿದ ಕೆಲಸಗಳಿಗೆ ದಾಖಲೆಗಳಿವೆ. ಬೆಳಗಾವಿ ಅಧಿವೇಶನಕ್ಕೆ ಬರಲಿ ಅವರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications