ಬಡವರ ಬಂಧು ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಭಾವುಕ ಮಾತು
ಬೆಂಗಳೂರು, ನವೆಂಬರ್ 22: ಕೆಲವು ದಿನಗಳಿಂದ ತಮ್ಮ ವಿರುದ್ಧ ಪ್ರಕಟವಾದ ಆಕ್ರೋಶ ಹಾಗೂ ತಮ್ಮ ಮಾತಿನಿಂದ ಎದುರಿಸಬೇಕಾಗಿ ಬಂದ ಪ್ರತಿಭಟನೆಯಿಂದ ಮನನೊಂದು ಇಂದುಯಾ ಕುಮಾರಸ್ವಾಮಿ ಅವರು ಮತ್ತೆ ಭಾವುಕರಾಗಿ ಮಾತನಾಡಿದರು.
ಬಡವರ ಬಂಧು ಕಾರ್ಯಕ್ರಮ ಉದ್ಘಾಟನೆ ವೇಳೆ ಮಾತನಾಡಿದ ಕುಮಾರಸ್ವಾಮಿ ಅವರು, ನಾನು ಏನೇ ಮಾಡಿದರೂ ಹಳದಿ ಕಣ್ಣಿನಿಂದಲೇ ನೋಡಲಾಗುತ್ತಿದೆ. ನಾನು ಏನೂ ಮಾಡುವುದು, ಮಾತನಾಡುವುದು ತಪ್ಪಾ? ಎಂದು ಪ್ರಶ್ನೆ ಮಾಡಿದರು.
ಯಾರ್ಯಾರು ನಮ್ಮನ್ನು ಹೇಗೆಲ್ಲಾ ಬಳಸಿಕೊಂಡಿದ್ದಾರೆ ಎಂಬುದು ನನಗೆ ಗೊತ್ತಿದೆ, ಅದರ ಬಗ್ಗೆ ಬಹಿರಂಗ ಚರ್ಚೆಗೂ ನಾನು ಸಿದ್ಧವಿದ್ದೇನೆ ಎಂದ ಅವರು, ಪರೋಕ್ಷವಾಗಿ ಯಡಿಯೂರಪ್ಪ ಹೇಳಿದ್ದ ಅಧಿಕಾರಕ್ಕಾಗಿ ಮನೆ ಬಾಗಿಲಿಗೆ ಬಂದಿದ್ದರು ಹೇಳಿಕೆಗೆ ಎದುರು ಪ್ರತಿಕ್ರಿಯೆ ನೀಡಿದರು.
ಎಷ್ಟು ಕಾಲ ಅಧಿಕಾರದಲ್ಲಿ ಇರುತ್ತೇನೆಯೋ ಗೊತ್ತಿಲ್ಲಾ, ಗೂಟಾ ಹೊಡೆದುಕೊಂಡು ಇರಲು ನಾನು ಬಂದಿಲ್ಲ ಮತ್ತು ಈ ಪದವಿ ಶಾಶ್ವತ ಎಂದೇನೂ ನಾನು ತಿಳಿದುಕೊಂಡಿಲ್ಲ. ಆದರೆ ಸಿಕ್ಕ ಅವಕಾಶದಲ್ಲಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುವ ಕಾರ್ಯ ಮಾಡುತ್ತಿದ್ದೇನೆ ಎಂದು ಅವರು ಭಾವುಕರಾಗಿ ನುಡಿದರು.

ಹಣೆಬರಹ ಇದ್ದಂತೆ ಆಗುತ್ತದೆ
ನನ್ನ ಹಣೆಯ ಬರಹದಲ್ಲಿ ಎಷ್ಟು ದಿನ ಅಧಿಕಾರದಲ್ಲಿ ಇರಬೇಕು ಎಂದು ಬರೆದಿದೆಯೋ ಅಷ್ಟು ದಿನ ಇರುತ್ತೇನೆ ಆದರೆ ಬದುಕಿರುವವರೆಗೂ ರೈತರಿಗಾಗಿ ದುಡಿಯುತ್ತೇನೆ ಉಸಿರು ಇರುವವರೆಗೆ ರೈತರ ಶ್ರೇಯೋಭಿವೃದ್ಧಿಗಾಗಿ ಹೋರಾಡುತ್ತೇನೆ ಎಂದು ಸಿಎಂ ಹೇಳಿದರು.

ಪತ್ರಿಕಾಗೋಷ್ಠಿಗಳಲ್ಲಿ ಮಾತನಾಡಲ್ಲ
ನಾನು ಮಾತನಾಡುವ ಮಾತನ್ನು ತಿರುಚಿ ಅಥವಾ ವೈಭವೀಕರಿಸಿ ತೋರಿಸಲಾಗುತ್ತಿದೆ. ಹಾಗಾಗಿ ಇನ್ನು ಮುಂದೆ ನಾನು ಸುದ್ದಿಗೋಷ್ಠಿಗಳಲ್ಲಿ ಮಾತನಾಡುವುದೇ ಇಲ್ಲ. ಇನ್ನು ಮುಂದೆ ಏನಿದ್ದರೂ ಸಮಾವೇಶಗಳ ವೇದಿಕೆಗಳಲ್ಲಿ ಅಷ್ಟೆ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ವಿಲನ್ನಂತೆ ಬಿಂಬಿಸಲಾಗುತ್ತಿದೆ
ಕಬ್ಬು ಬೆಳೆಗಾರರ ವಿಚಾರದಲ್ಲಿ ನನ್ನನ್ನು ವಿಲನ್ ನಂತೆ ಬಿಂಬಿಸಲಾಗುತ್ತಿದೆ. ನಾನು ಆದರೆ ಅಧಿಕಾರಕ್ಕೆ ಬಂದಿರುವುದು ಈಗ ಕಬ್ಬು ಬೆಳೆಗಾರರ ಬಾಕಿ ಈಗಿನದ್ದಲ್ಲ ಬಹಳ ಹಳೆಯದ್ದು ಆದರೂ ನಾನು ಹಗಲು ರಾತ್ರಿ ಒಂದು ಮಾಡಿ, ಸಭೆಗಳನ್ನು ಮಾಡಿ ಬೆಳೆಗಾರರ ಸಮಸ್ಯೆ ಬಗೆಹರಿಸಲು ಯತ್ನಿಸುತ್ತಿದ್ದೇನೆ ಎಂದು ಅವರು ಹೇಳಿದರು.

ಬಿಜೆಪಿಯವರು ಅಧಿವೇಶನಕ್ಕೆ ಬರಲಿ
ಬಿಜೆಪಿಯವರು ನನ್ನ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಬುರುಡೆ ಬಿಡುತ್ತಿದ್ದಾನೆ ಎನ್ನುತ್ತಿದ್ದಾರೆ. ಆದರೆ ನನ್ನ ಬಳಿ ನಾನು ಮಾಡಿದ ಕೆಲಸಗಳಿಗೆ ದಾಖಲೆಗಳಿವೆ. ಬೆಳಗಾವಿ ಅಧಿವೇಶನಕ್ಕೆ ಬರಲಿ ಅವರ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications